<p>ನವದೆಹಲಿ (ಪಿಟಿಐ): ಇಸ್ರೋದ ವಾಣಿಜ್ಯ ಘಟಕ ಅಂತರಿಕ್ಷ್ ಮತ್ತು ಖಾಸಗಿ ಸಂಸ್ಥೆ ದೇವಾಸ್ ಮಲ್ಟಿಮೀಡಿಯಾ ನಡುವೆ ನಡೆದಿದ್ದ ವಿವಾದಾತ್ಮಕ ಎಸ್-ಬ್ಯಾಂಡ್ ಒಪ್ಪಂದವನ್ನು ಗುರುವಾರ ರದ್ದು ಪಡಿಸಲಾಗಿದೆ.<br /> <br /> ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ಭದ್ರತೆ ಮೇಲಿನ ಸಂಪುಟ ಸಮಿತಿ ಬಾಹ್ಯಾಕಾಶ ಆಯೋಗ ಮಾಡಿದ ಶಿಫಾರಸಿನ ಅನ್ವಯ ಈ ತೀರ್ಮಾನ ಕೈಗೊಳ್ಳಲಾಗಿದೆ.<br /> <br /> 70 ಮೆಗಾಹರ್ಡ್ಸ್ ಎಸ್-ಬ್ಯಾಂಡ್ನ ತರಂಗಾಂತರವನ್ನು ಖಾಸಗಿ ಸಂಸ್ಥೆಗೆ ಒಂದು ಸಾವಿರ ಕೋಟಿ ರೂಪಾಯಿಗಳಿಗೆ ಹಂಚಲು ಮಾಡಿಕೊಂಡಿದ್ದ ಒಪ್ಪಂದ ಈಗ ವಿವಾದಕ್ಕೆ ಗುರಿಯಾಗಿದ್ದು, ಈ ನಿಟ್ಟಿನಲ್ಲಿ ಮಹಾಲೇಖಪಾಲರು (ಸಿಎಜಿ) ಸಹ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.<br /> <br /> ಕೆಲವು ಅಂದಾಜಿನ ಪ್ರಕಾರ ಈ ಒಪ್ಪಂದದಿಂದ ಸರ್ಕಾರದ ಬೊಕ್ಕಸಕ್ಕೆ ಸುಮಾರು ರೂ 2 ಲಕ್ಷ ಕೋಟಿ ನಷ್ಟ ಉಂಟಾಗಿತ್ತು. ಆದಾಯ ನಷ್ಟ ಆಗಿರುವ ಕುರಿತು ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾದ ನಂತರ ಸರ್ಕಾರ ಮತ್ತು ಇಸ್ರೋ ಎರಡೂ ಈ ಒಪ್ಪಂದವನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದವು.<br /> <br /> ‘ತಡವಾದ ಕ್ರಮ’: ಎಸ್-ಬ್ಯಾಂಡ್ ಹಂಚಿಕೆ ಒಪ್ಪಂದ ರದ್ದು ಮಾಡಿರುವ ಸಂಪುಟ ಸಮಿತಿ ಕ್ರಮ ತಡವಾಗಿ ತೆಗೆದುಕೊಂಡ ನಿರ್ಧಾರ ಎಂದು ಸಂಸತ್ತಿನ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಮುರಳಿ ಮನೋಹರ ಜೋಷಿ ಅಭಿಪ್ರಾಯಪಟ್ಟಿದ್ದಾರೆ.<br /> <br /> ಸಮಗ್ರ ತನಿಖೆ ಆಗಬೇಕು-ಬಿಜೆಪಿ: ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ಈ ಹಗರಣ ಕುರಿತಂತೆ ಸಮಗ್ರ ತನಿಖೆಯ ಅಗತ್ಯವೂ ಇದೆ ಎಂದು ಪಕ್ಷದ ವಕ್ತಾರೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ಇಸ್ರೋದ ವಾಣಿಜ್ಯ ಘಟಕ ಅಂತರಿಕ್ಷ್ ಮತ್ತು ಖಾಸಗಿ ಸಂಸ್ಥೆ ದೇವಾಸ್ ಮಲ್ಟಿಮೀಡಿಯಾ ನಡುವೆ ನಡೆದಿದ್ದ ವಿವಾದಾತ್ಮಕ ಎಸ್-ಬ್ಯಾಂಡ್ ಒಪ್ಪಂದವನ್ನು ಗುರುವಾರ ರದ್ದು ಪಡಿಸಲಾಗಿದೆ.<br /> <br /> ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ಭದ್ರತೆ ಮೇಲಿನ ಸಂಪುಟ ಸಮಿತಿ ಬಾಹ್ಯಾಕಾಶ ಆಯೋಗ ಮಾಡಿದ ಶಿಫಾರಸಿನ ಅನ್ವಯ ಈ ತೀರ್ಮಾನ ಕೈಗೊಳ್ಳಲಾಗಿದೆ.<br /> <br /> 70 ಮೆಗಾಹರ್ಡ್ಸ್ ಎಸ್-ಬ್ಯಾಂಡ್ನ ತರಂಗಾಂತರವನ್ನು ಖಾಸಗಿ ಸಂಸ್ಥೆಗೆ ಒಂದು ಸಾವಿರ ಕೋಟಿ ರೂಪಾಯಿಗಳಿಗೆ ಹಂಚಲು ಮಾಡಿಕೊಂಡಿದ್ದ ಒಪ್ಪಂದ ಈಗ ವಿವಾದಕ್ಕೆ ಗುರಿಯಾಗಿದ್ದು, ಈ ನಿಟ್ಟಿನಲ್ಲಿ ಮಹಾಲೇಖಪಾಲರು (ಸಿಎಜಿ) ಸಹ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.<br /> <br /> ಕೆಲವು ಅಂದಾಜಿನ ಪ್ರಕಾರ ಈ ಒಪ್ಪಂದದಿಂದ ಸರ್ಕಾರದ ಬೊಕ್ಕಸಕ್ಕೆ ಸುಮಾರು ರೂ 2 ಲಕ್ಷ ಕೋಟಿ ನಷ್ಟ ಉಂಟಾಗಿತ್ತು. ಆದಾಯ ನಷ್ಟ ಆಗಿರುವ ಕುರಿತು ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾದ ನಂತರ ಸರ್ಕಾರ ಮತ್ತು ಇಸ್ರೋ ಎರಡೂ ಈ ಒಪ್ಪಂದವನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದವು.<br /> <br /> ‘ತಡವಾದ ಕ್ರಮ’: ಎಸ್-ಬ್ಯಾಂಡ್ ಹಂಚಿಕೆ ಒಪ್ಪಂದ ರದ್ದು ಮಾಡಿರುವ ಸಂಪುಟ ಸಮಿತಿ ಕ್ರಮ ತಡವಾಗಿ ತೆಗೆದುಕೊಂಡ ನಿರ್ಧಾರ ಎಂದು ಸಂಸತ್ತಿನ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಮುರಳಿ ಮನೋಹರ ಜೋಷಿ ಅಭಿಪ್ರಾಯಪಟ್ಟಿದ್ದಾರೆ.<br /> <br /> ಸಮಗ್ರ ತನಿಖೆ ಆಗಬೇಕು-ಬಿಜೆಪಿ: ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ಈ ಹಗರಣ ಕುರಿತಂತೆ ಸಮಗ್ರ ತನಿಖೆಯ ಅಗತ್ಯವೂ ಇದೆ ಎಂದು ಪಕ್ಷದ ವಕ್ತಾರೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>