ಮುಂಬೈ (ಪಿಟಿಐ): ಪಾಕ್ ಕಲಾವಿದರಿಗೆ ಬೆಂಬಲ ಸೂಚಿಸಿರುವು ದನ್ನು ವಿರೋಧಿಸಿ ಚಲನಚಿತ್ರ ನಿರ್ಮಾಪಕ ಕರಣ್ ಜೋಹರ್ ಅವರ ಪ್ರೊಡಕ್ಷನ್ ಕಚೇರಿ ಮುಂದೆ ಎಂಎನ್ಎಸ್ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ನಡೆಸಿದ 15 ಕಾರ್ಯ ಕರ್ತರನ್ನು ಪೊಲೀಸರು ಮುಂಜಾಗ್ರತ ಕ್ರಮವಾಗಿ ಬಂಧಿಸಿದರು.
ಪಾಕಿಸ್ತಾನದ ಕಲಾವಿದರಿಗೆ ಭಾರತದಲ್ಲಿ ನಿಷೇಧ ಹೇರುವುದ ರಿಂದ ಭಯೋತ್ಪಾದನೆ ಸಮಸ್ಯೆಗೆ ಪರಿಹಾರ ದೊರೆಯುವುದಿಲ್ಲ ಎಂದು ಕರಣ್ ಜೋಹರ್ ಹೇಳಿಕೆ ನೀಡಿದ್ದರು.
ಜೋಹರ್ ವಿರುದ್ಧ ನಡೆಸಿದ ಪ್ರತಿಭಟನೆಯನ್ನು ಸಮರ್ಥಿಸಿ ಕೊಂಡಿರುವ ಎಂಎನ್ಎಸ್ ಪ್ರಧಾನ ಕಾರ್ಯದರ್ಶಿ ಶಾಲಿನಿ ಠಾಕ್ರೆ, ಜೊಹರ್ ಅವರ ‘ಏ ದಿಲ್ ಹೈ ಮುಷ್ಕಿಲ್’ ಚಲನಚಿತ್ರ ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.
ಜೊಹರ್ ಅವರ ಹೇಳಿಕೆ ಅಪ್ರಬುದ್ಧತೆ ಮತ್ತು ಪೊಳ್ಳುತನದಿಂದ ಕೂಡಿದೆ ಎಂದು ಹೇಳಿದ್ದಾರೆ.