<p><strong>ಗ್ವಾಲಿಯರ್ (ಪಿಟಿಐ):</strong> ಕಲ್ಲು ಗಣಿ ಮಾಫಿಯಾಕ್ಕೆ ಐಪಿಎಸ್ ಅಧಿಕಾರಿಯೊಬ್ಬರು ಬಲಿಯಾದ ಬೆನ್ನಲ್ಲೇ ಮಧ್ಯ ಪ್ರದೇಶದಲ್ಲಿ ಶುಕ್ರವಾರ ಮತ್ತೊಬ್ಬ ಯುವ ಐಪಿಎಸ್ ಅಧಿಕಾರಿ ಮೇಲೆ ಮದ್ಯ ಮಾಫಿಯಾದಿಂದ ಹಲ್ಲೆ ನಡೆದಿದೆ.<br /> <br /> ಹೋಳಿ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದ್ದರೂ ಎಟಾವ ಮತ್ತು ಲಹರ್ ರಸ್ತೆಯಲ್ಲಿರುವ ಕೆಲ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಎಗ್ಗಿಲ್ಲದೇ ನಡೆಯುತ್ತಿತ್ತು. ಇದರ ಸುಳಿವು ಅರಿತು ಭಿಂಡ್ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಯದೇವನ್ ಅವರು ಸಿಬ್ಬಂದಿಯೊಂದಿಗೆ ಪರಿಶೀಲನೆಗೆ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.<br /> <br /> ಪೊಲೀಸರು ಸ್ಥಳಕ್ಕೆ ಬಂದು ಪ್ರಶ್ನಿಸುತ್ತಿದ್ದಂತೆಯೇ ಬಿಜೆಪಿ ಮಾಜಿ ಶಾಸಕ ನರೇಂದ್ರ ಸಿಂಗ್ ಬೆಂಬಲಿಗರು ಎನ್ನಲಾದ ಗುಂಪು ಅವರತ್ತ ದೊಣ್ಣೆ ಬೀಸಿತಲ್ಲದೆ, ಮನಬಂದಂತೆ ಕಲ್ಲುಗಳನ್ನು ತೂರಾಡಿತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.<br /> <br /> ಘಟನೆಗೆ ಸಂಬಂಧಿಸಿದಂತೆ ನರೇಂದ್ರ ಸಿಂಗ್, ಅವರ ಏಳು ಬೆಂಬಲಿಗರು ಮತ್ತು 18 ಮಂದಿ ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗ್ವಾಲಿಯರ್ (ಪಿಟಿಐ):</strong> ಕಲ್ಲು ಗಣಿ ಮಾಫಿಯಾಕ್ಕೆ ಐಪಿಎಸ್ ಅಧಿಕಾರಿಯೊಬ್ಬರು ಬಲಿಯಾದ ಬೆನ್ನಲ್ಲೇ ಮಧ್ಯ ಪ್ರದೇಶದಲ್ಲಿ ಶುಕ್ರವಾರ ಮತ್ತೊಬ್ಬ ಯುವ ಐಪಿಎಸ್ ಅಧಿಕಾರಿ ಮೇಲೆ ಮದ್ಯ ಮಾಫಿಯಾದಿಂದ ಹಲ್ಲೆ ನಡೆದಿದೆ.<br /> <br /> ಹೋಳಿ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದ್ದರೂ ಎಟಾವ ಮತ್ತು ಲಹರ್ ರಸ್ತೆಯಲ್ಲಿರುವ ಕೆಲ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಎಗ್ಗಿಲ್ಲದೇ ನಡೆಯುತ್ತಿತ್ತು. ಇದರ ಸುಳಿವು ಅರಿತು ಭಿಂಡ್ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಯದೇವನ್ ಅವರು ಸಿಬ್ಬಂದಿಯೊಂದಿಗೆ ಪರಿಶೀಲನೆಗೆ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.<br /> <br /> ಪೊಲೀಸರು ಸ್ಥಳಕ್ಕೆ ಬಂದು ಪ್ರಶ್ನಿಸುತ್ತಿದ್ದಂತೆಯೇ ಬಿಜೆಪಿ ಮಾಜಿ ಶಾಸಕ ನರೇಂದ್ರ ಸಿಂಗ್ ಬೆಂಬಲಿಗರು ಎನ್ನಲಾದ ಗುಂಪು ಅವರತ್ತ ದೊಣ್ಣೆ ಬೀಸಿತಲ್ಲದೆ, ಮನಬಂದಂತೆ ಕಲ್ಲುಗಳನ್ನು ತೂರಾಡಿತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.<br /> <br /> ಘಟನೆಗೆ ಸಂಬಂಧಿಸಿದಂತೆ ನರೇಂದ್ರ ಸಿಂಗ್, ಅವರ ಏಳು ಬೆಂಬಲಿಗರು ಮತ್ತು 18 ಮಂದಿ ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>