<p><strong>ನವದೆಹಲಿ: </strong>ವಿವಿಧ ಹೈಕೋರ್ಟ್ಗಳಿಗೆ ನ್ಯಾಯಮೂರ್ತಿಗಳ ನೇಮಕಾತಿ ಸಂಬಂಧಿಸಿದಂತೆ ಕೊಲಿಜಿಯಂ ಶಿಫಾರಸ್ಸು ಮಾಡಿದ್ದರೂ ನೇಮಕಾತಿ ಪ್ರಕ್ರಿಯೆ ನಡೆಸದಿರುವ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಛೀಮಾರಿ ಹಾಕಿದೆ.</p>.<p>ಅಲಹಾಬಾದ್ ಹೈ ಕೋರ್ಟ್ನಲ್ಲಿ ಅಗತ್ಯವಿರುವ ಸ್ಥಾನಗಳ ಭರ್ತಿಗಾಗಿ ಜನವರಿಯಲ್ಲಿ 8 ಹಾಗೂ ಆಗಸ್ಟ್ನಲ್ಲಿ 27 ನ್ಯಾಯಮೂರ್ತಿಗಳ ನೇಮಕಾತಿಗೆ ಸುಪ್ರೀಂ ಕೋರ್ಟ್ ಸಮ್ಮತಿಸಿತ್ತು.</p>.<p>ಒಟ್ಟು 35 ನ್ಯಾಯಮೂರ್ತಿಗಳ ನೇಮಕಾತಿ ಅಧಿಸೂಚನೆ ಈವರೆಗೂ ಪ್ರಕಟಿಸಲಾಗಿಲ್ಲ. ಪ್ರಸ್ತುತ ಅಲಹಾಬಾದ್ ಹೈ ಕೋರ್ಟ್ ನಲ್ಲಿ 77 ನ್ಯಾಯಮೂರ್ತಿಗಳಿದ್ದಾರೆ. ಇಲ್ಲಿ 160 ನ್ಯಾಯಮೂರ್ತಿಗಳ ಅವಶ್ಯಕತೆಯಿದ್ದು, ಶೇ.50ಕ್ಕೂ ಕಡಿಮೆ ಸಂಖ್ಯಾಬಲದಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.</p>.<p>ನೇಮಕಾತಿ ಪ್ರಕ್ರಿಯೆ ವಿಳಂಬದಿಂದಾಗಿ ಇತ್ಯರ್ಥವಾಗದ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. 24 ಹೈ ಕೋರ್ಟ್ಗಳಲ್ಲಿ ಸುಮಾರು 40 ಲಕ್ಷ ಪ್ರಕರಣಗಳು ಬಾಕಿ ಉಳಿದಿವೆ. ನೇಮಕಾತಿ ಪ್ರಕ್ರಿಯೆ ವಿಳಂಬಿಸದಂತೆ ಕೋರ್ಟ್ ತಾಕೀತು ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ವಿವಿಧ ಹೈಕೋರ್ಟ್ಗಳಿಗೆ ನ್ಯಾಯಮೂರ್ತಿಗಳ ನೇಮಕಾತಿ ಸಂಬಂಧಿಸಿದಂತೆ ಕೊಲಿಜಿಯಂ ಶಿಫಾರಸ್ಸು ಮಾಡಿದ್ದರೂ ನೇಮಕಾತಿ ಪ್ರಕ್ರಿಯೆ ನಡೆಸದಿರುವ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಛೀಮಾರಿ ಹಾಕಿದೆ.</p>.<p>ಅಲಹಾಬಾದ್ ಹೈ ಕೋರ್ಟ್ನಲ್ಲಿ ಅಗತ್ಯವಿರುವ ಸ್ಥಾನಗಳ ಭರ್ತಿಗಾಗಿ ಜನವರಿಯಲ್ಲಿ 8 ಹಾಗೂ ಆಗಸ್ಟ್ನಲ್ಲಿ 27 ನ್ಯಾಯಮೂರ್ತಿಗಳ ನೇಮಕಾತಿಗೆ ಸುಪ್ರೀಂ ಕೋರ್ಟ್ ಸಮ್ಮತಿಸಿತ್ತು.</p>.<p>ಒಟ್ಟು 35 ನ್ಯಾಯಮೂರ್ತಿಗಳ ನೇಮಕಾತಿ ಅಧಿಸೂಚನೆ ಈವರೆಗೂ ಪ್ರಕಟಿಸಲಾಗಿಲ್ಲ. ಪ್ರಸ್ತುತ ಅಲಹಾಬಾದ್ ಹೈ ಕೋರ್ಟ್ ನಲ್ಲಿ 77 ನ್ಯಾಯಮೂರ್ತಿಗಳಿದ್ದಾರೆ. ಇಲ್ಲಿ 160 ನ್ಯಾಯಮೂರ್ತಿಗಳ ಅವಶ್ಯಕತೆಯಿದ್ದು, ಶೇ.50ಕ್ಕೂ ಕಡಿಮೆ ಸಂಖ್ಯಾಬಲದಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.</p>.<p>ನೇಮಕಾತಿ ಪ್ರಕ್ರಿಯೆ ವಿಳಂಬದಿಂದಾಗಿ ಇತ್ಯರ್ಥವಾಗದ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. 24 ಹೈ ಕೋರ್ಟ್ಗಳಲ್ಲಿ ಸುಮಾರು 40 ಲಕ್ಷ ಪ್ರಕರಣಗಳು ಬಾಕಿ ಉಳಿದಿವೆ. ನೇಮಕಾತಿ ಪ್ರಕ್ರಿಯೆ ವಿಳಂಬಿಸದಂತೆ ಕೋರ್ಟ್ ತಾಕೀತು ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>