<p><strong>ನವದೆಹಲಿ (ಪಿಟಿಐ): </strong>`ಕಾಸಿಗಾಗಿ ಸುದ್ದಿ~ಗೆ ಸಂಬಂಧಿಸಿದಂತೆ ಭಾರತೀಯ ಪತ್ರಿಕಾ ಮಂಡಳಿ (ಪಿಸಿಐ) ಸರ್ಕಾರಕ್ಕೆ ಸಲ್ಲಿಸಿರುವ ವರದಿಯ ಸಾಧಕ-ಬಾಧಕಗಳ ಕುರಿತು ಪರಿಶೀಲಿಸಲು ಇದಕ್ಕೆ ಸಂಬಂಧಿಸಿದ ಸಚಿವರ ಸಮಿತಿ ಶೀಘ್ರವೇ ಸಭೆ ಸೇರಲಿದೆ.<br /> <br /> ವಾರ್ತಾ ಮತ್ತು ಪ್ರಸಾರ ಖಾತೆ ಸಚಿವೆ ಅಂಬಿಕಾ ಸೋನಿ ರಾಜ್ಯಸಭೆಯಲ್ಲಿ ಸೋಮವಾರ ಪ್ರಶ್ನೋತ್ತರ ವೇಳೆಯಲ್ಲಿ ಈ ವಿಚಾರ ತಿಳಿಸಿದರು.<br /> <br /> `ಕಾಸಿಗಾಗಿ ಸುದ್ದಿ~ಯ ಹಲವು ಮಗ್ಗಲುಗಳನ್ನು ಪರಿಶೀಲಿಸಿ, ಸಮಗ್ರ ನೀತಿ ರೂಪಿಸಲು ಹಾಗೂ ಈ ಕುರಿತ ದೂರುಗಳ ವಿಚಾರಣೆಗೆ ವ್ಯವಸ್ಥೆಯೊಂದನ್ನು ಹುಟ್ಟುಹಾಕಲು ಕಳೆದ ವರ್ಷ ಜನವರಿಯಲ್ಲಿ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅವರ ನೇತೃತ್ವದಲ್ಲಿ ಸಚಿವರ ಸಮಿತಿ ರಚಿಸಲಾಗಿತ್ತು. <br /> <br /> ಸಮಿತಿಯ ಅಧ್ಯಕ್ಷರಾಗಿರುವ ಮುಖರ್ಜಿ ಅವರ ಬಿಡುವಿಲ್ಲದ ಕೆಲಸಗಳಿಂದಾಗಿ ಕಳೆದ ಸೆಪ್ಟೆಂಬರ್ಗೂ ಮುನ್ನ ಸಭೆ ನಡೆಸಲು ಸಾಧ್ಯವಾಗಲಿಲ್ಲ. ಪತ್ರಿಕಾ ಮಂಡಳಿ ಸಲ್ಲಿಸಿರುವ ಶಿಫಾರಸುಗಳ ಕುರಿತು ಮತ್ತಷ್ಟು ಚರ್ಚಿಸಲು ಶೀಘ್ರದಲ್ಲೇ ಸಮಿತಿಯ ಎರಡನೇ ಸಭೆ ನಡೆಯಲಿದೆ ಎಂದು ಅಂಬಿಕಾ ಸೋನಿ ಹೇಳಿದರು.<br /> <br /> <strong>ಪಿಸಿಐ ಶಿಫಾರಸು:</strong> ಚುನಾವಣಾ ಅವ್ಯವಹಾರದ ಅಡಿ `ಕಾಸಿಗಾಗಿ ಸುದ್ದಿ~ಯನ್ನೂ ಶಿಕ್ಷಾರ್ಹ ಅಪರಾಧವಾಗಿಸಲು 1951ರ `ಪೀಪಲ್ಸ್ ಆ್ಯಕ್ಟ್~ಗೆ ತಿದ್ದುಪಡಿ ತರಬೇಕು. `ಕಾಸಿಗಾಗಿ ಸುದ್ದಿ~ಗೆ ಸಂಬಂಧಿಸಿದ ದೂರುಗಳ ವಿಚಾರಣೆ ನಡೆಸಿ ಅಂತಿಮ ತೀರ್ಪು ನೀಡಲು ಪತ್ರಿಕಾ ಮಂಡಳಿಗೆ ಶಾಸನಬದ್ಧ ಅಧಿಕಾರ ನೀಡಬೇಕು.