ಭಾರತ ಆಗಲಿ, ಚೀನಾ ಆಗಲಿ ಕಾಲು ಕೆದರಿ ಪರಸ್ಪರ ಯುದ್ಧಕ್ಕೆ ಆಹ್ವಾನಿಸುವ ಸ್ಥಿತಿಯಲ್ಲಿ ಇಲ್ಲ. ಯುದ್ಧದ ಪರಿಣಾಮಗಳನ್ನು ಎಲ್ಲರೂ ತಿಳಿದಿದ್ದಾರೆ. ಆದರೂ ರಾಜತಾಂತ್ರಿಕ ನಿರ್ಧಾರಗಳು ಯಾವ ರೀತಿ ಇರುತ್ತವೆ ಎಂಬುದನ್ನು ಮುಂಚಿತವಾಗಿ ಹೇಳಲು ಬರುವುದಿಲ್ಲ ಎಂದು ಅವರು ತಿಳಿಸಿದರು.
ಹ್ಯಾಂಬರ್ಗ್ನಲ್ಲಿ ಇತ್ತೀಚೆಗೆ ನಡೆದ ಜಿ–20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಚೀನಾ ಅಧ್ಯಕ್ಷರೊಂದಿಗೆ ಚರ್ಚಿಸಿದ ಮತ್ತು ಸಿಕ್ಕಿಂ ಗಡಿಯ ಸದ್ಯದ ಸ್ಥಿತಿಗತಿ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಚೀನಾದೊಂದಿಗೆ ಮಾತುಕತೆ ಮೂಲಕ ಉದ್ವಿಗ್ನ ಸ್ಥಿತಿಯನ್ನು ಶಮನಗೊಳಿಸಲು ಪ್ರಯತ್ನಿಸಬೇಕು ಎಂಬ ಸಲಹೆ ನೀಡಲಾಯಿತು ಎಂದು ಹೇಳಿದರು.