<p>ಶ್ರೀನಗರ (ಐಎಎನ್ಎಸ್): ಕಾಶ್ಮೀರ ಪ್ರತ್ಯೇಕತಾವಾದಿ ಗುಲಾಮ ನಬಿ ಫಾಯಿಗೆ ಅಮೆರಿಕ ಶಿಕ್ಷೆ ವಿಧಿಸಿರುವುದನ್ನು ವಿರೋಧಿಸಿ ಪ್ರತ್ಯೇಕತಾವಾದಿ ಮುಖಂಡ ಸೈಯಿದ್ ಅಲಿ ಗಿಲಾನಿ ನೀಡಿದ ಬಂದ್ ಕರೆಯಿಂದ ಶನಿವಾರ ಇಡೀ ಕಾಶ್ಮೀರ ಕಣಿವೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿತ್ತು.<br /> <br /> ಅಂಗಡಿ ಮುಂಗಟ್ಟು, ಕಚೇರಿಗಳು, ಶಾಲಾ ಕಾಲೇಜುಗಳು ಮುಚ್ಚಿದ್ದವು. ಬ್ಯಾಂಕುಗಳು, ಅಂಚೆ ಕಚೇರಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ಹಾಜರಾತಿ ಕಡಿಮೆ ಇತ್ತು. ಕೆಲವು ಖಾಸಗಿ ವಾಹನಗಳು ಮತ್ತು ಅಟೋರಿಕ್ಷಾಗಳು ಸಂಚರಿಸಿದವು.<br /> <br /> ಬಾರಾಮುಲ್ಲಾ, ಕುಪ್ವಾರಾ, ಅನಂತ್ನಾಗ್, ಪುಲ್ವಾಮಾ, ಶೋಪಿಯಾನ್, ಕುಲ್ಗಂ, ಗಂಡೇರಬಾಲ್, ಬಡಗಾಂ ಮತ್ತು ಬಂಡಿಪೊರಾದಲ್ಲಿ ಸಂಪೂರ್ಣ ಬಂದ್ ಆಚರಿಸಲಾಯಿತು. ಇಡೀ ಕಾಶ್ಮೀರ ಕಣಿವೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.<br /> <br /> <strong>ವಿಶೇಷ ತನಿಖಾ ತಂಡ: </strong>ಪ್ರತ್ಯೇಕತಾವಾದಿ ಗುಲಾಂ ನಬಿ ಫಾಯಿ ನಡೆಸಿರುವ ರಾಷ್ಟ್ರವಿರೋಧಿ ಚಟುವಟಿಕೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಜಮ್ಮು ಮತ್ತು ಕಾಶ್ಮೀರ ಸರ್ಕಾರವು ವಿಶೇಷ ತನಿಖಾ ತಂಡ ರಚಿಸಲಿದೆ.<br /> <br /> ಮಾಹಿತಿ ಸಂಗ್ರಹದ ನಂತರ ಫಾಯಿ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡುವ ಸಾಧ್ಯತೆಗಳು ಇವೆ ಎನ್ನಲಾಗಿದೆ. <br /> <br /> ಬುಡಗಾಂನ ಹಿರಿಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗುತ್ತಿದ್ದು, ಕಾಶ್ಮೀರ ಕಣಿವೆಯಲ್ಲಿ ಫಾಯಿ ನಡೆಸಿರುವ ರಾಷ್ಟ್ರವಿರೋಧಿ ಚಟುವಟಿಕೆಗಳ ಸಂಪೂರ್ಣ ಮಾಹಿತಿ ಸಂಗ್ರಹಿಸಲಾಗುತ್ತದೆ ಎಂದು ಡಿಜಿಪಿ ಕುಲದೀಪ್ ಖೋಡಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀನಗರ (ಐಎಎನ್ಎಸ್): ಕಾಶ್ಮೀರ ಪ್ರತ್ಯೇಕತಾವಾದಿ ಗುಲಾಮ ನಬಿ ಫಾಯಿಗೆ ಅಮೆರಿಕ ಶಿಕ್ಷೆ ವಿಧಿಸಿರುವುದನ್ನು ವಿರೋಧಿಸಿ ಪ್ರತ್ಯೇಕತಾವಾದಿ ಮುಖಂಡ ಸೈಯಿದ್ ಅಲಿ ಗಿಲಾನಿ ನೀಡಿದ ಬಂದ್ ಕರೆಯಿಂದ ಶನಿವಾರ ಇಡೀ ಕಾಶ್ಮೀರ ಕಣಿವೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿತ್ತು.<br /> <br /> ಅಂಗಡಿ ಮುಂಗಟ್ಟು, ಕಚೇರಿಗಳು, ಶಾಲಾ ಕಾಲೇಜುಗಳು ಮುಚ್ಚಿದ್ದವು. ಬ್ಯಾಂಕುಗಳು, ಅಂಚೆ ಕಚೇರಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ಹಾಜರಾತಿ ಕಡಿಮೆ ಇತ್ತು. ಕೆಲವು ಖಾಸಗಿ ವಾಹನಗಳು ಮತ್ತು ಅಟೋರಿಕ್ಷಾಗಳು ಸಂಚರಿಸಿದವು.<br /> <br /> ಬಾರಾಮುಲ್ಲಾ, ಕುಪ್ವಾರಾ, ಅನಂತ್ನಾಗ್, ಪುಲ್ವಾಮಾ, ಶೋಪಿಯಾನ್, ಕುಲ್ಗಂ, ಗಂಡೇರಬಾಲ್, ಬಡಗಾಂ ಮತ್ತು ಬಂಡಿಪೊರಾದಲ್ಲಿ ಸಂಪೂರ್ಣ ಬಂದ್ ಆಚರಿಸಲಾಯಿತು. ಇಡೀ ಕಾಶ್ಮೀರ ಕಣಿವೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.<br /> <br /> <strong>ವಿಶೇಷ ತನಿಖಾ ತಂಡ: </strong>ಪ್ರತ್ಯೇಕತಾವಾದಿ ಗುಲಾಂ ನಬಿ ಫಾಯಿ ನಡೆಸಿರುವ ರಾಷ್ಟ್ರವಿರೋಧಿ ಚಟುವಟಿಕೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಜಮ್ಮು ಮತ್ತು ಕಾಶ್ಮೀರ ಸರ್ಕಾರವು ವಿಶೇಷ ತನಿಖಾ ತಂಡ ರಚಿಸಲಿದೆ.<br /> <br /> ಮಾಹಿತಿ ಸಂಗ್ರಹದ ನಂತರ ಫಾಯಿ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡುವ ಸಾಧ್ಯತೆಗಳು ಇವೆ ಎನ್ನಲಾಗಿದೆ. <br /> <br /> ಬುಡಗಾಂನ ಹಿರಿಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗುತ್ತಿದ್ದು, ಕಾಶ್ಮೀರ ಕಣಿವೆಯಲ್ಲಿ ಫಾಯಿ ನಡೆಸಿರುವ ರಾಷ್ಟ್ರವಿರೋಧಿ ಚಟುವಟಿಕೆಗಳ ಸಂಪೂರ್ಣ ಮಾಹಿತಿ ಸಂಗ್ರಹಿಸಲಾಗುತ್ತದೆ ಎಂದು ಡಿಜಿಪಿ ಕುಲದೀಪ್ ಖೋಡಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>