<br /> <br /> ಇಂತಹ ಸುದ್ದಿಗಳ ಕುರಿತು ದೂರು ಸಲ್ಲಿಸಲು ಚುನಾವಣಾ ಆಯೋಗದ ವ್ಯಾಪ್ತಿಯಲ್ಲೇ ವಿಶೇಷ ಘಟಕವೊಂದನ್ನು ಸ್ಥಾಪಿಸಬೇಕು. ಮಾಧ್ಯಮಗಳು ಸ್ವಯಂ ನಿಯಂತ್ರಣ ಸಾಧಿಸಬೇಕು ಹಾಗೂ ಅವರಲ್ಲಿ ಜಾಗೃತಿ ಮೂಡಿಸಬೇಕು ಎಂದು ಮಂಡಳಿ ಶಿಫಾರಸಿನಲ್ಲಿ ಹೇಳಿದೆ.<br /> <br /> ಇದಲ್ಲದೇ ಜಾಹೀರಾತು ಎಂಬ ಶೀರ್ಷಿಕೆಯ ಅಡಿ ಪದೇಪದೇ ಸುದ್ದಿ ಪ್ರಕಟಿಸುವುದು ಹಾಗೂ ಸುದ್ದಿರೂಪದಲ್ಲಿ ಜಾಹೀರಾತು ಪ್ರಕಟಿಸುವುದರ ವಿರುದ್ಧ ಮಾಧ್ಯಮಗಳಿಗೆ ಮಂಡಳಿ ಎಚ್ಚರಿಕೆಯನ್ನೂ ನೀಡಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>`ಕಾಸಿಗಾಗಿ ಸುದ್ದಿ~ಗೆ ಸಂಬಂಧಿಸಿದಂತೆ ಭಾರತೀಯ ಪತ್ರಿಕಾ ಮಂಡಳಿ (ಪಿಸಿಐ) ಸರ್ಕಾರಕ್ಕೆ ಸಲ್ಲಿಸಿರುವ ವರದಿಯ ಸಾಧಕ-ಬಾಧಕಗಳ ಕುರಿತು ಪರಿಶೀಲಿಸಲು ಇದಕ್ಕೆ ಸಂಬಂಧಿಸಿದ ಸಚಿವರ ಸಮಿತಿ ಶೀಘ್ರವೇ ಸಭೆ ಸೇರಲಿದೆ.<br /> <br /> ವಾರ್ತಾ ಮತ್ತು ಪ್ರಸಾರ ಖಾತೆ ಸಚಿವೆ ಅಂಬಿಕಾ ಸೋನಿ ರಾಜ್ಯಸಭೆಯಲ್ಲಿ ಸೋಮವಾರ ಪ್ರಶ್ನೋತ್ತರ ವೇಳೆಯಲ್ಲಿ ಈ ವಿಚಾರ ತಿಳಿಸಿದರು.<br /> <br /> `ಕಾಸಿಗಾಗಿ ಸುದ್ದಿ~ಯ ಹಲವು ಮಗ್ಗಲುಗಳನ್ನು ಪರಿಶೀಲಿಸಿ, ಸಮಗ್ರ ನೀತಿ ರೂಪಿಸಲು ಹಾಗೂ ಈ ಕುರಿತ ದೂರುಗಳ ವಿಚಾರಣೆಗೆ ವ್ಯವಸ್ಥೆಯೊಂದನ್ನು ಹುಟ್ಟುಹಾಕಲು ಕಳೆದ ವರ್ಷ ಜನವರಿಯಲ್ಲಿ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅವರ ನೇತೃತ್ವದಲ್ಲಿ ಸಚಿವರ ಸಮಿತಿ ರಚಿಸಲಾಗಿತ್ತು. <br /> <br /> ಸಮಿತಿಯ ಅಧ್ಯಕ್ಷರಾಗಿರುವ ಮುಖರ್ಜಿ ಅವರ ಬಿಡುವಿಲ್ಲದ ಕೆಲಸಗಳಿಂದಾಗಿ ಕಳೆದ ಸೆಪ್ಟೆಂಬರ್ಗೂ ಮುನ್ನ ಸಭೆ ನಡೆಸಲು ಸಾಧ್ಯವಾಗಲಿಲ್ಲ. ಪತ್ರಿಕಾ ಮಂಡಳಿ ಸಲ್ಲಿಸಿರುವ ಶಿಫಾರಸುಗಳ ಕುರಿತು ಮತ್ತಷ್ಟು ಚರ್ಚಿಸಲು ಶೀಘ್ರದಲ್ಲೇ ಸಮಿತಿಯ ಎರಡನೇ ಸಭೆ ನಡೆಯಲಿದೆ ಎಂದು ಅಂಬಿಕಾ ಸೋನಿ ಹೇಳಿದರು.<br /> <br /> <strong>ಪಿಸಿಐ ಶಿಫಾರಸು:</strong> ಚುನಾವಣಾ ಅವ್ಯವಹಾರದ ಅಡಿ `ಕಾಸಿಗಾಗಿ ಸುದ್ದಿ~ಯನ್ನೂ ಶಿಕ್ಷಾರ್ಹ ಅಪರಾಧವಾಗಿಸಲು 1951ರ `ಪೀಪಲ್ಸ್ ಆ್ಯಕ್ಟ್~ಗೆ ತಿದ್ದುಪಡಿ ತರಬೇಕು. `ಕಾಸಿಗಾಗಿ ಸುದ್ದಿ~ಗೆ ಸಂಬಂಧಿಸಿದ ದೂರುಗಳ ವಿಚಾರಣೆ ನಡೆಸಿ ಅಂತಿಮ ತೀರ್ಪು ನೀಡಲು ಪತ್ರಿಕಾ ಮಂಡಳಿಗೆ ಶಾಸನಬದ್ಧ ಅಧಿಕಾರ ನೀಡಬೇಕು.<br /> <br /> ಇಂತಹ ಸುದ್ದಿಗಳ ಕುರಿತು ದೂರು ಸಲ್ಲಿಸಲು ಚುನಾವಣಾ ಆಯೋಗದ ವ್ಯಾಪ್ತಿಯಲ್ಲೇ ವಿಶೇಷ ಘಟಕವೊಂದನ್ನು ಸ್ಥಾಪಿಸಬೇಕು. ಮಾಧ್ಯಮಗಳು ಸ್ವಯಂ ನಿಯಂತ್ರಣ ಸಾಧಿಸಬೇಕು ಹಾಗೂ ಅವರಲ್ಲಿ ಜಾಗೃತಿ ಮೂಡಿಸಬೇಕು ಎಂದು ಮಂಡಳಿ ಶಿಫಾರಸಿನಲ್ಲಿ ಹೇಳಿದೆ.<br /> <br /> ಇದಲ್ಲದೇ ಜಾಹೀರಾತು ಎಂಬ ಶೀರ್ಷಿಕೆಯ ಅಡಿ ಪದೇಪದೇ ಸುದ್ದಿ ಪ್ರಕಟಿಸುವುದು ಹಾಗೂ ಸುದ್ದಿರೂಪದಲ್ಲಿ ಜಾಹೀರಾತು ಪ್ರಕಟಿಸುವುದರ ವಿರುದ್ಧ ಮಾಧ್ಯಮಗಳಿಗೆ ಮಂಡಳಿ ಎಚ್ಚರಿಕೆಯನ್ನೂ ನೀಡಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>