ಚಂಡೀಗಡ: ಪಂಜಾಬ್ನ ಮಾಜಿ ಸಚಿವ ಬಿಕ್ರಂ ಸಿಂಗ್ ಮಜಿತಿಯಾ ಬಳಿ ದೆಹಲಿ ಮುಖ್ಯಮಂತ್ರಿ, ಎಎಪಿ ವರಿಷ್ಠ ಅರವಿಂದ ಕೇಜ್ರಿವಾಲ್ ಕ್ಷಮೆ ಕೇಳಿದ ಬೆನ್ನಲೇ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸಂಸದರಾದ ಭಗವಂತ್ ಮಾನ್ ರಾಜೀನಾಮೆ ನೀಡಿದ್ದಾರೆ.
ಕೇಜ್ರಿವಾಲ್ ಅವರು ಸಚಿವರ ಬಳಿ ಕ್ಷಮೆ ಕೇಳಿರುವುದರಿಂದ ಅಸಮಾಧಾನಗೊಂಡು ಮಾನ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ.
‘ಎಎಪಿಯ ಪಂಜಾಬ್ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಆದರೆ ಆಮ್ ಆದ್ಮಿಯಾಗಿ ಮುಂದುವರಿಯಲಿದ್ದು, ಮಾದಕವಸ್ತು ದಂಧೆ ಮತ್ತು ಎಲ್ಲ ರೀತಿಯ ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರಿಸಲಿದ್ದೇನೆ’ ಎಂದು ಮಾನ್ ಟ್ವೀಟ್ ಮಾಡಿದ್ದಾರೆ.
ਮੈਂ ਆਮ ਆਦਮੀ ਪਾਰਟੀ ਪੰਜਾਬ ਦੀ ਪ੍ਰਧਾਨਗੀ ਦੇ ਅਹੁਦੇ ਤੋਂ ਅਸਤੀਫ਼ਾ ਦੇ ਰਿਹਾ ਹਾਂ ..
I m resigning as a president of AAP Punjab ...but my fight against drug mafia and all kind of corruption in Punjab will continue as an “Aam Aadmi “ of Punjab