<p><strong>ನವದೆಹಲಿ (ಪಿಟಿಐ):</strong> ಪತ್ರಿಕಾ ಸಂಸ್ಥೆಯೊಂದಕ್ಕೆ 90 ಕೋಟಿ ರೂಪಾಯಿ ಸಾಲ ನೀಡಿರುವ ಕಾಂಗ್ರೆಸ್ ಪಕ್ಷದ ಮಾನ್ಯತೆಯನ್ನು ರದ್ದುಗೊಳಿಸಲು ಕೋರಿ ತಾವು ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಮನವಿಯನ್ನು ವಜಾಗೊಳಿಸಿರುವುದನ್ನು ಕೋರ್ಟ್ನಲ್ಲಿ ಪ್ರಶ್ನಿಸುವುದಾಗಿ ಜನತಾ ಪಕ್ಷದ ನಾಯಕ ಸುಬ್ರಮಣ್ಯನ್ ಸ್ವಾಮಿ ತಿಳಿಸಿದ್ದಾರೆ.<br /> <br /> `ನ್ಯಾಷನಲ್ ಹೆರಾಲ್ಡ್~ ವೃತ್ತಪತ್ರಿಕೆ ನಡೆಸುತ್ತಿರುವ ಅಸೋಸಿಯೇಟ್ಸ್ ಜರ್ನಲ್ಸ್ ಸಂಸ್ಥೆಗೆ ಕಾಂಗ್ರೆಸ್ ರೂ. 90 ಕೋಟಿ ಸಾಲ ನೀಡಿರುವುದು ರಾಜಕೀಯ ಪಕ್ಷಗಳ ನೋಂದಣಿ ಕಾಯ್ದೆ ಉಲ್ಲಂಘನೆಯಾಗಿರುವುದರಿಂದ ಪಕ್ಷದ ಮಾನ್ಯತೆಯನ್ನು ರದ್ದುಗೊಳಿಸಲು ಕೋರಿ ಸ್ವಾಮಿ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು.<br /> <br /> ಚುನಾವಣಾ ಆಯೋಗದ ಈ ನಿರ್ಧಾರ ಜನರಲ್ಲಿ ಅದರ ಬಗ್ಗೆ ಇರುವ ವಿಶ್ವಾಸಾರ್ಹತೆ ಕುಂದಿಸುವಂತೆ ಮಾಡಿದೆ. ಆದಾಗ್ಯೂ ತಾವು ಈ ವಿಷಯವನ್ನು ಕೋರ್ಟ್ನಲ್ಲಿ ಇತ್ಯರ್ಥಪಡಿಸಿಕೊಳ್ಳುವೆ. ಆಯೋಗ ಇಬ್ಬಗೆಯ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿರುವ ಸ್ವಾಮಿ, ಪತ್ರಿಕೆಯೊಂದರಲ್ಲಿ ತಾವು ಬರೆದ ಲೇಖನಕ್ಕೆ ಸಂಬಂಧಿಸಿದಂತೆ ತಮ್ಮ ಪಕ್ಷದ ನೋಂದಣಿ ರದ್ದುಗೊಳಿಸುವ ಹುನ್ನಾರವೂ ಆಯೋಗದಲ್ಲಿ ನಡೆಯುತ್ತಿದೆ ಎಂದು ದೂರಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಪತ್ರಿಕಾ ಸಂಸ್ಥೆಯೊಂದಕ್ಕೆ 90 ಕೋಟಿ ರೂಪಾಯಿ ಸಾಲ ನೀಡಿರುವ ಕಾಂಗ್ರೆಸ್ ಪಕ್ಷದ ಮಾನ್ಯತೆಯನ್ನು ರದ್ದುಗೊಳಿಸಲು ಕೋರಿ ತಾವು ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಮನವಿಯನ್ನು ವಜಾಗೊಳಿಸಿರುವುದನ್ನು ಕೋರ್ಟ್ನಲ್ಲಿ ಪ್ರಶ್ನಿಸುವುದಾಗಿ ಜನತಾ ಪಕ್ಷದ ನಾಯಕ ಸುಬ್ರಮಣ್ಯನ್ ಸ್ವಾಮಿ ತಿಳಿಸಿದ್ದಾರೆ.<br /> <br /> `ನ್ಯಾಷನಲ್ ಹೆರಾಲ್ಡ್~ ವೃತ್ತಪತ್ರಿಕೆ ನಡೆಸುತ್ತಿರುವ ಅಸೋಸಿಯೇಟ್ಸ್ ಜರ್ನಲ್ಸ್ ಸಂಸ್ಥೆಗೆ ಕಾಂಗ್ರೆಸ್ ರೂ. 90 ಕೋಟಿ ಸಾಲ ನೀಡಿರುವುದು ರಾಜಕೀಯ ಪಕ್ಷಗಳ ನೋಂದಣಿ ಕಾಯ್ದೆ ಉಲ್ಲಂಘನೆಯಾಗಿರುವುದರಿಂದ ಪಕ್ಷದ ಮಾನ್ಯತೆಯನ್ನು ರದ್ದುಗೊಳಿಸಲು ಕೋರಿ ಸ್ವಾಮಿ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು.<br /> <br /> ಚುನಾವಣಾ ಆಯೋಗದ ಈ ನಿರ್ಧಾರ ಜನರಲ್ಲಿ ಅದರ ಬಗ್ಗೆ ಇರುವ ವಿಶ್ವಾಸಾರ್ಹತೆ ಕುಂದಿಸುವಂತೆ ಮಾಡಿದೆ. ಆದಾಗ್ಯೂ ತಾವು ಈ ವಿಷಯವನ್ನು ಕೋರ್ಟ್ನಲ್ಲಿ ಇತ್ಯರ್ಥಪಡಿಸಿಕೊಳ್ಳುವೆ. ಆಯೋಗ ಇಬ್ಬಗೆಯ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿರುವ ಸ್ವಾಮಿ, ಪತ್ರಿಕೆಯೊಂದರಲ್ಲಿ ತಾವು ಬರೆದ ಲೇಖನಕ್ಕೆ ಸಂಬಂಧಿಸಿದಂತೆ ತಮ್ಮ ಪಕ್ಷದ ನೋಂದಣಿ ರದ್ದುಗೊಳಿಸುವ ಹುನ್ನಾರವೂ ಆಯೋಗದಲ್ಲಿ ನಡೆಯುತ್ತಿದೆ ಎಂದು ದೂರಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>