ಪಾಕಿಸ್ತಾನದ ಈ ಹೇಳಿಕೆ ಬಗ್ಗೆ ಪ್ರತಿಕ್ರಯಿಸಿದ ಭಾರತೀಯ ಸೇನೆಯ ಹಿರಿಯ ಅಧಿಕಾರಿ, ಭಾರತೀಯ ಯೋಧರಿಗೆ ಯಾವುದೇ ಸಾವು ನೋವು ಸಂಭವಿಸಿಲ್ಲ. ಶುಕ್ರವಾರ ರಾತ್ರಿ 11 ಗಂಟೆಗೆ ಕದನ ವಿರಾಮ ಉಲ್ಲಂಘಿಸಿದ ಪಾಕ್, ಶನಿವಾರ ಮಧ್ಯಾಹ್ನದ ವರೆಗೆ ಗುಂಡಿನ ದಾಳಿ ಮುಂದುವರಿಸಿತ್ತು. ಈ ದಾಳಿಯಲ್ಲಿ ಮಹಿಳೆಯೊಬ್ಬರು ಸೇರಿದಂತೆ ಇಬ್ಬರು ನಾಗರಿಕರಿಗೆ ಗಾಯಗಳಾಗಿವೆ. ಪಾಕ್ ದಾಳಿಗೆ ನಾವು ತಕ್ಕ ಉತ್ತರ ನೀಡಿದ್ದೇವೆ ಎಂದಿದ್ದಾರೆ.