<p><strong>ಶ್ರೀನಗರ: </strong>ಕಾಶ್ಮೀರ ಪ್ರವಾಸಕ್ಕೆ ಬಂದಿದ್ದ ತಮಿಳುನಾಡಿನ ಪ್ರವಾಸಿಗ ಕಲ್ಲು ತೂರಾಟದಲ್ಲಿ ಗಾಯಗೊಂಡು ಸೋಮವಾರ ಬೆಳಿಗ್ಗೆ ಕೋಮಾ ಸ್ಥಿತಿ ತಲುಪಿದ್ದರು. ರಾತ್ರಿ ಹೊತ್ತಿಗೆ ಅವರು ಮೃತಪಟ್ಟಿದ್ದಾರೆ.</p>.<p>ಚೆನ್ನೈನ 22 ವರ್ಷದ ಆರ್.ತಿರುಮಣಿ ಕಾಶ್ಮೀರ ಪ್ರವಾಸಕ್ಕೆ ಬಂದಿದ್ದರು. ಶ್ರೀನಗರದ ಹೊರವಲಯ ನರಬಾಲ್ನಲ್ಲಿ ಸೋಮವಾರ ಬೆಳಿಗ್ಗೆ ಪ್ರವಾಸಿಗರ ವಾಹನದ ಮೇಲೆ ಕಲ್ಲು ತೂರಾಟ ನಡೆದಿತ್ತು. ಈ ಘಟನೆಯಲ್ಲಿ ಕಲ್ಲೇಟಿನಿಂದ ತೀವ್ರವಾಗಿ ಗಾಯಗೊಂಡ ತಿರುಮಣಿ ಅವರನ್ನು ಬೆಳಿಗ್ಗೆ 10:30ರ ಸುಮಾರಿಗೆ ಆಸ್ಪತ್ರೆಗೆ ಸೇರಿಸಲಾಯಿತು.</p>.<p>ಆದರೆ, ಕೋಮಾ ಸ್ಥಿತಿ ತಲುಪಿದ ಅವರು ರಾತ್ರಿ 8:30ರ ಸುಮಾರಿಗೆ ಮೃತಪಟ್ಟಿದ್ದಾಗಿ ಎನ್ಡಿಟಿವಿ ವೆಬ್ಸೈಟ್ ವರದಿ ಮಾಡಿದೆ.</p>.<p>ಗುಂಪುಗಳ ಕಲ್ಲು ತೂರಾಟದ ಘರ್ಷಣೆ ವೇಳೆ ಪ್ರವಾಸಿಗರ ಬಸ್ನಲ್ಲಿದ್ದ ತಿರುಮಣಿ ಗಾಯಗೊಂಡಿದ್ದರು. ಪ್ರವಾಸಿಗರು ಗುಲ್ಮಾರ್ಗ್ ಕಡೆ ಹೊರಟಿದ್ದರು. ಈ ಘಟನೆಯಲ್ಲಿ 19 ವರ್ಷದ ಸ್ಥಳೀಯ ಯುವತಿಯೂ ಗಾಯಗೊಂಡಿರುವುದಾಗಿ ಶ್ರೀನಗರ ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ತಿರುಮಣಿ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಶ್ರೀನಗರದ ಪೊಲೀಸ್ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ, ತಿರುಮಣಿ ಪೋಷಕರಿಗೆ ಸಾಂತ್ವನ ಹೇಳಿದರು.</p>.<p>‘ನಾಚಿಕೆಯಿಂದ ನನ್ನ ತಲೆ ಬಾಗಿದೆ. ಇದು ತುಂಬ ದುಃಖದ ಸಂಗತಿ’ ಎಂದು ಮೆಹಬೂಬಾ ಮುಫ್ತಿ ಪ್ರತಿಕ್ರಿಯಿಸಿದ್ದಾಗಿ ಪಿಟಿಐ ವರದಿ ಮಾಡಿದೆ.</p>.<p>ದಕ್ಷಿಣ ಕಾಶ್ಮೀರದ ಸೋಫಿಯಾನ್ನಲ್ಲಿ ಕಳೆದ ವಾರ 50 ಮಕ್ಕಳಿದ್ದ ಶಾಲಾ ವಾಹನದ ಮೇಲೆ ಕಲ್ಲು ತೂರಾಟ ನಡೆದಿತ್ತು. ಈ ಘಟನೆಯಲ್ಲಿ ಮಗುವೊಂದು ಗಾಯಗೊಂಡಿತ್ತು.</p>.<p>ಭದ್ರತಾ ಪಡೆಗಳೊಂದಿಗೆ ಪ್ರತಿಭಟನಾಕಾರರು ಕಾಶ್ಮೀರದಲ್ಲಿ ನಡೆಸುತ್ತಿರುವ ಕಲ್ಲುತೂರಾಟ ಘರ್ಷಣೆ ಇದೀಗ ಪ್ರವಾಸಿಗರು ಹಾಗೂ ಶಾಲಾ ವಾಹನದ ಕಡೆಗೂ ತಿರುಗಿರುವುದು ಸರ್ಕಾರದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಜಮ್ಮು–ಕಾಶ್ಮೀರದ ಆದಾಯದ ಬಹುಪಾಲು ಪ್ರವಾಸೋದ್ಯಮದಿಂದಲೇ ಬರುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ: </strong>ಕಾಶ್ಮೀರ ಪ್ರವಾಸಕ್ಕೆ ಬಂದಿದ್ದ ತಮಿಳುನಾಡಿನ ಪ್ರವಾಸಿಗ ಕಲ್ಲು ತೂರಾಟದಲ್ಲಿ ಗಾಯಗೊಂಡು ಸೋಮವಾರ ಬೆಳಿಗ್ಗೆ ಕೋಮಾ ಸ್ಥಿತಿ ತಲುಪಿದ್ದರು. ರಾತ್ರಿ ಹೊತ್ತಿಗೆ ಅವರು ಮೃತಪಟ್ಟಿದ್ದಾರೆ.