<p><strong>ಕೋಲ್ಕತ್ತ: </strong>ಎಸ್- ಬ್ಯಾಂಡ್ ಹಗರಣ ಪ್ರಧಾನಿ ಅವರ ನೇರ ಸುಪರ್ದಿಯಲ್ಲಿರುವ ಇಲಾಖೆಯಲ್ಲಿ ನಡೆದಿರುವುದರಿಂದ ಮತ್ತು ದೇಶದ ಭದ್ರತೆಯ ವಿಚಾರವೂ ಇದರಲ್ಲಿ ಅಡಗಿರುವುದರಿಂದ ಪ್ರಧಾನಿ ಅವರೇ ಸ್ವತಃ ಇದರ ಬಗ್ಗೆ ಹೇಳಿಕೆ ನೀಡಬೇಕು ಎಂದು ಬಿಜೆಪಿ ಒತ್ತಾಯಿಸಿದೆ.<br /> <br /> ‘ಪ್ರಧಾನಿ ಅವರು ಬುಧವಾರ ಟಿವಿ ಚಾನೆಲ್ಗಳ ಸಂಪಾದಕರನ್ನು ಭೇಟಿಯಾಗಲಿದ್ದಾರೆ. ಎಸ್-ಬ್ಯಾಂಡ್ ಹಗರಣದ ಬಗ್ಗೆ ಇದುವರೆಗೆ ಮಾತನಾಡಿಲ್ಲದ ಅವರು ಈಗಲಾದರೂ ಸ್ಪಷ್ಟ ಹೇಳಿಕೆ ನೀಡಬೇಕು’ ಎಂದು ಪಕ್ಷದ ವಕ್ತಾರೆ ನಿರ್ಮಲಾ ಸೀತಾರಾಮನ್ ಮಂಗಳವಾರ ಇಲ್ಲಿ ಪತ್ರಕರ್ತರಿಗೆ ತಿಳಿಸಿದರು. <br /> <br /> ಖಾಸಗಿ ಕಂಪೆನಿಯೊಂದಕ್ಕೆ ನೀಡಲಾದ ತರಂಗಾಂತರವನ್ನು ಕರಾವಳಿ ರಕ್ಷಣಾ ಪಡೆ ಮತ್ತು ಇತರ ರಾಷ್ಟ್ರೀಯ ಭದ್ರತಾ ಸಂಸ್ಥೆಗಳೂ ಬಳಸುತ್ತಿವೆ. ಹೀಗಾಗಿ ಇದೊಂದು ರಾಷ್ಟ್ರೀಯ ಭದ್ರತೆಯ ವಿಚಾರವೂ ಹೌದು. ಪ್ರಧಾನಿ ಅವರು ಈ ವಿಚಾರ ಮಾತ್ರವಲ್ಲದೆ, ಭ್ರಷ್ಟಾಚಾರ ಮತ್ತು ಕಪ್ಪುಹಣದ ಬಗ್ಗೆಯೂ ಮಾತನಾಡಬೇಕು, ವಿಶ್ವಸಂಸ್ಥೆಯ ಭ್ರಷ್ಟಾಚಾರ ತಡೆ ಕಾರ್ಯಸೂಚಿಗೆ ಭಾರತ ಏಕೆ ಸಹಿ ಹಾಕಿಲ್ಲ ಎಂಬುದಕ್ಕೂ ಉತ್ತರ ನೀಡಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ: </strong>ಎಸ್- ಬ್ಯಾಂಡ್ ಹಗರಣ ಪ್ರಧಾನಿ ಅವರ ನೇರ ಸುಪರ್ದಿಯಲ್ಲಿರುವ ಇಲಾಖೆಯಲ್ಲಿ ನಡೆದಿರುವುದರಿಂದ ಮತ್ತು ದೇಶದ ಭದ್ರತೆಯ ವಿಚಾರವೂ ಇದರಲ್ಲಿ ಅಡಗಿರುವುದರಿಂದ ಪ್ರಧಾನಿ ಅವರೇ ಸ್ವತಃ ಇದರ ಬಗ್ಗೆ ಹೇಳಿಕೆ ನೀಡಬೇಕು ಎಂದು ಬಿಜೆಪಿ ಒತ್ತಾಯಿಸಿದೆ.<br /> <br /> ‘ಪ್ರಧಾನಿ ಅವರು ಬುಧವಾರ ಟಿವಿ ಚಾನೆಲ್ಗಳ ಸಂಪಾದಕರನ್ನು ಭೇಟಿಯಾಗಲಿದ್ದಾರೆ. ಎಸ್-ಬ್ಯಾಂಡ್ ಹಗರಣದ ಬಗ್ಗೆ ಇದುವರೆಗೆ ಮಾತನಾಡಿಲ್ಲದ ಅವರು ಈಗಲಾದರೂ ಸ್ಪಷ್ಟ ಹೇಳಿಕೆ ನೀಡಬೇಕು’ ಎಂದು ಪಕ್ಷದ ವಕ್ತಾರೆ ನಿರ್ಮಲಾ ಸೀತಾರಾಮನ್ ಮಂಗಳವಾರ ಇಲ್ಲಿ ಪತ್ರಕರ್ತರಿಗೆ ತಿಳಿಸಿದರು. <br /> <br /> ಖಾಸಗಿ ಕಂಪೆನಿಯೊಂದಕ್ಕೆ ನೀಡಲಾದ ತರಂಗಾಂತರವನ್ನು ಕರಾವಳಿ ರಕ್ಷಣಾ ಪಡೆ ಮತ್ತು ಇತರ ರಾಷ್ಟ್ರೀಯ ಭದ್ರತಾ ಸಂಸ್ಥೆಗಳೂ ಬಳಸುತ್ತಿವೆ. ಹೀಗಾಗಿ ಇದೊಂದು ರಾಷ್ಟ್ರೀಯ ಭದ್ರತೆಯ ವಿಚಾರವೂ ಹೌದು. ಪ್ರಧಾನಿ ಅವರು ಈ ವಿಚಾರ ಮಾತ್ರವಲ್ಲದೆ, ಭ್ರಷ್ಟಾಚಾರ ಮತ್ತು ಕಪ್ಪುಹಣದ ಬಗ್ಗೆಯೂ ಮಾತನಾಡಬೇಕು, ವಿಶ್ವಸಂಸ್ಥೆಯ ಭ್ರಷ್ಟಾಚಾರ ತಡೆ ಕಾರ್ಯಸೂಚಿಗೆ ಭಾರತ ಏಕೆ ಸಹಿ ಹಾಕಿಲ್ಲ ಎಂಬುದಕ್ಕೂ ಉತ್ತರ ನೀಡಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>