<p><strong>ಪಟ್ನಾ (ಪಿಟಿಐ): </strong>ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ 11 ಸ್ಥಾನಗಳನ್ನು ಬಿಟ್ಟುಕೊಡುವುದಾಗಿ ಶನಿವಾರ ಹೇಳಿರುವ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಭಾನುವಾರ ನಡೆಯುವ ಪಕ್ಷದ ಸಂಸದೀಯ ಮಂಡಳಿ ಸಭೆಗೂ ಮುನ್ನ ತನ್ನ ಅಭಿಪ್ರಾಯ ತಿಳಿಸುವಂತೆ ಕಾಂಗ್ರೆಸ್ಗೆ ಗಡುವು ನೀಡುವ ಮೂಲಕ ಒತ್ತಡ ಹಾಕಿದ್ದಾರೆ.<br /> <br /> ಇದೇ ವೇಳೆ ಲಾಲು ಅವರು 40 ಸ್ಥಾನಗಳ ಪೈಕಿ ಒಂದು ಸ್ಥಾನವನ್ನು ಕಾಂಗ್ರೆಸ್ ಮೈತ್ರಿಕೂಟದ ಮಿತ್ರಪಕ್ಷವಾದ ಎನ್ಸಿಪಿಗೆ ಬಿಟ್ಟುಕೊಡುವುದಾಗಿ ಹೇಳಿದರು.<br /> <br /> ಯುಪಿಎ ಮೈತ್ರಿಕೂಟ ತೊರೆದು ಎಲ್ಜೆಪಿಯು ಬಿಜೆಪಿ ಮೈತ್ರಿಕೂಟದತ್ತ ಒಲುವು ತೋರಿರುವ ಬೆಳವಣಿಗೆ ಹಿನ್ನೆಲೆಯಲ್ಲಿ ಲಾಲು ಅವರು ಕಾಂಗ್ರೆಸ್ಗೆ ಈ ಪಂಥಾಹ್ವಾನ ನೀಡಿ, ಒತ್ತಡದ ತಂತ್ರಕ್ಕೆ ಮೊರೆಹೋಗಿದ್ದಾರೆ.<br /> <br /> ದೆಹಲಿಯಿಂದ ಕಳೆದ ರಾತ್ರಿ ರಾಜ್ಯಕ್ಕೆ ಹಿಂತಿರುಗಿದ ಲಾಲು ಅವರು ತಮ್ಮ ಅಭಿಪ್ರಾಯವನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಬಿಹಾರ ಉಸ್ತುವಾರಿ ವಹಿಸಿಕೊಂಡಿರುವ ಸಿ.ಪಿ.ಜೋಶಿ ಅವರಿಗೆ ತಿಳಿಸಿರುವುದಾಗಿ ಹೇಳಿದರು.<br /> <br /> `ಪಟ್ನಾದಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆಗೆ ನಡೆಯುವ ಪಕ್ಷದ ಸಂಸದೀಯ ಮಂಡಳಿ ಸಭೆಗೂ ಮುನ್ನ ಈ ಕುರಿತಂತೆ ತಮ್ಮ ಅಭಿಪ್ರಾಯವನ್ನು ತಿಳಿಸುವಂತೆ ಅವರಿಗೆ ನಾನು ಹೇಳಿದ್ದೇನೆ' ಎಂದು ಲಾಲು ಅವರು ಸುದ್ಧಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ (ಪಿಟಿಐ): </strong>ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ 11 ಸ್ಥಾನಗಳನ್ನು ಬಿಟ್ಟುಕೊಡುವುದಾಗಿ ಶನಿವಾರ ಹೇಳಿರುವ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಭಾನುವಾರ ನಡೆಯುವ ಪಕ್ಷದ ಸಂಸದೀಯ ಮಂಡಳಿ ಸಭೆಗೂ ಮುನ್ನ ತನ್ನ ಅಭಿಪ್ರಾಯ ತಿಳಿಸುವಂತೆ ಕಾಂಗ್ರೆಸ್ಗೆ ಗಡುವು ನೀಡುವ ಮೂಲಕ ಒತ್ತಡ ಹಾಕಿದ್ದಾರೆ.<br /> <br /> ಇದೇ ವೇಳೆ ಲಾಲು ಅವರು 40 ಸ್ಥಾನಗಳ ಪೈಕಿ ಒಂದು ಸ್ಥಾನವನ್ನು ಕಾಂಗ್ರೆಸ್ ಮೈತ್ರಿಕೂಟದ ಮಿತ್ರಪಕ್ಷವಾದ ಎನ್ಸಿಪಿಗೆ ಬಿಟ್ಟುಕೊಡುವುದಾಗಿ ಹೇಳಿದರು.<br /> <br /> ಯುಪಿಎ ಮೈತ್ರಿಕೂಟ ತೊರೆದು ಎಲ್ಜೆಪಿಯು ಬಿಜೆಪಿ ಮೈತ್ರಿಕೂಟದತ್ತ ಒಲುವು ತೋರಿರುವ ಬೆಳವಣಿಗೆ ಹಿನ್ನೆಲೆಯಲ್ಲಿ ಲಾಲು ಅವರು ಕಾಂಗ್ರೆಸ್ಗೆ ಈ ಪಂಥಾಹ್ವಾನ ನೀಡಿ, ಒತ್ತಡದ ತಂತ್ರಕ್ಕೆ ಮೊರೆಹೋಗಿದ್ದಾರೆ.<br /> <br /> ದೆಹಲಿಯಿಂದ ಕಳೆದ ರಾತ್ರಿ ರಾಜ್ಯಕ್ಕೆ ಹಿಂತಿರುಗಿದ ಲಾಲು ಅವರು ತಮ್ಮ ಅಭಿಪ್ರಾಯವನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಬಿಹಾರ ಉಸ್ತುವಾರಿ ವಹಿಸಿಕೊಂಡಿರುವ ಸಿ.ಪಿ.ಜೋಶಿ ಅವರಿಗೆ ತಿಳಿಸಿರುವುದಾಗಿ ಹೇಳಿದರು.<br /> <br /> `ಪಟ್ನಾದಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆಗೆ ನಡೆಯುವ ಪಕ್ಷದ ಸಂಸದೀಯ ಮಂಡಳಿ ಸಭೆಗೂ ಮುನ್ನ ಈ ಕುರಿತಂತೆ ತಮ್ಮ ಅಭಿಪ್ರಾಯವನ್ನು ತಿಳಿಸುವಂತೆ ಅವರಿಗೆ ನಾನು ಹೇಳಿದ್ದೇನೆ' ಎಂದು ಲಾಲು ಅವರು ಸುದ್ಧಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>