ಶನಿವಾರ ತಡರಾತ್ರಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಅವರು ಮಾತನಾಡಿದರು. ಈ ಸಭೆಗೆ ಪಿಡಿಪಿ, ಕಾಂಗ್ರೆಸ್ ಮತ್ತು ಬಿಜೆಪಿಯ ಹಿರಿಯ ನಾಯಕರು ಭಾಗವಹಿಸಿದ್ದರು.
ರಾಜ್ಯದಲ್ಲಿ ಭೀಕರ ಪ್ರವಾಹದಿಂದಾಗಿ ಆಸ್ತಿ ಮತ್ತು ಮೂಲಸೌಕರ್ಯ ಸೇರಿದಂತೆ ಸುಮಾರು ಆರು ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಒಮರ್ ವಿವರಿಸಿದರು.
ಜಮ್ಮು ಮತ್ತು ಶ್ರೀನಗರದ ಕೆಲ ಭಾಗಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. 30 ಸಾವಿರ ಸೌರದೀಪಗಳನ್ನು ನೀಡಲಾಗಿದೆ. ಚರಂಡಿಯಲ್ಲಿ ಹೂಳನ್ನು ತೆಗೆದು ನೀರು ಸರಾಗವಾಗಿ ಹರಿಯುವಂತೆ ಮಾಡಲಾಗುತ್ತಿದೆ. ತಾತ್ಕಾಲಿಕ ರಸ್ತೆ ನಿರ್ಮಾಣ ಕಾರ್ಯ ನಡೆಯುತ್ತಿದೆ ಎಂದು ಒಮರ್ ಸಭೆಗೆ ತಿಳಿಸಿದರು.
ನಿರಾಶ್ರಿತರ ಶಿಬಿರಗಳಲ್ಲಿ ತಂಗಿರುವ ಸಂತ್ರಸ್ತರಿಗೆ ಆಹಾರು, ನೀರು ಬಟ್ಟೆ, ಔಷಧಿ ಪೂರೈಕೆ ಕಾರ್ಯ ನಿರಾತಂಕವಾಗಿ ನಡೆಯುತ್ತಿದೆ ಎಂದು ಅವರು ವಿವರಿಸಿದರು.