ಒಡಿಶಾ: ಕರಡಿಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಂದಾದ ಪ್ರಭು ಭಾತ್ರಾ ಎಂಬುವವರು ಕರಡಿಯ ದಾಳಿಗೆ ಮೃತಪಟ್ಟಿರುವ ಘಟನೆ ನಡೆದಿದೆ.
ಬುಧವಾರ ಸ್ಥಳೀಯ ಅರಣ್ಯ ಪ್ರದೇಶದ ಬಳಿ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.
ಪ್ರಭು ಭಾತ್ರಾ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಕೆಲವು ಪ್ರಯಾಣಿಕರೊಂದಿಗೆ ಹಿಂದಿರುಗುತ್ತಿದ್ದ ವೇಳೆ ಅರಣ್ಯದ ಬಳಿ ಕರಡಿಯನ್ನು ಕಂಡು ಅದರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದರು. ತಕ್ಷಣ ಕರಡಿ ಅವರ ಮೇಲೆ ದಾಳಿ ನಡೆಸಿದೆ.