<p>ನವದೆಹಲಿ (ಐಎಎನ್ಎಸ್): ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಸಂಸ್ಥೆಗೆ ~ಬಡ್ಡಿ ರಹಿತ ಸಾಲ~ ನೀಡಿದ್ದಕ್ಕಾಗಿ ಕಾಂಗ್ರೆಸ್ ಪಕ್ಷದ ಮಾನ್ಯತೆಯನ್ನು ರದ್ದು ಪಡಿಸಬೇಕು ಎಂಬುದಾಗಿ ತಾವು ಚುನಾವಣಾ ಆಯೋಗವನ್ನು ಒತ್ತಾಯಿಸುವುದಾಗಿ ಜನತಾ ಪಕ್ಷದ ಮುಖ್ಯಸ್ಥ ಸುಬ್ರಮಣಿಯನ್ ಸ್ವಾಮಿ ಅವರು ಶನಿವಾರ ಇಲ್ಲಿ ಹೇಳಿದರು.<br /> <br /> ನ್ಯಾಷನಲ್ ಹೆರಾಲ್ಡ್ ಪ್ರಕಾಶಕರಿಗೆ ತಾನು ಸಾಲ ನೀಡಿರುವುದು ಹೌದು ಎಂಬುದಾಗಿ ಕಾಂಗ್ರೆಸ್ ಪಕ್ಷವು ಒಪ್ಪಿಕೊಂಡ ಒಂದು ದಿನದ ಬಳಿಕ ಸುದ್ದಿಗಾರರ ಜೊತೆ ಮಾತನಾಡುತ್ತಿದ್ದ ಸ್ವಾಮಿ, ~ಕಾಂಗ್ರೆಸ್ ಪಕ್ಷದ ಮಾನ್ಯತೆ ರದ್ದು ಪಡಿಸುವಂತೆ ಕೋರಿ ಚುನಾವಣಾ ಆಯೋಗಕ್ಕೆ ನಾನು ದೂರು ಸಲ್ಲಿಸುತ್ತಿದ್ದೇನೆ~ ಎಂದು ಪ್ರಕಟಿಸಿದರು.<br /> <br /> ಸಾಲ ನೀಡಿದ್ದರಿಂದ ತಾನು ಯಾವುದೇ ವಾಣಿಜ್ಯ ಲಾಭ ಗಳಿಸಿಲ್ಲ ಎಂಬುದಾಗಿ ಕಾಂಗ್ರೆಸ್ ಶುಕ್ರವಾರ ತಿಳಿಸಿತ್ತು.<br /> <br /> ~ವೃತ್ತ ಪತ್ರಿಕೆಯನ್ನು ಮತ್ತೆ ಸುಸ್ಥಿರ ಸ್ಥಿತಿಗೆ ತರುವ ಪ್ರಕ್ರಿಯೆ ಆರಂಭಿಸಲು ನೆರವಾಗುವ ಸಲುವಾಗಿ ದಿ ಅಸೋಸಿಯೇಟೆಡ್ ಜರ್ನಲ್ ಲಿಮಿಟೆಡ್ ಸಂಸ್ಥೆಯನ್ನು ಬೆಂಬಲಿಸುವ ಮೂಲಕ ಕಾಂಗ್ರೆಸ್ ತನ್ನ ಕರ್ತವ್ಯ ನಿರ್ವಹಣೆ ಮಾಡಿದೆ~ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜನಾರ್ದನ ದ್ವಿವೇದಿ ಹೇಳಿದ್ದರು.<br /> <br /> ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರ ~ತಪ್ಪು ನಡೆಗಳು~ ದೆಹಲಿಯ ಹೆರಾಲ್ಡ್ ಹೌಸ್ ಮಾರಾಟಕ್ಕೆ ಕಾರಣವಾಯಿತು ಎಂದು ಸ್ವಾಮಿ ಗುರುವಾರ ಆಪಾದಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಐಎಎನ್ಎಸ್): ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಸಂಸ್ಥೆಗೆ ~ಬಡ್ಡಿ ರಹಿತ ಸಾಲ~ ನೀಡಿದ್ದಕ್ಕಾಗಿ ಕಾಂಗ್ರೆಸ್ ಪಕ್ಷದ ಮಾನ್ಯತೆಯನ್ನು ರದ್ದು ಪಡಿಸಬೇಕು ಎಂಬುದಾಗಿ ತಾವು ಚುನಾವಣಾ ಆಯೋಗವನ್ನು ಒತ್ತಾಯಿಸುವುದಾಗಿ ಜನತಾ ಪಕ್ಷದ ಮುಖ್ಯಸ್ಥ ಸುಬ್ರಮಣಿಯನ್ ಸ್ವಾಮಿ ಅವರು ಶನಿವಾರ ಇಲ್ಲಿ ಹೇಳಿದರು.<br /> <br /> ನ್ಯಾಷನಲ್ ಹೆರಾಲ್ಡ್ ಪ್ರಕಾಶಕರಿಗೆ ತಾನು ಸಾಲ ನೀಡಿರುವುದು ಹೌದು ಎಂಬುದಾಗಿ ಕಾಂಗ್ರೆಸ್ ಪಕ್ಷವು ಒಪ್ಪಿಕೊಂಡ ಒಂದು ದಿನದ ಬಳಿಕ ಸುದ್ದಿಗಾರರ ಜೊತೆ ಮಾತನಾಡುತ್ತಿದ್ದ ಸ್ವಾಮಿ, ~ಕಾಂಗ್ರೆಸ್ ಪಕ್ಷದ ಮಾನ್ಯತೆ ರದ್ದು ಪಡಿಸುವಂತೆ ಕೋರಿ ಚುನಾವಣಾ ಆಯೋಗಕ್ಕೆ ನಾನು ದೂರು ಸಲ್ಲಿಸುತ್ತಿದ್ದೇನೆ~ ಎಂದು ಪ್ರಕಟಿಸಿದರು.<br /> <br /> ಸಾಲ ನೀಡಿದ್ದರಿಂದ ತಾನು ಯಾವುದೇ ವಾಣಿಜ್ಯ ಲಾಭ ಗಳಿಸಿಲ್ಲ ಎಂಬುದಾಗಿ ಕಾಂಗ್ರೆಸ್ ಶುಕ್ರವಾರ ತಿಳಿಸಿತ್ತು.<br /> <br /> ~ವೃತ್ತ ಪತ್ರಿಕೆಯನ್ನು ಮತ್ತೆ ಸುಸ್ಥಿರ ಸ್ಥಿತಿಗೆ ತರುವ ಪ್ರಕ್ರಿಯೆ ಆರಂಭಿಸಲು ನೆರವಾಗುವ ಸಲುವಾಗಿ ದಿ ಅಸೋಸಿಯೇಟೆಡ್ ಜರ್ನಲ್ ಲಿಮಿಟೆಡ್ ಸಂಸ್ಥೆಯನ್ನು ಬೆಂಬಲಿಸುವ ಮೂಲಕ ಕಾಂಗ್ರೆಸ್ ತನ್ನ ಕರ್ತವ್ಯ ನಿರ್ವಹಣೆ ಮಾಡಿದೆ~ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜನಾರ್ದನ ದ್ವಿವೇದಿ ಹೇಳಿದ್ದರು.<br /> <br /> ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರ ~ತಪ್ಪು ನಡೆಗಳು~ ದೆಹಲಿಯ ಹೆರಾಲ್ಡ್ ಹೌಸ್ ಮಾರಾಟಕ್ಕೆ ಕಾರಣವಾಯಿತು ಎಂದು ಸ್ವಾಮಿ ಗುರುವಾರ ಆಪಾದಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>