<p><strong>ನವದೆಹಲಿ (ಪಿಟಿಐ):</strong> ದೇಶದಲ್ಲಿನ ಎಲ್ಲಾ ಕಾವಲು ರಹಿತ ಲೆವೆಲ್ ಕ್ರಾಸಿಂಗ್ಗಳನ್ನು ತೆರವುಗೊಳಿಸಿ ಬದಲಿ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ `ಭಾರತೀಯ ರೈಲು- ರಸ್ತೆ ಮಾರ್ಗ ವಿಭಜಕ ನಿಗಮ~ ಸ್ಥಾಪಿಸುವ ಇಂಗಿತವನ್ನು ರೈಲ್ವೆ ಸಚಿವ ದಿನೇಶ್ ತ್ರಿವೇದಿ ಬಜೆಟ್ನಲ್ಲಿ ವ್ಯಕ್ತಪಡಿಸಿದ್ದಾರೆ.<br /> <br /> ರೈಲು ಅಪಘಾತ ಪ್ರಕರಣಗಳಲ್ಲಿ ಶೇ 40ರಷ್ಟು ಅಪಘಾತಗಳು ಕಾವಲು ರಹಿತ ಲೆವೆಲ್ ಕ್ರಾಸಿಂಗ್ಗಳಲ್ಲಿ ಸಂಭವಿಸುತ್ತಿವೆ. ಇದು ಕಳವಳಕಾರಿ ಬೆಳವಣಿಗೆ. ಆದ್ದರಿಂದ ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿರುವ ಎಲ್ಲ ಕಾವಲು ರಹಿತ ಲೆವೆಲ್ ಕ್ರಾಸಿಂಗ್ಗಳಿಗೆ ಮುಕ್ತಿ ನೀಡಲಾಗುವುದು. ಈ ವಿಶೇಷ ನಿರ್ದಿಷ್ಟ ಉದ್ದೇಶವನ್ನು ಸಾಕಾರಗೊಳಿಸಲು `ರೈಲು- ರಸ್ತೆ ಮಾರ್ಗ ವಿಭಜಕ ನಿಗಮ~ವನ್ನು ಅನುಷ್ಠಾನಗೊಳಿಸಲಾಗುವುದು ಎಂದು ತ್ರಿವೇದಿ ಹೇಳಿದ್ದಾರೆ.<br /> <br /> ಕಾವಲು ರಹಿತ ಲೆವೆಲ್ ಕ್ರಾಸಿಂಗ್ಗಳ ಬದಲಿಗೆ ರೈಲ್ವೆ ಮೇಲುಸೇತುವೆ ಅಥವಾ ಕೆಳ ಸೇತುವೆಗಳನ್ನು ನಿರ್ಮಿಸುವ ಉದ್ದೇಶ ಇದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ದೇಶದಲ್ಲಿನ ಎಲ್ಲಾ ಕಾವಲು ರಹಿತ ಲೆವೆಲ್ ಕ್ರಾಸಿಂಗ್ಗಳನ್ನು ತೆರವುಗೊಳಿಸಿ ಬದಲಿ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ `ಭಾರತೀಯ ರೈಲು- ರಸ್ತೆ ಮಾರ್ಗ ವಿಭಜಕ ನಿಗಮ~ ಸ್ಥಾಪಿಸುವ ಇಂಗಿತವನ್ನು ರೈಲ್ವೆ ಸಚಿವ ದಿನೇಶ್ ತ್ರಿವೇದಿ ಬಜೆಟ್ನಲ್ಲಿ ವ್ಯಕ್ತಪಡಿಸಿದ್ದಾರೆ.<br /> <br /> ರೈಲು ಅಪಘಾತ ಪ್ರಕರಣಗಳಲ್ಲಿ ಶೇ 40ರಷ್ಟು ಅಪಘಾತಗಳು ಕಾವಲು ರಹಿತ ಲೆವೆಲ್ ಕ್ರಾಸಿಂಗ್ಗಳಲ್ಲಿ ಸಂಭವಿಸುತ್ತಿವೆ. ಇದು ಕಳವಳಕಾರಿ ಬೆಳವಣಿಗೆ. ಆದ್ದರಿಂದ ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿರುವ ಎಲ್ಲ ಕಾವಲು ರಹಿತ ಲೆವೆಲ್ ಕ್ರಾಸಿಂಗ್ಗಳಿಗೆ ಮುಕ್ತಿ ನೀಡಲಾಗುವುದು. ಈ ವಿಶೇಷ ನಿರ್ದಿಷ್ಟ ಉದ್ದೇಶವನ್ನು ಸಾಕಾರಗೊಳಿಸಲು `ರೈಲು- ರಸ್ತೆ ಮಾರ್ಗ ವಿಭಜಕ ನಿಗಮ~ವನ್ನು ಅನುಷ್ಠಾನಗೊಳಿಸಲಾಗುವುದು ಎಂದು ತ್ರಿವೇದಿ ಹೇಳಿದ್ದಾರೆ.<br /> <br /> ಕಾವಲು ರಹಿತ ಲೆವೆಲ್ ಕ್ರಾಸಿಂಗ್ಗಳ ಬದಲಿಗೆ ರೈಲ್ವೆ ಮೇಲುಸೇತುವೆ ಅಥವಾ ಕೆಳ ಸೇತುವೆಗಳನ್ನು ನಿರ್ಮಿಸುವ ಉದ್ದೇಶ ಇದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>