<p>ತಿರುವನಂತಪುರ (ಪಿಟಿಐ): ಮೂವತ್ತು ಮಂದಿ ಪ್ರಾಥಮಿಕ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ವ್ಯಾನ್ ಕಾಲುವೆಗೆ ಉರುಳಿದ ಬೆನ್ನಲ್ಲೇ ಕೈಗೊಳ್ಳಲಾದ ರಕ್ಷಣಾ ಕಾರ್ಯಾಚರಣೆಯಲ್ಲಿ ಬಹುತೇಕ ಮಕ್ಕಳನ್ನು ರಕ್ಷಿಸಲಾಗಿದ್ದು, ಇಬ್ಬರು ಅಸು ನೀಗಿದ್ದಾರೆ. ಕನಿಷ್ಠ ಮೂವರು ಮಕ್ಕಳು ಕಣ್ಮರೆಯಾಗಿದ್ದಾರೆ.<br /> <br /> ದುರಂತದ ಸುದ್ದಿ ತಿಳಿಯುತ್ತಿದ್ದಂತೆಯೇ ಜಮಾಯಿಸಿದ ಸ್ಥಳೀಯ ಮಂದಿ ಬಹುತೇಕ ಮಕ್ಕಳನ್ನು ರಕ್ಷಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಮೂವರ ಪೈಕಿ ಇಬ್ಬರು ಆಸ್ಪತ್ರೆಯಲ್ಲಿ ಮೃತರಾಗಿದ್ದು, ಒಬ್ಬನ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಇಲ್ಲಿಗೆ 25 ಕಿ.ಮೀ. ದೂರದ ಚನ್ನಕಂಕರದಲ್ಲಿ ರಾಷ್ಟ್ರೀಯ ಹೆದ್ದಾರಿ ಸನಿಹದಲ್ಲೇ ಈ ದುರಂತ ಸಂಭವಿಸಿತು. ಮಕ್ಕಳನ್ನು ಮನೆಗೆ ಕರೆದೊಯ್ಯುತ್ತಿದ್ದ ಖಾಸಗಿ ವ್ಯಾನ್ ಪಾರ್ವತಿ ಪುತನಾರ್ ನದಿಯ ಕಾಲುವೆಯ ಬಳಿ ಕಡಿದಾದ ಮಾರ್ಗದಲ್ಲಿ ಸಾಗುತ್ತಿದ್ದಾಗ ದುರಂತ ಘಟಿಸಿತು.<br /> <br /> ಪೊಲೀಸ್ ಮತ್ತು ಅಗ್ನಿಶಾಮಕ ಸಿಬ್ಬಂದಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ.<br /> <br /> ಈ ಮಕ್ಕಳು ನಗರ ಹೊರವಲಯದ ಕಳಕ್ಕೂಟ್ಟಂ ಜ್ಯೋತಿ ನಿಲಯಂನಲ್ಲಿ ಕಲಿಯುತ್ತಿರುವ ಮಕ್ಕಳು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಿರುವನಂತಪುರ (ಪಿಟಿಐ): ಮೂವತ್ತು ಮಂದಿ ಪ್ರಾಥಮಿಕ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ವ್ಯಾನ್ ಕಾಲುವೆಗೆ ಉರುಳಿದ ಬೆನ್ನಲ್ಲೇ ಕೈಗೊಳ್ಳಲಾದ ರಕ್ಷಣಾ ಕಾರ್ಯಾಚರಣೆಯಲ್ಲಿ ಬಹುತೇಕ ಮಕ್ಕಳನ್ನು ರಕ್ಷಿಸಲಾಗಿದ್ದು, ಇಬ್ಬರು ಅಸು ನೀಗಿದ್ದಾರೆ. ಕನಿಷ್ಠ ಮೂವರು ಮಕ್ಕಳು ಕಣ್ಮರೆಯಾಗಿದ್ದಾರೆ.<br /> <br /> ದುರಂತದ ಸುದ್ದಿ ತಿಳಿಯುತ್ತಿದ್ದಂತೆಯೇ ಜಮಾಯಿಸಿದ ಸ್ಥಳೀಯ ಮಂದಿ ಬಹುತೇಕ ಮಕ್ಕಳನ್ನು ರಕ್ಷಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಮೂವರ ಪೈಕಿ ಇಬ್ಬರು ಆಸ್ಪತ್ರೆಯಲ್ಲಿ ಮೃತರಾಗಿದ್ದು, ಒಬ್ಬನ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಇಲ್ಲಿಗೆ 25 ಕಿ.ಮೀ. ದೂರದ ಚನ್ನಕಂಕರದಲ್ಲಿ ರಾಷ್ಟ್ರೀಯ ಹೆದ್ದಾರಿ ಸನಿಹದಲ್ಲೇ ಈ ದುರಂತ ಸಂಭವಿಸಿತು. ಮಕ್ಕಳನ್ನು ಮನೆಗೆ ಕರೆದೊಯ್ಯುತ್ತಿದ್ದ ಖಾಸಗಿ ವ್ಯಾನ್ ಪಾರ್ವತಿ ಪುತನಾರ್ ನದಿಯ ಕಾಲುವೆಯ ಬಳಿ ಕಡಿದಾದ ಮಾರ್ಗದಲ್ಲಿ ಸಾಗುತ್ತಿದ್ದಾಗ ದುರಂತ ಘಟಿಸಿತು.<br /> <br /> ಪೊಲೀಸ್ ಮತ್ತು ಅಗ್ನಿಶಾಮಕ ಸಿಬ್ಬಂದಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ.<br /> <br /> ಈ ಮಕ್ಕಳು ನಗರ ಹೊರವಲಯದ ಕಳಕ್ಕೂಟ್ಟಂ ಜ್ಯೋತಿ ನಿಲಯಂನಲ್ಲಿ ಕಲಿಯುತ್ತಿರುವ ಮಕ್ಕಳು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>