<p><strong>ಜೋಧಪುರ: </strong>ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ದೋಷಿ ಎಂದು ಇಲ್ಲಿನ ನ್ಯಾಯಾಲಯ ತೀರ್ಪು ನೀಡಿದೆ.</p>.<p>ಪ್ರಕರಣದಲ್ಲಿ ಸಲ್ಮಾನ್ ಖಾನ್ ಹೊರತುಪಡಿಸಿ ಇತರ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ನಟರಾದ ಸೈಫ್ ಅಲಿ ಖಾನ್, ಸೋನಾಲಿ ಬೇಂದ್ರೆ, ಟಬು ಮತ್ತು ನೀಲಂ ಅವರನ್ನು ಸಹ ಆರೋಪಿಗಳನ್ನಾಗಿ ಪರಿಗಣಿಸಲಾಗಿತ್ತು.</p>.<p>ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಮಾರ್ಚ್ 28ರಂದು ಮುಕ್ತಾಯಗೊಳಿಸಿದ್ದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು.</p>.<p><strong>ಏನಿದು ಪ್ರಕರಣ?: </strong>1998ರಲ್ಲಿ ಹಮ್ ಸಾಥ್ ಸಾಥ್ ಹೈ ಸಿನಿಮಾ ಶೂಟಿಂಗ್ ವೇಳೆ ಜೋಧಪುರ ಸಮೀಪದ ಕಂಕಣಿ ಗ್ರಾಮದಲ್ಲಿ ಸಲ್ಮಾನ್ ಖಾನ್ ಎರಡು ಕೃಷ್ಣಮೃಗಗಳನ್ನು ಬೇಟೆಯಾಡಿದ್ದರು. ಈ ಬೇಟೆಗೆ ಪರವಾನಗಿ ಇಲ್ಲದ ಬಂದೂಕು ಬಳಕೆ ಮಾಡಲಾಗಿತ್ತು ಎಂಬ ಆರೋಪವಿದೆ. ರಕ್ಷಿತಾರಣ್ಯ ಪ್ರದೇಶದಲ್ಲಿ ಕೃಷ್ಣಮೃಗ ಬೇಟೆಯಾಡಿದ್ದ ಸಲ್ಮಾನ್ ಖಾನ್ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಸೆಕ್ಷನ್ 9/51 ಮತ್ತು ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೋಧಪುರ: </strong>ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ದೋಷಿ ಎಂದು ಇಲ್ಲಿನ ನ್ಯಾಯಾಲಯ ತೀರ್ಪು ನೀಡಿದೆ.</p>.<p>ಪ್ರಕರಣದಲ್ಲಿ ಸಲ್ಮಾನ್ ಖಾನ್ ಹೊರತುಪಡಿಸಿ ಇತರ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ನಟರಾದ ಸೈಫ್ ಅಲಿ ಖಾನ್, ಸೋನಾಲಿ ಬೇಂದ್ರೆ, ಟಬು ಮತ್ತು ನೀಲಂ ಅವರನ್ನು ಸಹ ಆರೋಪಿಗಳನ್ನಾಗಿ ಪರಿಗಣಿಸಲಾಗಿತ್ತು.</p>.<p>ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಮಾರ್ಚ್ 28ರಂದು ಮುಕ್ತಾಯಗೊಳಿಸಿದ್ದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು.</p>.<p><strong>ಏನಿದು ಪ್ರಕರಣ?: </strong>1998ರಲ್ಲಿ ಹಮ್ ಸಾಥ್ ಸಾಥ್ ಹೈ ಸಿನಿಮಾ ಶೂಟಿಂಗ್ ವೇಳೆ ಜೋಧಪುರ ಸಮೀಪದ ಕಂಕಣಿ ಗ್ರಾಮದಲ್ಲಿ ಸಲ್ಮಾನ್ ಖಾನ್ ಎರಡು ಕೃಷ್ಣಮೃಗಗಳನ್ನು ಬೇಟೆಯಾಡಿದ್ದರು. ಈ ಬೇಟೆಗೆ ಪರವಾನಗಿ ಇಲ್ಲದ ಬಂದೂಕು ಬಳಕೆ ಮಾಡಲಾಗಿತ್ತು ಎಂಬ ಆರೋಪವಿದೆ. ರಕ್ಷಿತಾರಣ್ಯ ಪ್ರದೇಶದಲ್ಲಿ ಕೃಷ್ಣಮೃಗ ಬೇಟೆಯಾಡಿದ್ದ ಸಲ್ಮಾನ್ ಖಾನ್ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಸೆಕ್ಷನ್ 9/51 ಮತ್ತು ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>