<p><strong>ನವದೆಹಲಿ:</strong> ಪಾಕಿಸ್ತಾನದ ಗಡಿಗುಂಟ ಬಿಎಸ್ಎಫ್ ದಾಳಿ ತೀವ್ರಗೊಳಿಸಿದೆ. ಅಖ್ನೂರ್ ವಲಯದಲ್ಲಿ ಬಿಎಸ್ಎಫ್ ನಡೆಸಿದ ರಾಕೆಟ್ ದಾಳಿಗೆ ಪಾಕಿಸ್ತಾನದ ಬಂಕರ್ ನಾಶವಾಗಿದೆ. ಈ ದಾಳಿಯ ನಂತರ ಜಮ್ಮುವಿನಲ್ಲಿರುವ ಬಿಎಸ್ಎಫ್ ಕೇಂದ್ರಕ್ಕೆ ಕರೆ ಮಾಡಿರುವ ಪಾಕಿಸ್ತಾನ್ ರೇಂಜರ್ಸ್ ಅಧಿಕಾರಿಗಳು ಕದನ ವಿರಾಮಕ್ಕೆ ವಿನಂತಿಸಿದ್ದಾರೆ.</p>.<p>‘ಅಂತರರಾಷ್ಟ್ರೀಯ ಗಡಿಯುದ್ದಕ್ಕೂ ಪಾಕಿಸ್ತಾನ ನಡೆಸುತ್ತಿದ್ದ ಅಪ್ರಚೋದಿತ ಗುಂಡಿನ ದಾಳಿಗೆ ಬಿಎಸ್ಎಫ್ ತಕ್ಕ ಪ್ರತ್ಯುತ್ತರ ನೀಡುತ್ತಿದೆ. ಪಾಕಿಸ್ತಾನಕ್ಕೆ ಇದರಿಂದ ತೀವ್ರಹಾನಿಯಾಗಿತ್ತು. ಬೇರೆ ದಾರಿ ಕಾಣದೆ ಅವರು ಕದನ ವಿರಾಮಕ್ಕೆ ಬೇಡಿಕೆ ಇಟ್ಟಿದ್ದಾರೆ’ ಎಂದು ಬಿಎಸ್ಎಫ್ನ ಹಿರಿಯ ಅಧಿಕಾರಿಯೊಬ್ಬರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.</p>.<p>‘ಪಾಕಿಸ್ತಾನವು ಸಾಮಾನ್ಯವಾಗಿ ಪ್ರತಿವರ್ಷ ಬೆಳೆಕೊಯ್ಲು ಮುಗಿದ ನಂತರ ದಾಳಿ ನಡೆಸುತ್ತದೆ. ಭಾರತದ ನೆಲಕ್ಕೆ ಬಾಂಬ್ ಹಾಕಲು ಪಾಕಿಸ್ತಾನವು ಬಳಸುತ್ತಿದ್ದ ಬಂಕರ್ಗಳನ್ನು ಗುರುತಿಸಿದ್ದ ಬಿಎಸ್ಎಫ್ ಕಳೆದ ಮೂರು ದಿನಗಳಿಂದ ನಿರ್ದಿಷ್ಟ ದಾಳಿ ಆರಂಭಿಸಿತ್ತು. ಈ ದಾಳಿಗೆ ಶನಿವಾರ ನಿರೀಕ್ಷಿತ ಫಲಿತಾಂಶ ಸಿಕ್ಕಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಾಕಿಸ್ತಾನದ ಗಡಿಗುಂಟ ಬಿಎಸ್ಎಫ್ ದಾಳಿ ತೀವ್ರಗೊಳಿಸಿದೆ. ಅಖ್ನೂರ್ ವಲಯದಲ್ಲಿ ಬಿಎಸ್ಎಫ್ ನಡೆಸಿದ ರಾಕೆಟ್ ದಾಳಿಗೆ ಪಾಕಿಸ್ತಾನದ ಬಂಕರ್ ನಾಶವಾಗಿದೆ. ಈ ದಾಳಿಯ ನಂತರ ಜಮ್ಮುವಿನಲ್ಲಿರುವ ಬಿಎಸ್ಎಫ್ ಕೇಂದ್ರಕ್ಕೆ ಕರೆ ಮಾಡಿರುವ ಪಾಕಿಸ್ತಾನ್ ರೇಂಜರ್ಸ್ ಅಧಿಕಾರಿಗಳು ಕದನ ವಿರಾಮಕ್ಕೆ ವಿನಂತಿಸಿದ್ದಾರೆ.</p>.<p>‘ಅಂತರರಾಷ್ಟ್ರೀಯ ಗಡಿಯುದ್ದಕ್ಕೂ ಪಾಕಿಸ್ತಾನ ನಡೆಸುತ್ತಿದ್ದ ಅಪ್ರಚೋದಿತ ಗುಂಡಿನ ದಾಳಿಗೆ ಬಿಎಸ್ಎಫ್ ತಕ್ಕ ಪ್ರತ್ಯುತ್ತರ ನೀಡುತ್ತಿದೆ. ಪಾಕಿಸ್ತಾನಕ್ಕೆ ಇದರಿಂದ ತೀವ್ರಹಾನಿಯಾಗಿತ್ತು. ಬೇರೆ ದಾರಿ ಕಾಣದೆ ಅವರು ಕದನ ವಿರಾಮಕ್ಕೆ ಬೇಡಿಕೆ ಇಟ್ಟಿದ್ದಾರೆ’ ಎಂದು ಬಿಎಸ್ಎಫ್ನ ಹಿರಿಯ ಅಧಿಕಾರಿಯೊಬ್ಬರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.</p>.<p>‘ಪಾಕಿಸ್ತಾನವು ಸಾಮಾನ್ಯವಾಗಿ ಪ್ರತಿವರ್ಷ ಬೆಳೆಕೊಯ್ಲು ಮುಗಿದ ನಂತರ ದಾಳಿ ನಡೆಸುತ್ತದೆ. ಭಾರತದ ನೆಲಕ್ಕೆ ಬಾಂಬ್ ಹಾಕಲು ಪಾಕಿಸ್ತಾನವು ಬಳಸುತ್ತಿದ್ದ ಬಂಕರ್ಗಳನ್ನು ಗುರುತಿಸಿದ್ದ ಬಿಎಸ್ಎಫ್ ಕಳೆದ ಮೂರು ದಿನಗಳಿಂದ ನಿರ್ದಿಷ್ಟ ದಾಳಿ ಆರಂಭಿಸಿತ್ತು. ಈ ದಾಳಿಗೆ ಶನಿವಾರ ನಿರೀಕ್ಷಿತ ಫಲಿತಾಂಶ ಸಿಕ್ಕಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>