ಆ ಮೂಲಕ, ಕುರುಡಾಗಿ ಕಾಂಗ್ರೆಸ್ ಅನ್ನು ಬೆಂಬಲಿಸುವುದಿಲ್ಲ ಎಂಬ ಸಂದೇಶವನ್ನು ಅವುಗಳು ರವಾನಿಸಿವೆ. ಜಿಎಸ್ಟಿ ಉದ್ಘಾಟನಾ ಸಮಾರಂಭಕ್ಕೆ ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡ ಮತ್ತು ಮನಮೋಹನ್ ಸಿಂಗ್ ಅವರನ್ನು ಆಹ್ವಾನಿಸಲಾಗಿತ್ತು. ಕಾಂಗ್ರೆಸ್ ಮುಖಂಡರು, ದೇವೇಗೌಡ ಅವರಿಗೆ ದೂರವಾಣಿ ಕರೆ ಮಾಡಿ ಸಮಾರಂಭ ಬಹಿಷ್ಕರಿಸುವಂತೆ ಮನವೊಲಿಸಲು ಮಾಡಿದ ಪ್ರಯತ್ನ ಫಲಕಾರಿ ಆಗಲಿಲ್ಲ. ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಸಹ ಕಾಂಗ್ರೆಸ್ ಮುಖಂಡರ ಮಾತಿಗೆ ಕಿವಿಗೊಡಲಿಲ್ಲ.