<p><strong>ನವದೆಹಲಿ (ಪಿಟಿಐ):</strong> ಲೋಕಪಾಲ ಮಸೂದೆಯನ್ನು ಅಧ್ಯಯನ ಮಾಡುತ್ತಿರುವ ಸಂಸದೀಯ ಸಮಿತಿಯು `ಭ್ರಷ್ಟಾಚಾರ ನಿಗ್ರಹ ಓಂಬುಡ್ಸಮನ್~ ರಚನೆಗೆ ಸಂಬಂಧಿಸಿದಂತೆ ಸುಪೀಂಕೋರ್ಟ್ನ ಮಾಜಿ ಮುಖ್ಯ ನ್ಯಾಯಮೂರ್ತಿಗಳಾದ ಕರ್ನಾಟಕದ ಎಂ.ಎನ್. ವೆಂಕಟಾಚಲಯ್ಯ ಮತ್ತು ಜೆ.ಎಸ್. ವರ್ಮಾ ಅವರ ಅಭಿಪ್ರಾಯವನ್ನು ಕೇಳಿದೆ.<br /> <br /> ಮುಂದಿನ ತಿಂಗಳು 8-10 ದಿನಗಳ ಕಾಲ ನಡೆಯಲಿರುವ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ, ಕಾನೂನು ಹಾಗೂ ನ್ಯಾಯಾಂಗದ ಮೇಲಿನ ಸಂಸದೀಯ ಸ್ಥಾಯಿ ಸಮಿತಿಯ ಸಭೆಯಲ್ಲಿ ಲೋಕಪಾಲ ಮಸೂದೆಗೆ ಸಂಬಂಧಿಸಿದ ಅಭಿಪ್ರಾಯ ದಾಖಲಿಸಲು ವೆಂಕಟಾಚಲಯ್ಯ ಮತ್ತು ವರ್ಮಾ ಅವರನ್ನು ಆಹ್ವಾನಿಸಲಾಗಿದೆ.<br /> <br /> 1993-94ರ ಅವಧಿಯಲ್ಲಿ ಮುಖ್ಯ ನ್ಯಾಯಮೂರ್ತಿಯಾಗಿದ್ದ ವೆಂಕಟಾಚಲಯ್ಯ ಅವರು ಸಂವಿಧಾನದ ಕಾರ್ಯನಿರ್ವಹಣೆಯ ಪರಿಶೀಲನೆಗಾಗಿ ರಚನೆಯಾಗಿದ್ದ ರಾಷ್ಟ್ರೀಯ ಆಯೋಗದ ನೇತೃತ್ವವನ್ನೂ ವಹಿಸಿದ್ದರು. <br /> <br /> `ಲೋಕಪಾಲ ರಚನೆ ತನ್ನದೇ ಮಿತಿಯನ್ನು ಹೊಂದಿದ್ದು, ಸಂವಿಧಾನ ಸುರಕ್ಷತೆಗಿರುವ ಇತರ ಎಲ್ಲ ಸಂಸ್ಥೆಗಳನ್ನು ಬಲಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿದಾಗ ಮಾತ್ರ ಅದು ಉಳಿಯಲು ಸಾಧ್ಯ~ ಎಂದು ಅಭಿಪ್ರಾಯಪಟ್ಟಿದ್ದಾರೆ.<br /> <br /> ಅದೇ ರೀತಿ ವರ್ಮಾ ಅವರು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಮೇಲಿನ ಮೊದಲ ತನಿಖಾ ಆಯೋಗದ ನೇತೃತ್ವ ವಹಿಸಿದ್ದು, ಹವಾಲಾ ಹಗರಣ ಮತ್ತು ಅಯೋಧ್ಯೆ ವಿವಾದ ಸೇರಿದಂತೆ ಹಲವು ಮಹತ್ವದ ತೀರ್ಪಿಗೆ ಹೆಸರಾದವರು.<br /> <br /> ಪ್ರಸ್ತಾವಿತ ಲೋಕಪಾಲ ಮಸೂದೆಯ ವ್ಯಾಪ್ತಿಯಿಂದ ಉನ್ನತ ನ್ಯಾಯಾಂಗ ಮತ್ತು ಪ್ರಧಾನಿಯನ್ನು ಹೊರಗಿಡಬೇಕು ಹಾಗೂ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ನ್ಯಾಯಾಧೀಶರ ಅನುಚಿತ ನಡವಳಿಕೆ ವಿರುದ್ಧ ಕ್ರಮ ಕೈಗೊಳ್ಳಲು ಪ್ರತ್ಯೇಕ ನಿಯಂತ್ರಣ ವ್ಯವಸ್ಥೆ ನಿರ್ಮಾಣವಾಗಬೇಕು ಎಂಬ ಸಲಹೆಗಳನ್ನು ಅವರು ಈಗಾಗಲೇ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಲೋಕಪಾಲ ಮಸೂದೆಯನ್ನು ಅಧ್ಯಯನ ಮಾಡುತ್ತಿರುವ ಸಂಸದೀಯ ಸಮಿತಿಯು `ಭ್ರಷ್ಟಾಚಾರ ನಿಗ್ರಹ ಓಂಬುಡ್ಸಮನ್~ ರಚನೆಗೆ ಸಂಬಂಧಿಸಿದಂತೆ ಸುಪೀಂಕೋರ್ಟ್ನ ಮಾಜಿ ಮುಖ್ಯ ನ್ಯಾಯಮೂರ್ತಿಗಳಾದ ಕರ್ನಾಟಕದ ಎಂ.