<p><strong>ಹೈದರಾಬಾದ್ (ಐಎಎನ್ಎಸ್):</strong> ಎಮ್ಮಾರ್-ಎಪಿಐಐಸಿ ಟೌನ್ಶಿಪ್ ಹಗರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಎಎಸ್ ಅಧಿಕಾರಿ ಎಲ್. ವಿ. ಸುಬ್ರಮಣಿಯಂ ಅವರಿಗೆ ಸೋಮವಾರ ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯವು ಜಾಮೀನು ನೀಡಿತು.</p>.<p>ಸುಬ್ರಮಣಿಯಂ ಅವರು ಪ್ರಸ್ತುತ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ)ನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. <br /> <br /> ಬೆಳಿಗ್ಗೆ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಎಲ್. ವಿ. ಸುಬ್ರಮಣಿಯಂ ಅವರಿಗೆ ನ್ಯಾಯಾಲಯವು ರೂ. 25ಸಾವಿರ ವೈಯಕ್ತಿಕ ಬಾಂಡ್ ನೀಡುವಂತೆ ಆದೇಶಿಸಿ, ಜಾಮೀನು ಮಂಜೂರು ಮಾಡಿತು.<br /> <br /> ಎಲ್. ವಿ. ಸುಬ್ರಮಣಿಯಂ ಅವರು ಈ ಪ್ರಕರಣದಲ್ಲಿ 10ನೇ ಆರೋಪಿಯಾಗಿದ್ದರು.</p>.<p>ಇದೇ ಸಮಯದಲ್ಲಿ ಎಮ್ಮಾರ್ ಎಂಜಿಎಫ್ ನ ಹಣಕಾಸು ಮುಖ್ಯಸ್ಥ (ದಕ್ಷಿಣ) ವಿಜಯ್ ರಾಘವ್ ಅವರು ಸಲ್ಲಿಸಿದ್ದ ಜಾಮೀನು ಮನವಿ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ಮಂಗಳವಾರಕ್ಕೆ ಮುಂದೂಡಿತು.</p>.<p>ಇದೇ ಸಂದರ್ಭದಲ್ಲಿ ನ್ಯಾಯಾಲಯವು ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳು ಜುಲೈ 9ರಂದು ನ್ಯಾಯಾಲಯದಲ್ಲಿ ಹಾಜರಿರುವಂತೆ ನಿರ್ದೆಶಿಸಿತು.</p>.<p><br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್ (ಐಎಎನ್ಎಸ್):</strong> ಎಮ್ಮಾರ್-ಎಪಿಐಐಸಿ ಟೌನ್ಶಿಪ್ ಹಗರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಎಎಸ್ ಅಧಿಕಾರಿ ಎಲ್. ವಿ. ಸುಬ್ರಮಣಿಯಂ ಅವರಿಗೆ ಸೋಮವಾರ ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯವು ಜಾಮೀನು ನೀಡಿತು.</p>.<p>ಸುಬ್ರಮಣಿಯಂ ಅವರು ಪ್ರಸ್ತುತ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ)ನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. <br /> <br /> ಬೆಳಿಗ್ಗೆ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಎಲ್. ವಿ. ಸುಬ್ರಮಣಿಯಂ ಅವರಿಗೆ ನ್ಯಾಯಾಲಯವು ರೂ. 25ಸಾವಿರ ವೈಯಕ್ತಿಕ ಬಾಂಡ್ ನೀಡುವಂತೆ ಆದೇಶಿಸಿ, ಜಾಮೀನು ಮಂಜೂರು ಮಾಡಿತು.<br /> <br /> ಎಲ್. ವಿ. ಸುಬ್ರಮಣಿಯಂ ಅವರು ಈ ಪ್ರಕರಣದಲ್ಲಿ 10ನೇ ಆರೋಪಿಯಾಗಿದ್ದರು.</p>.<p>ಇದೇ ಸಮಯದಲ್ಲಿ ಎಮ್ಮಾರ್ ಎಂಜಿಎಫ್ ನ ಹಣಕಾಸು ಮುಖ್ಯಸ್ಥ (ದಕ್ಷಿಣ) ವಿಜಯ್ ರಾಘವ್ ಅವರು ಸಲ್ಲಿಸಿದ್ದ ಜಾಮೀನು ಮನವಿ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ಮಂಗಳವಾರಕ್ಕೆ ಮುಂದೂಡಿತು.</p>.<p>ಇದೇ ಸಂದರ್ಭದಲ್ಲಿ ನ್ಯಾಯಾಲಯವು ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳು ಜುಲೈ 9ರಂದು ನ್ಯಾಯಾಲಯದಲ್ಲಿ ಹಾಜರಿರುವಂತೆ ನಿರ್ದೆಶಿಸಿತು.</p>.<p><br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>