<p><strong>ನವದೆಹಲಿ (ಐಎಎನ್ಎಸ್): </strong>ಹಿಂದಿ ಚಿತ್ರರಂಗಕ್ಕೆ ನೀಡಿದ ಕೊಡುಗೆಗಾಗಿ ಶ್ಯಾಂ ಬೆನಗಲ್, ಗಿರೀಶ್ ಕಾರ್ನಾಡ್ ಹಾಗೂ ನಿರ್ದೇಶಕ ಮಧುರ್ ಭಂಡಾರ್ಕರ್ ಅವರಿಗೆ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ಬುಧವಾರ ಗಂಗಾ ಶರಣ್ ಸಿಂಗ್ ಪ್ರಶಸ್ತಿ ನೀಡಿ ಗೌರವಿಸಿದರು. <br /> <br /> ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರತಿಭಾ ಪಾಟೀಲ್ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿಯು ಪ್ರಮಾಣಪತ್ರ ಹಾಗೂ ಒಂದು ಲಕ್ಷ ರೂಪಾಯಿಯ ಚೆಕ್ ಒಳಗೊಂಡಿದೆ.<br /> <br /> `ಇಷ್ಟು ವರ್ಷಗಳ ಅವಧಿಯಲ್ಲಿ ಪ್ರೇಕ್ಷಕರು ಮತ್ತು ಸಿನಿಮಾ ಉದ್ದಿಮೆ ಮಾತ್ರವಲ್ಲದೆ ಸರ್ಕಾರ ಕೂಡ ನನ್ನ ಕಾರ್ಯಕ್ಕೆ ಮಾನ್ಯತೆ ನೀಡಿದ್ದು, ಮಾನವ ಸಂಪನ್ಮೂಲ ಸಚಿವಾಲಯಕ್ಕೆ ಕೃತಜ್ಞನಾಗಿದ್ದೇನೆ~ ಎಂದು `ಚಾಂದ್ನಿ ಬಾರ್~ ಮತ್ತು `ಪೇಜ್ 3~ ಸಿನಿಮಾಗಳಿಂದ ಖ್ಯಾತರಾದ ಭಂಡಾರ್ಕರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. <br /> ಇದೇ ವೇಳೆ ಹಿಂದಿ ಸೇವಾ ಪ್ರಶಸ್ತಿ ಯೋಜನೆಯಡಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ 28 ಮಂದಿಯನ್ನೂ ಕೇಂದ್ರೀಯ ಹಿಂದಿ ಸಂಸ್ಥಾನದ ವತಿಯಿಂದ ಸನ್ಮಾನಿಸಲಾಯಿತು.<br /> <br /> ಗಂಗಾ ಶರಣ್ ಸಿಂಗ್ ಪ್ರಶಸ್ತಿಯು ಹಿಂದಿ ಸಾಹಿತ್ಯಕ್ಕೆ ಕೊಡುಗೆ ನೀಡಿದ ಉತ್ತಮ ಬರಹಗಾರರಿಗೆ ನೀಡುವ ಸಾಹಿತ್ಯ ಪ್ರಶಸ್ತಿಯಾಗ್ದ್ದಿದರೂ ಕೂಡ ತಮ್ಮ ಕಾರ್ಯಕ್ಷೇತ್ರದ ಮೂಲಕ ಹಿಂದಿ ಭಾಷೆಯನ್ನು ಪ್ರೋತ್ಸಾಹಿಸುವವರಿಗೂ ಈ ಪ್ರಶಸ್ತಿ ನೀಡಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಐಎಎನ್ಎಸ್): </strong>ಹಿಂದಿ ಚಿತ್ರರಂಗಕ್ಕೆ ನೀಡಿದ ಕೊಡುಗೆಗಾಗಿ ಶ್ಯಾಂ ಬೆನಗಲ್, ಗಿರೀಶ್ ಕಾರ್ನಾಡ್ ಹಾಗೂ ನಿರ್ದೇಶಕ ಮಧುರ್ ಭಂಡಾರ್ಕರ್ ಅವರಿಗೆ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ಬುಧವಾರ ಗಂಗಾ ಶರಣ್ ಸಿಂಗ್ ಪ್ರಶಸ್ತಿ ನೀಡಿ ಗೌರವಿಸಿದರು. <br /> <br /> ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರತಿಭಾ ಪಾಟೀಲ್ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿಯು ಪ್ರಮಾಣಪತ್ರ ಹಾಗೂ ಒಂದು ಲಕ್ಷ ರೂಪಾಯಿಯ ಚೆಕ್ ಒಳಗೊಂಡಿದೆ.<br /> <br /> `ಇಷ್ಟು ವರ್ಷಗಳ ಅವಧಿಯಲ್ಲಿ ಪ್ರೇಕ್ಷಕರು ಮತ್ತು ಸಿನಿಮಾ ಉದ್ದಿಮೆ ಮಾತ್ರವಲ್ಲದೆ ಸರ್ಕಾರ ಕೂಡ ನನ್ನ ಕಾರ್ಯಕ್ಕೆ ಮಾನ್ಯತೆ ನೀಡಿದ್ದು, ಮಾನವ ಸಂಪನ್ಮೂಲ ಸಚಿವಾಲಯಕ್ಕೆ ಕೃತಜ್ಞನಾಗಿದ್ದೇನೆ~ ಎಂದು `ಚಾಂದ್ನಿ ಬಾರ್~ ಮತ್ತು `ಪೇಜ್ 3~ ಸಿನಿಮಾಗಳಿಂದ ಖ್ಯಾತರಾದ ಭಂಡಾರ್ಕರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. <br /> ಇದೇ ವೇಳೆ ಹಿಂದಿ ಸೇವಾ ಪ್ರಶಸ್ತಿ ಯೋಜನೆಯಡಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ 28 ಮಂದಿಯನ್ನೂ ಕೇಂದ್ರೀಯ ಹಿಂದಿ ಸಂಸ್ಥಾನದ ವತಿಯಿಂದ ಸನ್ಮಾನಿಸಲಾಯಿತು.<br /> <br /> ಗಂಗಾ ಶರಣ್ ಸಿಂಗ್ ಪ್ರಶಸ್ತಿಯು ಹಿಂದಿ ಸಾಹಿತ್ಯಕ್ಕೆ ಕೊಡುಗೆ ನೀಡಿದ ಉತ್ತಮ ಬರಹಗಾರರಿಗೆ ನೀಡುವ ಸಾಹಿತ್ಯ ಪ್ರಶಸ್ತಿಯಾಗ್ದ್ದಿದರೂ ಕೂಡ ತಮ್ಮ ಕಾರ್ಯಕ್ಷೇತ್ರದ ಮೂಲಕ ಹಿಂದಿ ಭಾಷೆಯನ್ನು ಪ್ರೋತ್ಸಾಹಿಸುವವರಿಗೂ ಈ ಪ್ರಶಸ್ತಿ ನೀಡಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>