ಎನ್. ವೆಂಕಟಾಚಲಯ್ಯ ಮತ್ತು ಜೆ.ಎಸ್. ವರ್ಮಾ ಅವರ ಅಭಿಪ್ರಾಯವನ್ನು ಕೇಳಿದೆ.<br /> <br /> ಮುಂದಿನ ತಿಂಗಳು 8-10 ದಿನಗಳ ಕಾಲ ನಡೆಯಲಿರುವ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ, ಕಾನೂನು ಹಾಗೂ ನ್ಯಾಯಾಂಗದ ಮೇಲಿನ ಸಂಸದೀಯ ಸ್ಥಾಯಿ ಸಮಿತಿಯ ಸಭೆಯಲ್ಲಿ ಲೋಕಪಾಲ ಮಸೂದೆಗೆ ಸಂಬಂಧಿಸಿದ ಅಭಿಪ್ರಾಯ ದಾಖಲಿಸಲು ವೆಂಕಟಾಚಲಯ್ಯ ಮತ್ತು ವರ್ಮಾ ಅವರನ್ನು ಆಹ್ವಾನಿಸಲಾಗಿದೆ.<br /> <br /> 1993-94ರ ಅವಧಿಯಲ್ಲಿ ಮುಖ್ಯ ನ್ಯಾಯಮೂರ್ತಿಯಾಗಿದ್ದ ವೆಂಕಟಾಚಲಯ್ಯ ಅವರು ಸಂವಿಧಾನದ ಕಾರ್ಯನಿರ್ವಹಣೆಯ ಪರಿಶೀಲನೆಗಾಗಿ ರಚನೆಯಾಗಿದ್ದ ರಾಷ್ಟ್ರೀಯ ಆಯೋಗದ ನೇತೃತ್ವವನ್ನೂ ವಹಿಸಿದ್ದರು. <br /> <br /> `ಲೋಕಪಾಲ ರಚನೆ ತನ್ನದೇ ಮಿತಿಯನ್ನು ಹೊಂದಿದ್ದು, ಸಂವಿಧಾನ ಸುರಕ್ಷತೆಗಿರುವ ಇತರ ಎಲ್ಲ ಸಂಸ್ಥೆಗಳನ್ನು ಬಲಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿದಾಗ ಮಾತ್ರ ಅದು ಉಳಿಯಲು ಸಾಧ್ಯ~ ಎಂದು ಅಭಿಪ್ರಾಯಪಟ್ಟಿದ್ದಾರೆ.<br /> <br /> ಅದೇ ರೀತಿ ವರ್ಮಾ ಅವರು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಮೇಲಿನ ಮೊದಲ ತನಿಖಾ ಆಯೋಗದ ನೇತೃತ್ವ ವಹಿಸಿದ್ದು, ಹವಾಲಾ ಹಗರಣ ಮತ್ತು ಅಯೋಧ್ಯೆ ವಿವಾದ ಸೇರಿದಂತೆ ಹಲವು ಮಹತ್ವದ ತೀರ್ಪಿಗೆ ಹೆಸರಾದವರು.<br /> <br /> ಪ್ರಸ್ತಾವಿತ ಲೋಕಪಾಲ ಮಸೂದೆಯ ವ್ಯಾಪ್ತಿಯಿಂದ ಉನ್ನತ ನ್ಯಾಯಾಂಗ ಮತ್ತು ಪ್ರಧಾನಿಯನ್ನು ಹೊರಗಿಡಬೇಕು ಹಾಗೂ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ನ್ಯಾಯಾಧೀಶರ ಅನುಚಿತ ನಡವಳಿಕೆ ವಿರುದ್ಧ ಕ್ರಮ ಕೈಗೊಳ್ಳಲು ಪ್ರತ್ಯೇಕ ನಿಯಂತ್ರಣ ವ್ಯವಸ್ಥೆ ನಿರ್ಮಾಣವಾಗಬೇಕು ಎಂಬ ಸಲಹೆಗಳನ್ನು ಅವರು ಈಗಾಗಲೇ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>