<p><strong>ನವದೆಹಲಿ, (ಪಿಟಿಐ):</strong> ಕಾರ್ಪೊರೇಟ್ ಸಂಸ್ಥೆಗಳು ಮತ್ತು ಉದ್ಯೋಗಿಗಳನ್ನು ಕೂಡ ಲೋಕಪಾಲ ಮಸೂದೆ ವ್ಯಾಪ್ತಿ ಅಡಿ ತರಬೇಕು ಎಂದು ಕೇಂದ್ರೀಯ ಜಾಗೃತ ಆಯೋಗ (ಸಿವಿಸಿ) ಅಭಿಪ್ರಾಯಪಟ್ಟಿದೆ. <br /> <br /> ಉನ್ನತ ಅಧಿಕಾರಿಗಳು ಮತ್ತು ರಾಜಕಾರಣಿಗಳನ್ನು ಲೋಕಪಾಲ ವ್ಯಾಪ್ತಿಯ ಅಡಿ ತರಬೇಕು ಎಂಬ ಅಭಿಪ್ರಾಯವನ್ನು ಅದು ಬೆಂಬಲಿಸಿದೆ. ಸಿವಿಸಿ ಮತ್ತು ಲೋಕಪಾಲ ಸಂಸ್ಥೆಗಳ ನಡುವಿನ ಗೊಂದಲ ನಿವಾರಣೆಗೆ ಅವುಗಳ ಅಧಿಕಾರ ಮತ್ತು ಕಾರ್ಯವ್ಯಾಪ್ತಿಯನ್ನು ಸ್ಪಷ್ಟವಾಗಿ ನಿಗದಿಪಡಿಸಬೇಕು ಎಂದು ಸಲಹೆ ನೀಡಿದೆ. <br /> <br /> ಸದ್ಯದ ಸ್ಥಿತಿಯಲ್ಲಿ ಖಾಸಗಿ ಕಂಪೆನಿ ಮತ್ತು ಕಾರ್ಪೊರೇಟ್ ಸಂಸ್ಥೆಗಳಲ್ಲಿ ಭ್ರಷ್ಟಾಚಾರ ತಡೆಯುವ ಅಧಿಕಾರ ಸಿವಿಸಿಗೆ ಇಲ್ಲ. ಅಂತಹ ಪ್ರಕರಣಗಳನ್ನು ಸಿಬಿಐಗೆ ಶಿಫಾರಸು ಮಾಡಲಾಗುವುದು ಎಂದು ಸಿವಿಸಿ ಆಯುಕ್ತ ಪ್ರದೀಪ್ ಕುಮಾರ್ ಹೇಳಿದ್ದಾರೆ. <br /> <br /> ರಾಜಕಾರಣಿಗಳ ಭ್ರಷ್ಟಾಚಾರ ಪ್ರಕರಣಗಳನ್ನು ಲೋಕಪಾಲ ತನಿಖೆ ನಡೆಸಬಹುದು, ಅವರು ತಪ್ಪಿತಸ್ಥರೆಂದು ಕಂಡು ಬಂದಲ್ಲಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಸಲಹೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ, (ಪಿಟಿಐ):</strong> ಕಾರ್ಪೊರೇಟ್ ಸಂಸ್ಥೆಗಳು ಮತ್ತು ಉದ್ಯೋಗಿಗಳನ್ನು ಕೂಡ ಲೋಕಪಾಲ ಮಸೂದೆ ವ್ಯಾಪ್ತಿ ಅಡಿ ತರಬೇಕು ಎಂದು ಕೇಂದ್ರೀಯ ಜಾಗೃತ ಆಯೋಗ (ಸಿವಿಸಿ) ಅಭಿಪ್ರಾಯಪಟ್ಟಿದೆ. <br /> <br /> ಉನ್ನತ ಅಧಿಕಾರಿಗಳು ಮತ್ತು ರಾಜಕಾರಣಿಗಳನ್ನು ಲೋಕಪಾಲ ವ್ಯಾಪ್ತಿಯ ಅಡಿ ತರಬೇಕು ಎಂಬ ಅಭಿಪ್ರಾಯವನ್ನು ಅದು ಬೆಂಬಲಿಸಿದೆ. ಸಿವಿಸಿ ಮತ್ತು ಲೋಕಪಾಲ ಸಂಸ್ಥೆಗಳ ನಡುವಿನ ಗೊಂದಲ ನಿವಾರಣೆಗೆ ಅವುಗಳ ಅಧಿಕಾರ ಮತ್ತು ಕಾರ್ಯವ್ಯಾಪ್ತಿಯನ್ನು ಸ್ಪಷ್ಟವಾಗಿ ನಿಗದಿಪಡಿಸಬೇಕು ಎಂದು ಸಲಹೆ ನೀಡಿದೆ. <br /> <br /> ಸದ್ಯದ ಸ್ಥಿತಿಯಲ್ಲಿ ಖಾಸಗಿ ಕಂಪೆನಿ ಮತ್ತು ಕಾರ್ಪೊರೇಟ್ ಸಂಸ್ಥೆಗಳಲ್ಲಿ ಭ್ರಷ್ಟಾಚಾರ ತಡೆಯುವ ಅಧಿಕಾರ ಸಿವಿಸಿಗೆ ಇಲ್ಲ. ಅಂತಹ ಪ್ರಕರಣಗಳನ್ನು ಸಿಬಿಐಗೆ ಶಿಫಾರಸು ಮಾಡಲಾಗುವುದು ಎಂದು ಸಿವಿಸಿ ಆಯುಕ್ತ ಪ್ರದೀಪ್ ಕುಮಾರ್ ಹೇಳಿದ್ದಾರೆ. <br /> <br /> ರಾಜಕಾರಣಿಗಳ ಭ್ರಷ್ಟಾಚಾರ ಪ್ರಕರಣಗಳನ್ನು ಲೋಕಪಾಲ ತನಿಖೆ ನಡೆಸಬಹುದು, ಅವರು ತಪ್ಪಿತಸ್ಥರೆಂದು ಕಂಡು ಬಂದಲ್ಲಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಸಲಹೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>