ಇಲ್ಲಿನ ಪೆಯಕರಂಬು ಮೈದಾನದಲ್ಲಿ ಕಲಾಂ ಅವರ ಅಂತ್ಯಕ್ರಿಯೆಗೆ ಬೆಳಗ್ಗೆಯಿಂದಲೇ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು.
ಕಲಾಂ ಅವರ ಪಾರ್ಥಿವ ಶರೀರರಕ್ಕೆ ಸಾರ್ವಜನಿಕರು ಮತ್ತು ಗಣ್ಯ ವ್ಯಕ್ತಿಗಳು ಅಂತಿಮ ನಮನ ಸಲ್ಲಿಸಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ, ತಮಿಳುನಾಡಿನ ರಾಜ್ಯಪಾಲ ರೋಸಯ್ಯ, ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ, ಕೇಂದ್ರ ಸಚಿವರು ಸೇರಿದಂತೆ ಅನೇಕ ಗಣ್ಯರು ಅಂತ್ಯಕ್ರಿಯೆ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಿದ ಬಳಿಕ ಕಲಾಂ ಅವರ ಪಾರ್ಥಿವ ಶರೀರವನ್ನು ಅವರ ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು. ನಂತರ ಇಸ್ಲಾಂ ಧಾರ್ಮಿಕ ವಿಧಿ ವಿಧಾನಗಳ ಅನುಸಾರ ಕಲಾಂ ಅವರ ಅಂತ್ಯಕ್ರಿಯೆ ನಡೆಸಲಾಯಿತು.