<p><strong>ವಾರಣಾಸಿ: </strong>`ಕನ್ನಡಿಗರು ಕೂಪಮಂಡೂಕರಲ್ಲ. ವಿಶಾಲ ಹೃದಯಿಗಳು. ಸಾಹಸಿಗಳು. ಆದುದರಿಂದಲೇ ಬೇರೆ ರಾಜ್ಯಗಳಲ್ಲಿ ಮಾತ್ರವಲ್ಲ, ವಿದೇಶದಲ್ಲೂ ಸಂಘಗಳನ್ನು ಸ್ಥಾಪಿಸಿ ಸಂಘಟಿತರಾಗಿದ್ದಾರೆ~ ಎಂದು ಕಾಶಿಯ ಡಾ. ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.<br /> <br /> ಅವರು ಇಲ್ಲಿ ನಡೆದ ವಿವಿಧ ರಾಜ್ಯಗಳಲ್ಲಿರುವ ಕನ್ನಡ ಸಂಘಗಳ ಎರಡನೇ ಮಹಾ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ವಿಶ್ವದಲ್ಲಿ ಜೀವಂತ ನಗರಿ ಎಂದರೆ ಕಾಶಿ. <br /> <br /> ಕರ್ನಾಟಕದಿಂದ ಉನ್ನತ ಅಧ್ಯಯನಕ್ಕಾಗಿ ಕಾಶಿಗೆ ಬರುವ ಎಲ್ಲ ಸಂಪ್ರದಾಯಗಳ ಮಠಾಧಿಪತಿಗಳಿಗೆ ಆಶ್ರಯಕೊಟ್ಟ ಜಂಗಮವಾಡಿ ಮಠವು ಕನ್ನಡ ಭಾಷೆಯ ಬೆಳವಣಿಗೆಗೆ ಹೆಚ್ಚಿನ ಅನುಕೂಲತೆ ಮಾಡಿಕೊಟ್ಟಿದೆ. <br /> <br /> ಇಲ್ಲಿನ ಮಹಾರಾಣಿ ಕಾಲೇಜಿನಲ್ಲಿ ಕನ್ನಡ ಡಿಪ್ಲೊಮಾ ಕೋರ್ಸ್ನ್ನು ಪ್ರಾರಂಭಿಸಿದವರು ಜಂಗಮವಾಡಿ ಮಠದ ವಿದ್ಯಾರ್ಥಿಗಳು ಎಂದು ಅವರು ಹೇಳಿದರು. <br /> <br /> ಕಾಶಿ ಹಿಂದೂ ವಿಶ್ವವಿದ್ಯಾಲಯದಲ್ಲಿ ಕನ್ನಡ ಅಧ್ಯಯನ ಪೀಠ ಸ್ಥಾಪಿಸಿದಂತೆ ಇಲ್ಲಿನ ಮಹಾತ್ಮ ಗಾಂಧಿ ವಿದ್ಯಾಪೀಠ ಮತ್ತು ಸಂಪೂರ್ಣಾನಂದ ಸಂಸ್ಕೃತ ವಿಶ್ವವಿದ್ಯಾಲಯಗಳಲ್ಲೂ ಕನ್ನಡ ಅಧ್ಯಯನ ಕೇಂದ್ರ ಸ್ಥಾಪಿಸಲು ಸರ್ಕಾರ ಮುಂದಾಗಬೇಕು ಎಂದು ಅವರು ಕರೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾರಣಾಸಿ: </strong>`ಕನ್ನಡಿಗರು ಕೂಪಮಂಡೂಕರಲ್ಲ. ವಿಶಾಲ ಹೃದಯಿಗಳು. ಸಾಹಸಿಗಳು. ಆದುದರಿಂದಲೇ ಬೇರೆ ರಾಜ್ಯಗಳಲ್ಲಿ ಮಾತ್ರವಲ್ಲ, ವಿದೇಶದಲ್ಲೂ ಸಂಘಗಳನ್ನು ಸ್ಥಾಪಿಸಿ ಸಂಘಟಿತರಾಗಿದ್ದಾರೆ~ ಎಂದು ಕಾಶಿಯ ಡಾ. ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.<br /> <br /> ಅವರು ಇಲ್ಲಿ ನಡೆದ ವಿವಿಧ ರಾಜ್ಯಗಳಲ್ಲಿರುವ ಕನ್ನಡ ಸಂಘಗಳ ಎರಡನೇ ಮಹಾ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ವಿಶ್ವದಲ್ಲಿ ಜೀವಂತ ನಗರಿ ಎಂದರೆ ಕಾಶಿ. <br /> <br /> ಕರ್ನಾಟಕದಿಂದ ಉನ್ನತ ಅಧ್ಯಯನಕ್ಕಾಗಿ ಕಾಶಿಗೆ ಬರುವ ಎಲ್ಲ ಸಂಪ್ರದಾಯಗಳ ಮಠಾಧಿಪತಿಗಳಿಗೆ ಆಶ್ರಯಕೊಟ್ಟ ಜಂಗಮವಾಡಿ ಮಠವು ಕನ್ನಡ ಭಾಷೆಯ ಬೆಳವಣಿಗೆಗೆ ಹೆಚ್ಚಿನ ಅನುಕೂಲತೆ ಮಾಡಿಕೊಟ್ಟಿದೆ. <br /> <br /> ಇಲ್ಲಿನ ಮಹಾರಾಣಿ ಕಾಲೇಜಿನಲ್ಲಿ ಕನ್ನಡ ಡಿಪ್ಲೊಮಾ ಕೋರ್ಸ್ನ್ನು ಪ್ರಾರಂಭಿಸಿದವರು ಜಂಗಮವಾಡಿ ಮಠದ ವಿದ್ಯಾರ್ಥಿಗಳು ಎಂದು ಅವರು ಹೇಳಿದರು. <br /> <br /> ಕಾಶಿ ಹಿಂದೂ ವಿಶ್ವವಿದ್ಯಾಲಯದಲ್ಲಿ ಕನ್ನಡ ಅಧ್ಯಯನ ಪೀಠ ಸ್ಥಾಪಿಸಿದಂತೆ ಇಲ್ಲಿನ ಮಹಾತ್ಮ ಗಾಂಧಿ ವಿದ್ಯಾಪೀಠ ಮತ್ತು ಸಂಪೂರ್ಣಾನಂದ ಸಂಸ್ಕೃತ ವಿಶ್ವವಿದ್ಯಾಲಯಗಳಲ್ಲೂ ಕನ್ನಡ ಅಧ್ಯಯನ ಕೇಂದ್ರ ಸ್ಥಾಪಿಸಲು ಸರ್ಕಾರ ಮುಂದಾಗಬೇಕು ಎಂದು ಅವರು ಕರೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>