ಭುವನೇಶ್ವರ: ಒಡಿಶಾದ ಕರಾವಳಿಯ ಖುರ್ದ್ ಜಿಲ್ಲೆಯಲ್ಲಿ ಹಕ್ಕಿಜ್ವರ ಕಂಡು ಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಜ್ವರದ ಬಗ್ಗೆ ಭಯಪಡದಂತೆ ಜನರಲ್ಲಿ ಮನವಿ ಮಾಡಿದೆ.
`ಸಮಸ್ಯೆಯನ್ನು ಸ್ಥಳೀಯವಾಗಿಯೇ ಬಗೆಹರಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಬೆಳವಣಿಗೆಯಿಂದ ಜನರು ಆತಂಕ ಪಡುವ ಅಗತ್ಯವಿಲ್ಲ~ ಎಂದು ಉನ್ನತ ಮೂಲಗಳು ತಿಳಿಸಿವೆ.