<p>ನವದೆಹಲಿ (ಐಎಎನ್ಎಸ್): ಓಟಿಗಾಗಿ ನೋಟು ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ಹಾಗೂ ಸಮಾಜವಾದಿ ಪಕ್ಷದ ಮಾಜಿ ಮುಖಂಡ ಅಮರ್ ಸಿಂಗ್ ಮತ್ತು ಬಿಜೆಪಿಯ ಇಬ್ಬರು ಮಾಜಿ ಸಂಸದರನ್ನು ಮಂಗಳವಾರ ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.<br /> <br /> ಸ್ಥಳೀಯ ತೀಸ್ ಹಜಾರಿ ನ್ಯಾಯಲಯದ ವಿಶೇಷ ನ್ಯಾಯಾಧೀಶರಾದ ಸಂಗೀತಾ ದಿಂಗ್ರಾ ಸೆಹಗಲ್ ಅವರು ಅಮರ್ ಸಿಂಗ್ ಹಾಗೂ ಸಂಸದರಾದ ಫಗನ್ ಸಿಂಗ್ ಕುಲಸ್ತೆ ಮತ್ತು ಮಹಾವೀರ್ ಸಿಂಗ್ ಅವರನ್ನು ಸೆಪ್ಟಂಬರ್ 19 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. <br /> <br /> ನ್ಯಾಯಾಲಯದಲ್ಲಿ ಹಾಜರಿದ್ದ ಕುರ್ತಾಧಾರಿ ಅಮರಸಿಂಗ್ ಅವರು ಒಂದು ಕ್ಷಣ ತೀರ್ಪು ಕೇಳಿ ಆಘಾತಕೊಳಗಾದರಲ್ಲದೇ, ಪೊಲೀಸರಿಂದ ದೂರ ನಡೆಯಲು ಪ್ರಯತ್ನಿಸಿದರು. <br /> <br /> ಮಧ್ಯಂತರ ಜಾಮೀನು ಅರ್ಜಿಯನ್ನು ವಜಾಮಾಡಿದ ನ್ಯಾಯಾಧೀಶರು ~ಅರ್ಜಿ ಪೂರ್ವಭಾವಿ ಹಂತದಲ್ಲಿದೆ. ಆದ್ದರಿಂದ ಪ್ರಾಸಿಕ್ಯೂಷನ್ ಉತ್ತರ ಸಲ್ಲಿಸಲಿ~~ ಎಂದು ಹೇಳಿದರು. <br /> <br /> 2008 ರಲ್ಲಿ ಲೋಕಸಭೆಯಲ್ಲಿ ನಡೆದ ವಿಶ್ವಾಸ ಮತಯಾಚನೆ ವೇಳೆ ಪ್ರಧಾನಿ ಮನಮೋಹನ್ ಸಿಂಗ್ ಪರ ಮತ ಹಾಕುವಂತೆ ಬಿಜೆಪಿಯ ಮೂವರು ಸಂಸದರಿಗೆ ಲಂಚ ನೀಡಲಾಗಿತ್ತು ಎಂದು ಹೇಳಲಾದ ಹಗರಣ ಇದು. <br /> <br /> ಅಮರ್ ಸಿಂಗ್ ಅವರು ಬಿಜೆಪಿ ಸಂಸದರಿಗೆ ತಮ್ಮ ಕಾರ್ಯದರ್ಶಿ ಸಂಜೀವ ಸಕ್ಸೇನಾ ಮೂಲಕ ಒಂದು ಕೋಟಿ ರೂಪಾಯಿ ಲಂಚ ನೀಡಿರುವ ಕುರಿತು ~ಸಾಕಷ್ಟು ಪುರಾವೆಗಳಿವೆ~ಎಂದು ತನಿಖೆಯ ದೋಷಾರೋಪ ಪಟ್ಟಿಯಲ್ಲಿ ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಐಎಎನ್ಎಸ್): ಓಟಿಗಾಗಿ ನೋಟು ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ಹಾಗೂ ಸಮಾಜವಾದಿ ಪಕ್ಷದ ಮಾಜಿ ಮುಖಂಡ ಅಮರ್ ಸಿಂಗ್ ಮತ್ತು ಬಿಜೆಪಿಯ ಇಬ್ಬರು ಮಾಜಿ ಸಂಸದರನ್ನು ಮಂಗಳವಾರ ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.<br /> <br /> ಸ್ಥಳೀಯ ತೀಸ್ ಹಜಾರಿ ನ್ಯಾಯಲಯದ ವಿಶೇಷ ನ್ಯಾಯಾಧೀಶರಾದ ಸಂಗೀತಾ ದಿಂಗ್ರಾ ಸೆಹಗಲ್ ಅವರು ಅಮರ್ ಸಿಂಗ್ ಹಾಗೂ ಸಂಸದರಾದ ಫಗನ್ ಸಿಂಗ್ ಕುಲಸ್ತೆ ಮತ್ತು ಮಹಾವೀರ್ ಸಿಂಗ್ ಅವರನ್ನು ಸೆಪ್ಟಂಬರ್ 19 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. <br /> <br /> ನ್ಯಾಯಾಲಯದಲ್ಲಿ ಹಾಜರಿದ್ದ ಕುರ್ತಾಧಾರಿ ಅಮರಸಿಂಗ್ ಅವರು ಒಂದು ಕ್ಷಣ ತೀರ್ಪು ಕೇಳಿ ಆಘಾತಕೊಳಗಾದರಲ್ಲದೇ, ಪೊಲೀಸರಿಂದ ದೂರ ನಡೆಯಲು ಪ್ರಯತ್ನಿಸಿದರು. <br /> <br /> ಮಧ್ಯಂತರ ಜಾಮೀನು ಅರ್ಜಿಯನ್ನು ವಜಾಮಾಡಿದ ನ್ಯಾಯಾಧೀಶರು ~ಅರ್ಜಿ ಪೂರ್ವಭಾವಿ ಹಂತದಲ್ಲಿದೆ. ಆದ್ದರಿಂದ ಪ್ರಾಸಿಕ್ಯೂಷನ್ ಉತ್ತರ ಸಲ್ಲಿಸಲಿ~~ ಎಂದು ಹೇಳಿದರು. <br /> <br /> 2008 ರಲ್ಲಿ ಲೋಕಸಭೆಯಲ್ಲಿ ನಡೆದ ವಿಶ್ವಾಸ ಮತಯಾಚನೆ ವೇಳೆ ಪ್ರಧಾನಿ ಮನಮೋಹನ್ ಸಿಂಗ್ ಪರ ಮತ ಹಾಕುವಂತೆ ಬಿಜೆಪಿಯ ಮೂವರು ಸಂಸದರಿಗೆ ಲಂಚ ನೀಡಲಾಗಿತ್ತು ಎಂದು ಹೇಳಲಾದ ಹಗರಣ ಇದು. <br /> <br /> ಅಮರ್ ಸಿಂಗ್ ಅವರು ಬಿಜೆಪಿ ಸಂಸದರಿಗೆ ತಮ್ಮ ಕಾರ್ಯದರ್ಶಿ ಸಂಜೀವ ಸಕ್ಸೇನಾ ಮೂಲಕ ಒಂದು ಕೋಟಿ ರೂಪಾಯಿ ಲಂಚ ನೀಡಿರುವ ಕುರಿತು ~ಸಾಕಷ್ಟು ಪುರಾವೆಗಳಿವೆ~ಎಂದು ತನಿಖೆಯ ದೋಷಾರೋಪ ಪಟ್ಟಿಯಲ್ಲಿ ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>