<p><strong>ನವದೆಹಲಿ(ಪಿಟಿಐ): </strong>ಜವಾಹರ್ ಲಾಲ್ ನೆಹರು ವಿಶ್ವವಿದ್ಯಾನಿಯದಲ್ಲಿ ಅಲ್ಲಿನ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನಯ್ಯಾ ಕುಮಾರ್ ಅವರಿಗೆ ಒದಗಿಸಿದ ಖಾಸಗಿ ಭಧ್ರತೆಯನ್ನು ಜೆಎನ್ಯು ಆಡಳಿತ ಮಂಡಳಿ ಹಿಂಪಡೆದಿದೆ.<br /> <br /> ಫೆ.9ರಂದು ದೆಹಲಿಯ ಜೆಎನ್ಯು ಆವರಣದಲ್ಲಿ ಸಂಸತ್ ಮೇಲೆ ದಾಳಿ ನಡೆಸಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಅಫ್ಜಲ್ ಗುರುವಿನ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ದೇಶ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ ಎಂದು ದೇಶದ್ರೋಹ ಆರೋಪದ ಮೇಲೆ ಕನಯ್ಯಾ ಕುಮಾರ್ ಅವರು ಜೈಲು ಸೇರಿದ್ದರು.<br /> <br /> ಕನಯ್ಯಾ ಕುಮಾರ್ಗೆ ದೆಹಲಿ ಹೈಕೋರ್ಟ್ ಆರು ತಿಂಗಳ ಷರತ್ತು ಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.<br /> <br /> ಈವರೆಗೂ ಕನ್ನಯ್ಯಾ ಅವರಿಗೆ ನೀಡಿದ ಖಾಸಗಿ ಭದ್ರತೆಗೆ 5 ಲಕ್ಷ ರೂಗಳು ವೆಚ್ಚ ಮಾಡಲಾಗಿದೆ ಎಂದು ಜೆಎನ್ಯುನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.<br /> <br /> ಕನ್ನಯ್ಯಾ ಅವರ ಭದ್ರತೆಗೆ ಸಂಬಂಧಿಸಿದಂತೆ ಜೆಎನ್ಯು ಕುಲಪತಿ, ಹಿರಿಯ ಭದ್ರತಾ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಒಬ್ಬ ವ್ಯಕ್ತಿಯ ಖಾಸಗಿ ಭದ್ರತೆಗಾಗಿ ಆಪಾರ ಪ್ರಮಾಣದ ಹಣವನ್ನು ವೆಚ್ಚ ಮಾಡಲು ವಿಶ್ವವಿದ್ಯಾಲಯ ಸಿದ್ಧವಿಲ್ಲ ಎಂದಿದ್ದಾರೆ.<br /> <br /> ಕ್ಯಾಂಪಸ್ನಲ್ಲಿ ಯಾವುದೇ ಅಹಿತಕಾರ ಘಟನೆ ನಡೆಯಾದಂತೆ ನೋಡಿಕೊಳ್ಳಲು ಸಾಕಷ್ಟು ಭದ್ರತೆಯನ್ನು ಒದಗಿಸಲಾಗಿದೆ. ಆದ್ದರಿಂದ ಕನ್ನಯಾ ಅವರಿಗೆ ಪ್ರತೇಕ ಭದ್ರತೆ ಒದಗಿಸಲು ಸಾಧ್ಯವಿಲ್ಲ ಎಂದಿದ್ದಾರೆ.<br /> <br /> ಪ್ರಸ್ತುತ ಕನ್ನಯಾ ಅವರಿಗೆ ದೆಹಲಿ ಹೈಕೋರ್ಟ್ ನಿರ್ದೇಶನದಂತೆ ದೆಹಲಿ ಪೊಲೀಸರ ಭದ್ರತೆಯನ್ನು ಕಲ್ಪಿಸಲಾಗಿದೆ. ಆದರೆ ಕ್ಯಾಂಪಸ್ನಲ್ಲಿ ಪೊಲೀಸರ ಭದ್ರತೆ ಬೇಡ ಎಂದು ಕನ್ನಯಾ ಕುಮಾರ್ ವಿ ವಿ ಕುಲಪತಿಗೆ ಪತ್ರ ಬರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ(ಪಿಟಿಐ): </strong>ಜವಾಹರ್ ಲಾಲ್ ನೆಹರು ವಿಶ್ವವಿದ್ಯಾನಿಯದಲ್ಲಿ ಅಲ್ಲಿನ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನಯ್ಯಾ ಕುಮಾರ್ ಅವರಿಗೆ ಒದಗಿಸಿದ ಖಾಸಗಿ ಭಧ್ರತೆಯನ್ನು ಜೆಎನ್ಯು ಆಡಳಿತ ಮಂಡಳಿ ಹಿಂಪಡೆದಿದೆ.