<p><strong>ಅಹಮದಾಬಾದ್/ಆನಂದ್ (ಪಿಟಿಐ/ಐಎಎನ್ಎಸ್): </strong>2002ರಲ್ಲಿ ಗುಜರಾತ್ನ ಗೋಧ್ರಾ ನರಮೇಧದ ನಂತರ ವ್ಯಾಪಿಸಿದ್ದ ಕೋಮುಗಲಭೆಯ ಸಂದರ್ಭದಲ್ಲಿ ನಡೆದಿದ್ದ ಓಡ್ ಹತ್ಯಾಕಾಂಡ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವು 23 ಆರೋಪಿಗಳು ತಪ್ಪಿತಸ್ಥರೆಂದು ಹೇಳಿದ್ದು ಸಾಕ್ಷ್ಯಗಳ ಕೊರತೆಯಿಂದ ಇನ್ನಿತರ 23 ಆರೋಪಿಗಳನ್ನು ಖುಲಾಸೆಗೊಳಿಸಿದೆ.<br /> <br /> ಆನಂದ್ನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಪೂನಂ ಸಿಂಗ್ ಈ ತೀರ್ಪು ನೀಡಿದರು. ತಪ್ಪಿತಸ್ಥರಿಗೆ ಶಿಕ್ಷೆಯ ಪ್ರಮಾಣವನ್ನು ಆನಂತರ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು. <br /> <br /> ಸುಪ್ರೀಂಕೋರ್ಟ್ ನೇಮಿಸಿದ್ದ ವಿಶೇಷ ತನಿಖಾ ತಂಡ ಈ ಪ್ರಕರಣದ ವಿಚಾರಣೆ ನಡೆಸಿತ್ತು. <br /> ಹಿನ್ನೆಲೆ: ಆನಂದ್ ಜಿಲ್ಲೆಯ ಓಡ್ ಗ್ರಾಮದಲ್ಲಿ 2002ರ ಮಾರ್ಚ್ 1ರಂದು ಈ ಹತ್ಯಾಕಾಂಡ ನಡೆದಿತ್ತು. ಗ್ರಾಮದ ಪಿರ್ವಾಲಿ ಭಗೋಲ್ ಪ್ರದೇಶದ ಮನೆಯೊಂದರಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 23 ಜನರನ್ನು ಕೂಡಿ ಹಾಕಿ ಬೆಂಕಿ ಹಚ್ಚಿ ಕೊಲ್ಲಲಾಗಿತ್ತು. ಈ ಪ್ರಕರಣದಲ್ಲಿ ಒಟ್ಟು 47 ಆರೋಪಿಗಳಿದ್ದರು. ಅವರಲ್ಲಿ ಒಬ್ಬಾತ ವಿಚಾರಣೆಯ ಸಂದರ್ಭದಲ್ಲೇ ಮೃತಪಟ್ಟಿದ್ದ.<br /> <br /> ಓಡ್ ಪ್ರಕರಣಕ್ಕೆ ಸಂಬಂಧಿಸಿದಂತೆ 150 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. <br /> 170ಕ್ಕೂ ಹೆಚ್ಚು ದಾಖಲೆಗಳನ್ನು ಕೋರ್ಟ್ಗೆ ನೀಡಲಾಗಿತ್ತು ಎಂದು ವಿಶೇಷ ಸರ್ಕಾರಿ ಅಭಿಯೋಜಕ ಪಿ.ಎನ್.ಪರ್ಮಾರ್ ತಿಳಿಸಿದ್ದಾರೆ.<br /> <br /> 2009ರ ಅಂತ್ಯದಲ್ಲಿ ಪ್ರಕರಣದ ವಿಚಾರಣೆ ಆರಂಭಿಸಲಾಗಿತ್ತು. ಇನ್ನೇನು ವಿಚಾರಣೆ ಮುಕ್ತಾಯದ ಹಂತದಲ್ಲಿದ್ದಾಗ 2011ರ ಮೇ ತಿಂಗಳಿನಲ್ಲಿ ಆಗಿನ ನ್ಯಾಯಾಧೀಶರು ವೈಯಕ್ತಿಕ ಕಾರಣ ನೀಡಿ ರಾಜೀನಾಮೆ ನೀಡಿದ್ದರು. <br /> <br /> ಆನಂತರ ನ್ಯಾಯಾಧೀಶೆ ಪೂನಂ ಸಿಂಗ್ ಅವರನ್ನು ಪ್ರಕರಣದ ವಿಚಾರಣೆಗಾಗಿ ನೇಮಿಸಲಾಯಿತು. ಅವರ ಮುಂದೆ ಹೊಸದಾಗಿ ವಾದ, ಪ್ರತಿವಾದ ಮಂಡಿಸಲಾಗಿತ್ತು. ಗೋಧ್ರಾ ರೈಲು ದುರಂತದ ನಂತರ ನಡೆದ ಕೋಮುಗಲಭೆ ಪ್ರಕರಣಗಳ ಪೈಕಿ ತೀರ್ಪು ಪ್ರಕಟಿಸಲಾಗಿರುವ ಮೂರನೇ ಪ್ರಕರಣ ಇದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್/ಆನಂದ್ (ಪಿಟಿಐ/ಐಎಎನ್ಎಸ್): </strong>2002ರಲ್ಲಿ ಗುಜರಾತ್ನ ಗೋಧ್ರಾ ನರಮೇಧದ ನಂತರ ವ್ಯಾಪಿಸಿದ್ದ ಕೋಮುಗಲಭೆಯ ಸಂದರ್ಭದಲ್ಲಿ ನಡೆದಿದ್ದ ಓಡ್ ಹತ್ಯಾಕಾಂಡ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವು 23 ಆರೋಪಿಗಳು ತಪ್ಪಿತಸ್ಥರೆಂದು ಹೇಳಿದ್ದು ಸಾಕ್ಷ್ಯಗಳ ಕೊರತೆಯಿಂದ ಇನ್ನಿತರ 23 ಆರೋಪಿಗಳನ್ನು ಖುಲಾಸೆಗೊಳಿಸಿದೆ.<br /> <br /> ಆನಂದ್ನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಪೂನಂ ಸಿಂಗ್ ಈ ತೀರ್ಪು ನೀಡಿದರು. ತಪ್ಪಿತಸ್ಥರಿಗೆ ಶಿಕ್ಷೆಯ ಪ್ರಮಾಣವನ್ನು ಆನಂತರ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು. <br /> <br /> ಸುಪ್ರೀಂಕೋರ್ಟ್ ನೇಮಿಸಿದ್ದ ವಿಶೇಷ ತನಿಖಾ ತಂಡ ಈ ಪ್ರಕರಣದ ವಿಚಾರಣೆ ನಡೆಸಿತ್ತು. <br /> ಹಿನ್ನೆಲೆ: ಆನಂದ್ ಜಿಲ್ಲೆಯ ಓಡ್ ಗ್ರಾಮದಲ್ಲಿ 2002ರ ಮಾರ್ಚ್ 1ರಂದು ಈ ಹತ್ಯಾಕಾಂಡ ನಡೆದಿತ್ತು. ಗ್ರಾಮದ ಪಿರ್ವಾಲಿ ಭಗೋಲ್ ಪ್ರದೇಶದ ಮನೆಯೊಂದರಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 23 ಜನರನ್ನು ಕೂಡಿ ಹಾಕಿ ಬೆಂಕಿ ಹಚ್ಚಿ ಕೊಲ್ಲಲಾಗಿತ್ತು. ಈ ಪ್ರಕರಣದಲ್ಲಿ ಒಟ್ಟು 47 ಆರೋಪಿಗಳಿದ್ದರು. ಅವರಲ್ಲಿ ಒಬ್ಬಾತ ವಿಚಾರಣೆಯ ಸಂದರ್ಭದಲ್ಲೇ ಮೃತಪಟ್ಟಿದ್ದ.<br /> <br /> ಓಡ್ ಪ್ರಕರಣಕ್ಕೆ ಸಂಬಂಧಿಸಿದಂತೆ 150 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. <br /> 170ಕ್ಕೂ ಹೆಚ್ಚು ದಾಖಲೆಗಳನ್ನು ಕೋರ್ಟ್ಗೆ ನೀಡಲಾಗಿತ್ತು ಎಂದು ವಿಶೇಷ ಸರ್ಕಾರಿ ಅಭಿಯೋಜಕ ಪಿ.ಎನ್.ಪರ್ಮಾರ್ ತಿಳಿಸಿದ್ದಾರೆ.<br /> <br /> 2009ರ ಅಂತ್ಯದಲ್ಲಿ ಪ್ರಕರಣದ ವಿಚಾರಣೆ ಆರಂಭಿಸಲಾಗಿತ್ತು. ಇನ್ನೇನು ವಿಚಾರಣೆ ಮುಕ್ತಾಯದ ಹಂತದಲ್ಲಿದ್ದಾಗ 2011ರ ಮೇ ತಿಂಗಳಿನಲ್ಲಿ ಆಗಿನ ನ್ಯಾಯಾಧೀಶರು ವೈಯಕ್ತಿಕ ಕಾರಣ ನೀಡಿ ರಾಜೀನಾಮೆ ನೀಡಿದ್ದರು. <br /> <br /> ಆನಂತರ ನ್ಯಾಯಾಧೀಶೆ ಪೂನಂ ಸಿಂಗ್ ಅವರನ್ನು ಪ್ರಕರಣದ ವಿಚಾರಣೆಗಾಗಿ ನೇಮಿಸಲಾಯಿತು. ಅವರ ಮುಂದೆ ಹೊಸದಾಗಿ ವಾದ, ಪ್ರತಿವಾದ ಮಂಡಿಸಲಾಗಿತ್ತು. ಗೋಧ್ರಾ ರೈಲು ದುರಂತದ ನಂತರ ನಡೆದ ಕೋಮುಗಲಭೆ ಪ್ರಕರಣಗಳ ಪೈಕಿ ತೀರ್ಪು ಪ್ರಕಟಿಸಲಾಗಿರುವ ಮೂರನೇ ಪ್ರಕರಣ ಇದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>