<p><strong>ನವದೆಹಲಿ (ಪಿಟಿಐ): </strong>ತಿರುವನಂತಪುರ ಸಂಸದ ಶಶಿ ತರೂರ್ ಅವರನ್ನು ಸೋಮವಾರ ಕಾಂಗ್ರೆಸ್ ವಕ್ತಾರ ಸ್ಥಾನದಿಂದ ವಜಾಗೊಳಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶಂಸಿದ್ದಾರೆ ಎಂದು ಕೇರಳ ಕಾಂಗ್ರೆಸ್ ಸಮಿತಿಯು ಎಐಸಿಸಿಯ ಶಿಸ್ತುಪಾಲನ ಸಮಿತಿಗೆ ದೂರು ನೀಡಿತ್ತು.<br /> <br /> ಸಮಿತಿಯು ತರೂರ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವಕ್ತಾರ ಸ್ಥಾನದಿಂದ ವಜಾಗೊಳಿಸಿದೆ. ಸಮಿತಿಯ ಈ ನಿರ್ಧಾರಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಒಪ್ಪಿಗೆ ನೀಡಿದ್ದಾರೆ. ಕೇರಳ ಕಾಂಗ್ರೆಸ್ ಸಮಿತಿಯ ದೂರಿನ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜನಾರ್ಧನ ದ್ವಿವೇದಿ ಪ್ರತಿಕ್ರಿಯಿಸಿದ್ದಾರೆ.<br /> <br /> ನರೇಂದ್ರ ಮೋದಿ ಅವರು ಶಶಿ ತರೂರ್ ಅವರನ್ನು ‘ಸ್ವಚ್ಛ ಭಾರತ್ ಅಭಿಯಾನ’ದ ರಾಯಭಾರಿಯನ್ನಾಗಿ ನೇಮಕ ಮಾಡಿದ್ದರು. ಇದಕ್ಕೆ ತರೂರ್ ಒಪ್ಪಿಗೆ ಸೂಚಿಸಿದ ಮೇಲೆ ಕೇರಳ ಕಾಂಗ್ರೆಸ್ ಸಮಿತಿ ಹೈಕಮಾಂಡ್ಗೆ ದೂರು ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ತಿರುವನಂತಪುರ ಸಂಸದ ಶಶಿ ತರೂರ್ ಅವರನ್ನು ಸೋಮವಾರ ಕಾಂಗ್ರೆಸ್ ವಕ್ತಾರ ಸ್ಥಾನದಿಂದ ವಜಾಗೊಳಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶಂಸಿದ್ದಾರೆ ಎಂದು ಕೇರಳ ಕಾಂಗ್ರೆಸ್ ಸಮಿತಿಯು ಎಐಸಿಸಿಯ ಶಿಸ್ತುಪಾಲನ ಸಮಿತಿಗೆ ದೂರು ನೀಡಿತ್ತು.<br /> <br /> ಸಮಿತಿಯು ತರೂರ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವಕ್ತಾರ ಸ್ಥಾನದಿಂದ ವಜಾಗೊಳಿಸಿದೆ. ಸಮಿತಿಯ ಈ ನಿರ್ಧಾರಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಒಪ್ಪಿಗೆ ನೀಡಿದ್ದಾರೆ. ಕೇರಳ ಕಾಂಗ್ರೆಸ್ ಸಮಿತಿಯ ದೂರಿನ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜನಾರ್ಧನ ದ್ವಿವೇದಿ ಪ್ರತಿಕ್ರಿಯಿಸಿದ್ದಾರೆ.<br /> <br /> ನರೇಂದ್ರ ಮೋದಿ ಅವರು ಶಶಿ ತರೂರ್ ಅವರನ್ನು ‘ಸ್ವಚ್ಛ ಭಾರತ್ ಅಭಿಯಾನ’ದ ರಾಯಭಾರಿಯನ್ನಾಗಿ ನೇಮಕ ಮಾಡಿದ್ದರು. ಇದಕ್ಕೆ ತರೂರ್ ಒಪ್ಪಿಗೆ ಸೂಚಿಸಿದ ಮೇಲೆ ಕೇರಳ ಕಾಂಗ್ರೆಸ್ ಸಮಿತಿ ಹೈಕಮಾಂಡ್ಗೆ ದೂರು ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>