<p>ಭುವನೇಶ್ವರ (ಪಿಟಿಐ): ಒಡಿಶಾದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದ್ದು ಮಂಗಳವಾರ ಮತ್ತೆ ಏಳು ಜನರು ಮೃತಪಟ್ಟಿದ್ದಾರೆ. ಆ ಮೂಲಕ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 27ಕ್ಕೆ ಏರಿದೆ.<br /> <br /> ಈ ಮಧ್ಯೆ, ನೆರೆಯಿಂದಾಗಿ ಜಲಾವೃತವಾಗಿರುವ ಸುಮಾರು 1,100 ಗ್ರಾಮಗಳಲ್ಲಿ ರಾಜ್ಯ ಸರ್ಕಾರ ಪರಿಹಾರ ಕಾರ್ಯವನ್ನು ತೀವ್ರಗೊಳಿಸಿದೆ.<br /> <br /> ಮೃತರ ಸಂಖ್ಯೆ 27ಕ್ಕೆಏರಿದೆ ಎಂದು ವಿಶೇಷ ಪರಿಹಾರ ಆಯುಕ್ತ ಪಿ.ಕೆ.ಮೊಹಾಪಾತ್ರ ಹೇಳಿದ್ದಾರೆ. <br /> ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಎಸ್.ಎನ್ ಪಾಟ್ರೊ ಅವರು ಅಧಿಕಾರಿಗಳ ಸಭೆ ನಡೆಸಿ ಪ್ರವಾಹ ಪರಿಸ್ಥಿತಿ ಬಗ್ಗೆ ಚರ್ಚಿಸಿದರು.<br /> <br /> ಪ್ರವಾಹದಿಂದಾಗಿ ಜಾಜ್ಪುರ ಜಿಲ್ಲೆಯಲ್ಲಿ ಹೆಚ್ಚು ಅಂದರೆ ಏಳು ಜನರು ಮೃತಪಟ್ಟಿದ್ದಾರೆ. ಭದ್ರಕ್ ಜಿಲ್ಲೆಯಲ್ಲಿ ಆರು ಮಂದಿ ಅಸು ನೀಗಿದ್ದಾರೆ ಎಂದು ಆಯುಕ್ತರು ತಿಳಿಸಿದ್ದಾರೆ.<br /> <br /> ಬ್ರಹ್ಮಣಿ, ಬೈತರಾಣಿ, ಸುವರ್ಣರೇಖಾ, ಬುಧಬುಲಂಗ್ ನದಿಗಳು ಹಾಗೂ ಅದರ ಉಪನದಿಗಳು ಉಕ್ಕಿ ಹರಿಯುತ್ತಿರುವುದರಿಂದಾಗಿ ಸೃಷ್ಟಿಯಾಗಿರುವ ಪ್ರವಾಹದಿಂದ ಸುಮಾರು 22 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರಾಗಿದ್ದಾರೆ. ಈ ವರ್ಷದಲ್ಲಿ ಮೊದಲ ಬಾರಿ ಮಹಾನಂದಿ ನದಿ ಯಿಂದಾಗಿ ಉಂಟಾಗಿದ್ದ ನೆರೆಯಿಂದಾಗಿ 41 ಜನರು ಮೃತಪಟ್ಟಿದ್ದರು ಎಂದು ಮೊಹಾಪಾತ್ರ ಹೇಳಿದ್ದಾರೆ.<br /> <br /> ಈ ಮಧ್ಯೆ, ಬ್ರಹ್ಮಣಿ ಮತ್ತಿತರ ನದಿಗಳಲ್ಲಿ ನೀರಿನ ಮಟ್ಟ ಇಳಿಮುಖವಾಗಿದ್ದು, ನೆರೆ ಪೀಡಿತ ರಾಜ್ಯ ಸರ್ಕಾರ ಪರಿಹಾರ ಕಾರ್ಯವನ್ನು ಮತ್ತಷ್ಟು ತೀವ್ರ ಗೊಳಿಸಿದೆ.<br /> <br /> ಪ್ರವಾಹ ಪೀಡಿತ ಪ್ರದೇಶಗಳಾದ ಸಂಬಲ್ಪುರ ಮತ್ತುಸುವರ್ಣಪುರಕ್ಕೆ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.