<p><strong>ನವದೆಹಲಿ: </strong>ಸುಮಾರು 22 ವರ್ಷ ಹಳೆಯದಾದ ಎನ್ರಾನ್–ದಾಭೋಲ್ ವಿದ್ಯುತ್ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣವನ್ನು ಸುಪ್ರೀಂ ಕೋರ್ಟ್ ಗುರುವಾರ ಅಂತ್ಯಗೊಳಿಸಿದೆ.</p>.<p>ಕೆಲವು ಕಾರ್ಪೋರೇಟ್ ಸಂಸ್ಥೆಗಳು ಸೇರಿದಂತೆ ರಾಜಕಾರಣಿಗಳು, ಅಧಿಕಾರಿಗಳು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಪ್ರಕರಣದಲ್ಲಿ ವಿಪರೀತ ವಿಳಂಬವಾದ ಕಾರಣ ನ್ಯಾಯಾಲಯ ಈ ಕ್ರಮಕೈಗೊಂಡಿದೆ.</p>.<p>ಈ ಪ್ರಕರಣವನ್ನು ಮುಕ್ತಾಯಗೊಳಿಸುವಂತೆ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಮತ್ತು ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ ಮತ್ತು ಸಂಜೀವ್ ಖನ್ನಾ ಅವರನ್ನೊಳಗೊಂಡ ಪೀಠವು ಒಪ್ಪಿಕೊಂಡಿದೆ.</p>.<p>ಅಮೆರಿಕದ ಎನ್ರಾನ್ ಕಂಪನಿ ಮತ್ತು ದಾಭೋಲ್ ವಿದ್ಯುತ್ ಕಾರ್ಪೋರೇಷನ್ 1996ರಲ್ಲಿ ಮಹಾರಾಷ್ಟ್ರದಲ್ಲಿ 3 ಶತಕೋಟಿ ಡಾಲರ್ (₹20,700 ಕೋಟಿ) ವೆಚ್ಚದಲ್ಲಿ ಬೃಹತ್ ವಿದ್ಯುತ್ ಯೋಜನೆಯನ್ನು ಕೈಗೊಂಡಿದ್ದವು. ಇದಕ್ಕಾಗಿ ಮಹಾರಾಷ್ಟ್ರ ರಾಜ್ಯ ವಿದ್ಯುತ್ ಮಂಡಳಿ ಜತೆ ವಿದ್ಯುತ್ ಖರೀದಿ ಒಪ್ಪಂದ ಮಾಡಿಕೊಳ್ಳಲಾಗಿತ್ತು.</p>.<p>ವಿದ್ಯುತ್ ಖರೀದಿ ಒಪ್ಪಂದ ಪ್ರಶ್ನಿಸಿ ಸೆಂಟರ್ ಫಾರ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಎತ್ತಿ ಹಿಡಿದಿತ್ತು. ಬಳಿಕ, ಹೈಕೋರ್ಟ್ ತೀರ್ಪು ಪ್ರಶ್ನಿಸಿ 1997ರಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಅಂಗೀಕರಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಸುಮಾರು 22 ವರ್ಷ ಹಳೆಯದಾದ ಎನ್ರಾನ್–ದಾಭೋಲ್ ವಿದ್ಯುತ್ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣವನ್ನು ಸುಪ್ರೀಂ ಕೋರ್ಟ್ ಗುರುವಾರ ಅಂತ್ಯಗೊಳಿಸಿದೆ.</p>.<p>ಕೆಲವು ಕಾರ್ಪೋರೇಟ್ ಸಂಸ್ಥೆಗಳು ಸೇರಿದಂತೆ ರಾಜಕಾರಣಿಗಳು, ಅಧಿಕಾರಿಗಳು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಪ್ರಕರಣದಲ್ಲಿ ವಿಪರೀತ ವಿಳಂಬವಾದ ಕಾರಣ ನ್ಯಾಯಾಲಯ ಈ ಕ್ರಮಕೈಗೊಂಡಿದೆ.</p>.<p>ಈ ಪ್ರಕರಣವನ್ನು ಮುಕ್ತಾಯಗೊಳಿಸುವಂತೆ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಮತ್ತು ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ ಮತ್ತು ಸಂಜೀವ್ ಖನ್ನಾ ಅವರನ್ನೊಳಗೊಂಡ ಪೀಠವು ಒಪ್ಪಿಕೊಂಡಿದೆ.</p>.<p>ಅಮೆರಿಕದ ಎನ್ರಾನ್ ಕಂಪನಿ ಮತ್ತು ದಾಭೋಲ್ ವಿದ್ಯುತ್ ಕಾರ್ಪೋರೇಷನ್ 1996ರಲ್ಲಿ ಮಹಾರಾಷ್ಟ್ರದಲ್ಲಿ 3 ಶತಕೋಟಿ ಡಾಲರ್ (₹20,700 ಕೋಟಿ) ವೆಚ್ಚದಲ್ಲಿ ಬೃಹತ್ ವಿದ್ಯುತ್ ಯೋಜನೆಯನ್ನು ಕೈಗೊಂಡಿದ್ದವು. ಇದಕ್ಕಾಗಿ ಮಹಾರಾಷ್ಟ್ರ ರಾಜ್ಯ ವಿದ್ಯುತ್ ಮಂಡಳಿ ಜತೆ ವಿದ್ಯುತ್ ಖರೀದಿ ಒಪ್ಪಂದ ಮಾಡಿಕೊಳ್ಳಲಾಗಿತ್ತು.</p>.<p>ವಿದ್ಯುತ್ ಖರೀದಿ ಒಪ್ಪಂದ ಪ್ರಶ್ನಿಸಿ ಸೆಂಟರ್ ಫಾರ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಎತ್ತಿ ಹಿಡಿದಿತ್ತು. ಬಳಿಕ, ಹೈಕೋರ್ಟ್ ತೀರ್ಪು ಪ್ರಶ್ನಿಸಿ 1997ರಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಅಂಗೀಕರಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>