</p>.<p>ಚೆನ್ನೈನ 22 ವರ್ಷದ ಆರ್.ತಿರುಮಣಿ ಕಾಶ್ಮೀರ ಪ್ರವಾಸಕ್ಕೆ ಬಂದಿದ್ದರು. ಶ್ರೀನಗರದ ಹೊರವಲಯ ನರಬಾಲ್ನಲ್ಲಿ ಸೋಮವಾರ ಬೆಳಿಗ್ಗೆ ಪ್ರವಾಸಿಗರ ವಾಹನದ ಮೇಲೆ ಕಲ್ಲು ತೂರಾಟ ನಡೆದಿತ್ತು. ಈ ಘಟನೆಯಲ್ಲಿ ಕಲ್ಲೇಟಿನಿಂದ ತೀವ್ರವಾಗಿ ಗಾಯಗೊಂಡ ತಿರುಮಣಿ ಅವರನ್ನು ಬೆಳಿಗ್ಗೆ 10:30ರ ಸುಮಾರಿಗೆ ಆಸ್ಪತ್ರೆಗೆ ಸೇರಿಸಲಾಯಿತು.</p>.<p>ಆದರೆ, ಕೋಮಾ ಸ್ಥಿತಿ ತಲುಪಿದ ಅವರು ರಾತ್ರಿ 8:30ರ ಸುಮಾರಿಗೆ ಮೃತಪಟ್ಟಿದ್ದಾಗಿ ಎನ್ಡಿಟಿವಿ ವೆಬ್ಸೈಟ್ ವರದಿ ಮಾಡಿದೆ.</p>.<p>ಗುಂಪುಗಳ ಕಲ್ಲು ತೂರಾಟದ ಘರ್ಷಣೆ ವೇಳೆ ಪ್ರವಾಸಿಗರ ಬಸ್ನಲ್ಲಿದ್ದ ತಿರುಮಣಿ ಗಾಯಗೊಂಡಿದ್ದರು. ಪ್ರವಾಸಿಗರು ಗುಲ್ಮಾರ್ಗ್ ಕಡೆ ಹೊರಟಿದ್ದರು. ಈ ಘಟನೆಯಲ್ಲಿ 19 ವರ್ಷದ ಸ್ಥಳೀಯ ಯುವತಿಯೂ ಗಾಯಗೊಂಡಿರುವುದಾಗಿ ಶ್ರೀನಗರ ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ತಿರುಮಣಿ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಶ್ರೀನಗರದ ಪೊಲೀಸ್ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ, ತಿರುಮಣಿ ಪೋಷಕರಿಗೆ ಸಾಂತ್ವನ ಹೇಳಿದರು.</p>.<p>‘ನಾಚಿಕೆಯಿಂದ ನನ್ನ ತಲೆ ಬಾಗಿದೆ. ಇದು ತುಂಬ ದುಃಖದ ಸಂಗತಿ’ ಎಂದು ಮೆಹಬೂಬಾ ಮುಫ್ತಿ ಪ್ರತಿಕ್ರಿಯಿಸಿದ್ದಾಗಿ ಪಿಟಿಐ ವರದಿ ಮಾಡಿದೆ.</p>.<p>ದಕ್ಷಿಣ ಕಾಶ್ಮೀರದ ಸೋಫಿಯಾನ್ನಲ್ಲಿ ಕಳೆದ ವಾರ 50 ಮಕ್ಕಳಿದ್ದ ಶಾಲಾ ವಾಹನದ ಮೇಲೆ ಕಲ್ಲು ತೂರಾಟ ನಡೆದಿತ್ತು. ಈ ಘಟನೆಯಲ್ಲಿ ಮಗುವೊಂದು ಗಾಯಗೊಂಡಿತ್ತು.</p>.<p>ಭದ್ರತಾ ಪಡೆಗಳೊಂದಿಗೆ ಪ್ರತಿಭಟನಾಕಾರರು ಕಾಶ್ಮೀರದಲ್ಲಿ ನಡೆಸುತ್ತಿರುವ ಕಲ್ಲುತೂರಾಟ ಘರ್ಷಣೆ ಇದೀಗ ಪ್ರವಾಸಿಗರು ಹಾಗೂ ಶಾಲಾ ವಾಹನದ ಕಡೆಗೂ ತಿರುಗಿರುವುದು ಸರ್ಕಾರದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಜಮ್ಮು–ಕಾಶ್ಮೀರದ ಆದಾಯದ ಬಹುಪಾಲು ಪ್ರವಾಸೋದ್ಯಮದಿಂದಲೇ ಬರುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>