<br /> <br /> ಪ್ರವಾಹ ಸ್ಥಿತಿ ಸಂಪೂರ್ಣವಾಗಿ ಇಳಿಮುಖವಾಗುವವರೆಗೂ ಸಂತ್ರಸ್ತರಿಗೆ ಬೇಯಿಸಿದ ಆಹಾರವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭುವನೇಶ್ವರ (ಪಿಟಿಐ): ಒಡಿಶಾದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದ್ದು ಮಂಗಳವಾರ ಮತ್ತೆ ಏಳು ಜನರು ಮೃತಪಟ್ಟಿದ್ದಾರೆ. ಆ ಮೂಲಕ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 27ಕ್ಕೆ ಏರಿದೆ.<br /> <br /> ಈ ಮಧ್ಯೆ, ನೆರೆಯಿಂದಾಗಿ ಜಲಾವೃತವಾಗಿರುವ ಸುಮಾರು 1,100 ಗ್ರಾಮಗಳಲ್ಲಿ ರಾಜ್ಯ ಸರ್ಕಾರ ಪರಿಹಾರ ಕಾರ್ಯವನ್ನು ತೀವ್ರಗೊಳಿಸಿದೆ.<br /> <br /> ಮೃತರ ಸಂಖ್ಯೆ 27ಕ್ಕೆಏರಿದೆ ಎಂದು ವಿಶೇಷ ಪರಿಹಾರ ಆಯುಕ್ತ ಪಿ.ಕೆ.ಮೊಹಾಪಾತ್ರ ಹೇಳಿದ್ದಾರೆ. <br /> ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಎಸ್.ಎನ್ ಪಾಟ್ರೊ ಅವರು ಅಧಿಕಾರಿಗಳ ಸಭೆ ನಡೆಸಿ ಪ್ರವಾಹ ಪರಿಸ್ಥಿತಿ ಬಗ್ಗೆ ಚರ್ಚಿಸಿದರು.<br /> <br /> ಪ್ರವಾಹದಿಂದಾಗಿ ಜಾಜ್ಪುರ ಜಿಲ್ಲೆಯಲ್ಲಿ ಹೆಚ್ಚು ಅಂದರೆ ಏಳು ಜನರು ಮೃತಪಟ್ಟಿದ್ದಾರೆ. ಭದ್ರಕ್ ಜಿಲ್ಲೆಯಲ್ಲಿ ಆರು ಮಂದಿ ಅಸು ನೀಗಿದ್ದಾರೆ ಎಂದು ಆಯುಕ್ತರು ತಿಳಿಸಿದ್ದಾರೆ.<br /> <br /> ಬ್ರಹ್ಮಣಿ, ಬೈತರಾಣಿ, ಸುವರ್ಣರೇಖಾ, ಬುಧಬುಲಂಗ್ ನದಿಗಳು ಹಾಗೂ ಅದರ ಉಪನದಿಗಳು ಉಕ್ಕಿ ಹರಿಯುತ್ತಿರುವುದರಿಂದಾಗಿ ಸೃಷ್ಟಿಯಾಗಿರುವ ಪ್ರವಾಹದಿಂದ ಸುಮಾರು 22 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರಾಗಿದ್ದಾರೆ. ಈ ವರ್ಷದಲ್ಲಿ ಮೊದಲ ಬಾರಿ ಮಹಾನಂದಿ ನದಿ ಯಿಂದಾಗಿ ಉಂಟಾಗಿದ್ದ ನೆರೆಯಿಂದಾಗಿ 41 ಜನರು ಮೃತಪಟ್ಟಿದ್ದರು ಎಂದು ಮೊಹಾಪಾತ್ರ ಹೇಳಿದ್ದಾರೆ.<br /> <br /> ಈ ಮಧ್ಯೆ, ಬ್ರಹ್ಮಣಿ ಮತ್ತಿತರ ನದಿಗಳಲ್ಲಿ ನೀರಿನ ಮಟ್ಟ ಇಳಿಮುಖವಾಗಿದ್ದು, ನೆರೆ ಪೀಡಿತ ರಾಜ್ಯ ಸರ್ಕಾರ ಪರಿಹಾರ ಕಾರ್ಯವನ್ನು ಮತ್ತಷ್ಟು ತೀವ್ರ ಗೊಳಿಸಿದೆ.<br /> <br /> ಪ್ರವಾಹ ಪೀಡಿತ ಪ್ರದೇಶಗಳಾದ ಸಂಬಲ್ಪುರ ಮತ್ತುಸುವರ್ಣಪುರಕ್ಕೆ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.<br /> <br /> ಪ್ರವಾಹ ಸ್ಥಿತಿ ಸಂಪೂರ್ಣವಾಗಿ ಇಳಿಮುಖವಾಗುವವರೆಗೂ ಸಂತ್ರಸ್ತರಿಗೆ ಬೇಯಿಸಿದ ಆಹಾರವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>