<p><strong>ಚೆನ್ನೈ/ನವದೆಹಲಿ (ಪಿಟಿಐ): </strong>ಉಪರಾಷ್ಟ್ರಪತಿ ಚುನಾವಣೆಗೆ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಕಾಂಗ್ರೆಸ್ ತೀವ್ರ ಕಸರತ್ತು ಆರಂಭಿಸಿರುವ ಬೆನ್ನಲ್ಲೇ `ಈ ಸ್ಥಾನಕ್ಕೆ ಕಾಂಗ್ರೆಸ್ಗೆ ಹೊರತಾದ ವ್ಯಕ್ತಿಯನ್ನು ಬೆಂಬಲಿಸುವುದಾಗಿ~ ಸಿಪಿಎಂ ವ್ಯತಿರಿಕ್ತ ಹೇಳಿಕೆ ನೀಡುವ ಮೂಲಕ ಚುನಾವಣೆಗೆ ಹೊಸ ರಾಜಕೀಯ ತಿರುವು ನೀಡಿದೆ.<br /> <br /> ಒಮ್ಮತ ಅಭ್ಯರ್ಥಿಗೆ ಬೆಂಬಲ ಕೋರಲು ಇತ್ತೀಚೆಗೆ ತಮ್ಮನ್ನು ದೂರವಾಣಿಯಲ್ಲಿ ಸಂಪರ್ಕಿಸಿದ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಪಕ್ಷದ ನಿಲುವನ್ನು ಸ್ಪಷ್ಟಪಡಿಸಿರುವುದಾಗಿ ಸಿಪಿಎಂ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ ತಿಳಿಸಿದರು. <br /> <br /> <strong>ಎನ್ಡಿಎ ಜತೆ ಜೆಡಿಯು ಚರ್ಚೆ: </strong>ಉಪರಾಷ್ಟ್ರಪತಿ ಸ್ಥಾನಕ್ಕೆ ಯುಪಿಎ ಅಭ್ಯರ್ಥಿ ಘೋಷಣೆಯನ್ನು ಎದುರು ನೋಡುತ್ತಿರುವುದಾಗಿ ಹೇಳಿರುವ ಜೆಡಿಯು, ಈ ಕುರಿತು ಯಾವುದೇ ತೀರ್ಮಾನ ಕೈಗೊಳ್ಳುವ ಮೊದಲು ಎನ್ಡಿಎಯ ಮಿತ್ರಪಕ್ಷಗಳ ಜೊತೆ ಚರ್ಚಿಸುವುದಾಗಿ ಸ್ಪಷ್ಟಪಡಿಸಿದೆ. <br /> <br /> ಉಪರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ಕುರಿತಂತೆ ಇದುವರೆಗೂ ಪಕ್ಷ ಯಾವ ನಿರ್ಧಾರವನ್ನೂ ಕೈಗೊಂಡಿಲ್ಲ. ಈ ಬಗ್ಗೆ ವಿರೋಧ ಪಕ್ಷಗಳು ಅನುಸರಿಸುವ ಮಾರ್ಗಗಳನ್ನು ನೋಡಿದ ನಂತರ ಎನ್ಡಿಎ ಮೈತ್ರಿಕೂಟದ ಪಕ್ಷಗಳ ಜತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜೆಡಿಯು ಮುಖ್ಯಸ್ಥ ಶರದ್ ಯಾದವ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ/ನವದೆಹಲಿ (ಪಿಟಿಐ): </strong>ಉಪರಾಷ್ಟ್ರಪತಿ ಚುನಾವಣೆಗೆ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಕಾಂಗ್ರೆಸ್ ತೀವ್ರ ಕಸರತ್ತು ಆರಂಭಿಸಿರುವ ಬೆನ್ನಲ್ಲೇ `ಈ ಸ್ಥಾನಕ್ಕೆ ಕಾಂಗ್ರೆಸ್ಗೆ ಹೊರತಾದ ವ್ಯಕ್ತಿಯನ್ನು ಬೆಂಬಲಿಸುವುದಾಗಿ~ ಸಿಪಿಎಂ ವ್ಯತಿರಿಕ್ತ ಹೇಳಿಕೆ ನೀಡುವ ಮೂಲಕ ಚುನಾವಣೆಗೆ ಹೊಸ ರಾಜಕೀಯ ತಿರುವು ನೀಡಿದೆ.<br /> <br /> ಒಮ್ಮತ ಅಭ್ಯರ್ಥಿಗೆ ಬೆಂಬಲ ಕೋರಲು ಇತ್ತೀಚೆಗೆ ತಮ್ಮನ್ನು ದೂರವಾಣಿಯಲ್ಲಿ ಸಂಪರ್ಕಿಸಿದ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಪಕ್ಷದ ನಿಲುವನ್ನು ಸ್ಪಷ್ಟಪಡಿಸಿರುವುದಾಗಿ ಸಿಪಿಎಂ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ ತಿಳಿಸಿದರು. <br /> <br /> <strong>ಎನ್ಡಿಎ ಜತೆ ಜೆಡಿಯು ಚರ್ಚೆ: </strong>ಉಪರಾಷ್ಟ್ರಪತಿ ಸ್ಥಾನಕ್ಕೆ ಯುಪಿಎ ಅಭ್ಯರ್ಥಿ ಘೋಷಣೆಯನ್ನು ಎದುರು ನೋಡುತ್ತಿರುವುದಾಗಿ ಹೇಳಿರುವ ಜೆಡಿಯು, ಈ ಕುರಿತು ಯಾವುದೇ ತೀರ್ಮಾನ ಕೈಗೊಳ್ಳುವ ಮೊದಲು ಎನ್ಡಿಎಯ ಮಿತ್ರಪಕ್ಷಗಳ ಜೊತೆ ಚರ್ಚಿಸುವುದಾಗಿ ಸ್ಪಷ್ಟಪಡಿಸಿದೆ. <br /> <br /> ಉಪರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ಕುರಿತಂತೆ ಇದುವರೆಗೂ ಪಕ್ಷ ಯಾವ ನಿರ್ಧಾರವನ್ನೂ ಕೈಗೊಂಡಿಲ್ಲ. ಈ ಬಗ್ಗೆ ವಿರೋಧ ಪಕ್ಷಗಳು ಅನುಸರಿಸುವ ಮಾರ್ಗಗಳನ್ನು ನೋಡಿದ ನಂತರ ಎನ್ಡಿಎ ಮೈತ್ರಿಕೂಟದ ಪಕ್ಷಗಳ ಜತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜೆಡಿಯು ಮುಖ್ಯಸ್ಥ ಶರದ್ ಯಾದವ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>