<p><strong>ನವದೆಹಲಿ (ಪಿಟಿಐ):</strong> ಕಲ್ಲಿದ್ದಲು ಗಣಿಗಾರಿಕೆಯ ಪರವಾನಗಿಗಳ ಮೇಲೆ ನಿರ್ಬಂಧ ವಿಧಿಸಿರುವುದೇ ಕಲ್ಲಿದ್ದಲು ಕ್ಷಾಮಕ್ಕೆ ಕಾರಣ ಎಂಬ ಆರೋಪವನ್ನು ಕೇಂದ್ರ ಪರಿಸರ ಮತ್ತು ಅರಣ್ಯ ಖಾತೆ ಸಚಿವೆ ಜಯಂತಿ ನಟರಾಜನ್ ತಳ್ಳಿಹಾಕಿದ್ದಾರೆ.<br /> <br /> `ಎಷ್ಟು ಇಂಧನ ಉತ್ಪಾದಿಸಬೇಕಿತ್ತೋ ಅಷ್ಟು ಪರವಾನಗಿಯನ್ನು ನೀಡಲಾಗಿದೆ~ ಎಂದು ಅವರು ಹೇಳಿದ್ದಾರೆ. ಹುಲಿ ಅಭಯಾರಣ್ಯ ವಲಯದಲ್ಲಿ ಕಲ್ಲಿದ್ದಲು ಗಣಿಗಾರಿಕೆಗೆ ತಡೆ ನೀಡುವಂತೆ ಸುಪ್ರೀಂಕೋರ್ಟ್ ನೀಡಿದ್ದ ಆದೇಶವನ್ನು ಜಾರಿ ಮಾಡಲಾಗಿದೆ ಎಂದಿರುವ ಅವರು, `ನಾವು ಸುಪ್ರೀಂಕೋರ್ಟ್ ಆದೇಶವನ್ನು ಪಾಲಿಸ್ದ್ದಿದ್ದೇವೆ ಅಷ್ಟೇ~ ಎಂದಿದ್ದಾರೆ. <br /> <br /> 12ನೇ ಪಂಚವಾರ್ಷಿಕ ಯೋಜನೆ (2012-17) ರನ್ವಯ ಎಷ್ಟು ಕಲ್ಲಿದ್ದಲು ಪರವಾನಗಿಗಳನ್ನು ನೀಡಬೇಕಿತ್ತೋ ಅವುಗಳಲ್ಲಿ ಕೆಲವನ್ನು ಈಗಾಗಲೇ ನೀಡಲಾಗಿದ್ದು. ಇನ್ನೂ ಉಳಿದ ಗಣಿಗಾರಿಕೆಗೆ ಪರವಾನಗಿಗಳನ್ನು ನೀಡುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಹೇಳಿದ್ದಾರೆ. <br /> <br /> ಸಾರ್ವಜನಿಕ ವಲಯದ ಕಲ್ಲಿದ್ದಲು ಗಣಿ ಸಂಸ್ಥೆಯಾದ ಕೋಲ್ ಇಂಡಿಯಾ ಸಂಸ್ಥೆಯು ದೇಶಕ್ಕೆ ಬೇಕಾಗುವ ಇಂಧನ ಉತ್ಪಾದನೆಗೆ ಸಾಕಷ್ಟು ಕಲ್ಲಿದ್ದಲು ನೀಡುತ್ತಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ತೀಕ್ಷ್ಣವಾದ ಪತ್ರವನ್ನು ಬರೆದಿರುವ ಬಗ್ಗೆ ಹೇಳಿಕೆಯನ್ನು ನೀಡಿರುವ ಸಚಿವರು, ಕಲ್ಲಿದ್ದಲು `ಕೊರತೆಗೆ ಪರಿಸರ ಸಚಿವಾಲಯ ಕಾರಣವಲ್ಲ~ ಎಂದು ತಿಳಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಕಲ್ಲಿದ್ದಲು ಗಣಿಗಾರಿಕೆಯ ಪರವಾನಗಿಗಳ ಮೇಲೆ ನಿರ್ಬಂಧ ವಿಧಿಸಿರುವುದೇ ಕಲ್ಲಿದ್ದಲು ಕ್ಷಾಮಕ್ಕೆ ಕಾರಣ ಎಂಬ ಆರೋಪವನ್ನು ಕೇಂದ್ರ ಪರಿಸರ ಮತ್ತು ಅರಣ್ಯ ಖಾತೆ ಸಚಿವೆ ಜಯಂತಿ ನಟರಾಜನ್ ತಳ್ಳಿಹಾಕಿದ್ದಾರೆ.<br /> <br /> `ಎಷ್ಟು ಇಂಧನ ಉತ್ಪಾದಿಸಬೇಕಿತ್ತೋ ಅಷ್ಟು ಪರವಾನಗಿಯನ್ನು ನೀಡಲಾಗಿದೆ~ ಎಂದು ಅವರು ಹೇಳಿದ್ದಾರೆ. ಹುಲಿ ಅಭಯಾರಣ್ಯ ವಲಯದಲ್ಲಿ ಕಲ್ಲಿದ್ದಲು ಗಣಿಗಾರಿಕೆಗೆ ತಡೆ ನೀಡುವಂತೆ ಸುಪ್ರೀಂಕೋರ್ಟ್ ನೀಡಿದ್ದ ಆದೇಶವನ್ನು ಜಾರಿ ಮಾಡಲಾಗಿದೆ ಎಂದಿರುವ ಅವರು, `ನಾವು ಸುಪ್ರೀಂಕೋರ್ಟ್ ಆದೇಶವನ್ನು ಪಾಲಿಸ್ದ್ದಿದ್ದೇವೆ ಅಷ್ಟೇ~ ಎಂದಿದ್ದಾರೆ. <br /> <br /> 12ನೇ ಪಂಚವಾರ್ಷಿಕ ಯೋಜನೆ (2012-17) ರನ್ವಯ ಎಷ್ಟು ಕಲ್ಲಿದ್ದಲು ಪರವಾನಗಿಗಳನ್ನು ನೀಡಬೇಕಿತ್ತೋ ಅವುಗಳಲ್ಲಿ ಕೆಲವನ್ನು ಈಗಾಗಲೇ ನೀಡಲಾಗಿದ್ದು. ಇನ್ನೂ ಉಳಿದ ಗಣಿಗಾರಿಕೆಗೆ ಪರವಾನಗಿಗಳನ್ನು ನೀಡುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಹೇಳಿದ್ದಾರೆ. <br /> <br /> ಸಾರ್ವಜನಿಕ ವಲಯದ ಕಲ್ಲಿದ್ದಲು ಗಣಿ ಸಂಸ್ಥೆಯಾದ ಕೋಲ್ ಇಂಡಿಯಾ ಸಂಸ್ಥೆಯು ದೇಶಕ್ಕೆ ಬೇಕಾಗುವ ಇಂಧನ ಉತ್ಪಾದನೆಗೆ ಸಾಕಷ್ಟು ಕಲ್ಲಿದ್ದಲು ನೀಡುತ್ತಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ತೀಕ್ಷ್ಣವಾದ ಪತ್ರವನ್ನು ಬರೆದಿರುವ ಬಗ್ಗೆ ಹೇಳಿಕೆಯನ್ನು ನೀಡಿರುವ ಸಚಿವರು, ಕಲ್ಲಿದ್ದಲು `ಕೊರತೆಗೆ ಪರಿಸರ ಸಚಿವಾಲಯ ಕಾರಣವಲ್ಲ~ ಎಂದು ತಿಳಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>