<br /> <br /> ಫೆ.9ರಂದು ದೆಹಲಿಯ ಜೆಎನ್ಯು ಆವರಣದಲ್ಲಿ ಸಂಸತ್ ಮೇಲೆ ದಾಳಿ ನಡೆಸಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಅಫ್ಜಲ್ ಗುರುವಿನ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ದೇಶ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ ಎಂದು ದೇಶದ್ರೋಹ ಆರೋಪದ ಮೇಲೆ ಕನಯ್ಯಾ ಕುಮಾರ್ ಅವರು ಜೈಲು ಸೇರಿದ್ದರು.<br /> <br /> ಕನಯ್ಯಾ ಕುಮಾರ್ಗೆ ದೆಹಲಿ ಹೈಕೋರ್ಟ್ ಆರು ತಿಂಗಳ ಷರತ್ತು ಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.<br /> <br /> ಈವರೆಗೂ ಕನ್ನಯ್ಯಾ ಅವರಿಗೆ ನೀಡಿದ ಖಾಸಗಿ ಭದ್ರತೆಗೆ 5 ಲಕ್ಷ ರೂಗಳು ವೆಚ್ಚ ಮಾಡಲಾಗಿದೆ ಎಂದು ಜೆಎನ್ಯುನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.<br /> <br /> ಕನ್ನಯ್ಯಾ ಅವರ ಭದ್ರತೆಗೆ ಸಂಬಂಧಿಸಿದಂತೆ ಜೆಎನ್ಯು ಕುಲಪತಿ, ಹಿರಿಯ ಭದ್ರತಾ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಒಬ್ಬ ವ್ಯಕ್ತಿಯ ಖಾಸಗಿ ಭದ್ರತೆಗಾಗಿ ಆಪಾರ ಪ್ರಮಾಣದ ಹಣವನ್ನು ವೆಚ್ಚ ಮಾಡಲು ವಿಶ್ವವಿದ್ಯಾಲಯ ಸಿದ್ಧವಿಲ್ಲ ಎಂದಿದ್ದಾರೆ.<br /> <br /> ಕ್ಯಾಂಪಸ್ನಲ್ಲಿ ಯಾವುದೇ ಅಹಿತಕಾರ ಘಟನೆ ನಡೆಯಾದಂತೆ ನೋಡಿಕೊಳ್ಳಲು ಸಾಕಷ್ಟು ಭದ್ರತೆಯನ್ನು ಒದಗಿಸಲಾಗಿದೆ. ಆದ್ದರಿಂದ ಕನ್ನಯಾ ಅವರಿಗೆ ಪ್ರತೇಕ ಭದ್ರತೆ ಒದಗಿಸಲು ಸಾಧ್ಯವಿಲ್ಲ ಎಂದಿದ್ದಾರೆ.<br /> <br /> ಪ್ರಸ್ತುತ ಕನ್ನಯಾ ಅವರಿಗೆ ದೆಹಲಿ ಹೈಕೋರ್ಟ್ ನಿರ್ದೇಶನದಂತೆ ದೆಹಲಿ ಪೊಲೀಸರ ಭದ್ರತೆಯನ್ನು ಕಲ್ಪಿಸಲಾಗಿದೆ. ಆದರೆ ಕ್ಯಾಂಪಸ್ನಲ್ಲಿ ಪೊಲೀಸರ ಭದ್ರತೆ ಬೇಡ ಎಂದು ಕನ್ನಯಾ ಕುಮಾರ್ ವಿ ವಿ ಕುಲಪತಿಗೆ ಪತ್ರ ಬರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>