<p><strong>ಜಮ್ಮು(ಪಿಟಿಐ):</strong> ಜಮ್ಮು- ಕಾಶ್ಮೀರ ದಲ್ಲಿ ಭದ್ರತೆಯನ್ನು ಪರಿಶೀಲಿಸಲು ಮಂಗಳವಾರ ಇಲ್ಲಿಗೆ ಭೇಟಿ ನೀಡಿರುವ ಕೇಂದ್ರ ಗೃಹ ಸಚಿವ ಪಿ. ಚಿದಂಬರಂ ಅವರು ಮಾತಾ ವೈಷ್ಣೋವದೇವಿ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.<br /> <br /> ಬೆಳಿಗ್ಗೆ ಜಮ್ಮುವಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಚಿದಂಬರಂ ಅವರನ್ನು ಜಮ್ಮು-ಕಾಶ್ಮೀರದ ಉಪಮುಖ್ಯಮಂತ್ರಿ ತಾರಾಚಂದ್ ಮತ್ತು ರಾಜ್ಯದ ಗೃಹ ಸಚಿವ ನಾಸೀರ್ ಅಸ್ಲಾಂ ವಾನಿ ಬರಮಾಡಿಕೊಂಡರು. <br /> ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ವೈಷ್ಣೋವದೇವಿ ದೇಗುಲಕ್ಕೆ ಹೊರಟ ಚಿದಂಬರಂ ಅವರ ಜೊತೆ ರಾಜ್ಯಪಾಲ ಎನ್.ಎನ್. ವೊಹ್ರಾ ಸಹ ಇದ್ದರು. ದೇವಿ ದರ್ಶನದ ನಂತರ ಚಿದಂಬರಂ ಜಮ್ಮುವಿನಲ್ಲಿ ಭದ್ರತೆ ಪುನರ್ಪರಿಶೀಲನೆ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಿದರು. <br /> <br /> ಈ ಸಭೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.<br /> ರಾಜಭವನದಲ್ಲಿ ರಾಜ್ಯಪಾಲರ ಜೊತೆ ಕೆಲವು ಪ್ರಮುಖ ವಿಷಯಗಳ ಕುರಿತು ಚಿದಂಬರಂ ಚರ್ಚಿಸಿದರು. <br /> <br /> ಜಮ್ಮು -ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸೈಫುದ್ದೀನ್ ಸೋಜ್ ಅವರ ನೇತೃತ್ವದ ನಿಯೋಗವು ಚಿದಂಬರಂ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಪಕ್ಷದ ಬೆಳವಣಿಗೆ ಬಗ್ಗೆ ವಿವರಗಳನ್ನು ನೀಡಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು(ಪಿಟಿಐ):</strong> ಜಮ್ಮು- ಕಾಶ್ಮೀರ ದಲ್ಲಿ ಭದ್ರತೆಯನ್ನು ಪರಿಶೀಲಿಸಲು ಮಂಗಳವಾರ ಇಲ್ಲಿಗೆ ಭೇಟಿ ನೀಡಿರುವ ಕೇಂದ್ರ ಗೃಹ ಸಚಿವ ಪಿ. ಚಿದಂಬರಂ ಅವರು ಮಾತಾ ವೈಷ್ಣೋವದೇವಿ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.<br /> <br /> ಬೆಳಿಗ್ಗೆ ಜಮ್ಮುವಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಚಿದಂಬರಂ ಅವರನ್ನು ಜಮ್ಮು-ಕಾಶ್ಮೀರದ ಉಪಮುಖ್ಯಮಂತ್ರಿ ತಾರಾಚಂದ್ ಮತ್ತು ರಾಜ್ಯದ ಗೃಹ ಸಚಿವ ನಾಸೀರ್ ಅಸ್ಲಾಂ ವಾನಿ ಬರಮಾಡಿಕೊಂಡರು. <br /> ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ವೈಷ್ಣೋವದೇವಿ ದೇಗುಲಕ್ಕೆ ಹೊರಟ ಚಿದಂಬರಂ ಅವರ ಜೊತೆ ರಾಜ್ಯಪಾಲ ಎನ್.ಎನ್. ವೊಹ್ರಾ ಸಹ ಇದ್ದರು. ದೇವಿ ದರ್ಶನದ ನಂತರ ಚಿದಂಬರಂ ಜಮ್ಮುವಿನಲ್ಲಿ ಭದ್ರತೆ ಪುನರ್ಪರಿಶೀಲನೆ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಿದರು. <br /> <br /> ಈ ಸಭೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.<br /> ರಾಜಭವನದಲ್ಲಿ ರಾಜ್ಯಪಾಲರ ಜೊತೆ ಕೆಲವು ಪ್ರಮುಖ ವಿಷಯಗಳ ಕುರಿತು ಚಿದಂಬರಂ ಚರ್ಚಿಸಿದರು. <br /> <br /> ಜಮ್ಮು -ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸೈಫುದ್ದೀನ್ ಸೋಜ್ ಅವರ ನೇತೃತ್ವದ ನಿಯೋಗವು ಚಿದಂಬರಂ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಪಕ್ಷದ ಬೆಳವಣಿಗೆ ಬಗ್ಗೆ ವಿವರಗಳನ್ನು ನೀಡಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>