ತಿರುವನಂತಪುರದ ಪೂಂಥುರಾ ಕರಾವಳಿ ತೀರದಲ್ಲಿ ಚಂಡಮಾರುತದಿಂದ ಮೃತಪಟ್ಟ ಮೀನುಗಾರರ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ನಂತರ ಮಾತನಾಡಿದ ರಾಹುಲ್, ಇಂತಹ ಪ್ರಾಕೃತಿಕ ವಿಕೋಪದಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪಾಠ ಕಲಿಯಬೇಕಿದೆ. ಮೃತರ ಮತ್ತು ಸಂತ್ರಸ್ತರ ಕುಟುಂಬಗಳಿಗೆ ಹೆಚ್ಚಿನ ಪರಿಹಾರ ನೀಡುವಂತೆ ಕೇಂದ್ರದ ಮೇಲೆ ಒತ್ತಡ ಹೇರಲಾಗುವುದು ಎಂದು ಭರವಸೆ ನೀಡಿದರು.