<p><strong>ತ್ರಿಶ್ಶೂರ್</strong>: ಕೇರಳದ ಗುರುವಾಯೂರ್ ದೇವಸ್ಥಾನದ ಬಳಿ ನೇನ್ಮಿನಿ ಎಂಬಲ್ಲಿ ಭಾನುವಾರ ಆರ್ಎಸ್ಎಸ್ ಕಾರ್ಯಕರ್ತನ ಹತ್ಯೆ ನಡೆದಿದೆ. ವಡಕ್ಕೇತ್ತಲ ಆನಂದನ್ (28) ಹತ್ಯೆಗೀಡಾದ ವ್ಯಕ್ತಿ.<br /> ಸಿಪಿಎಂ ಕಾರ್ಯಕರ್ತ ಮೊಹಮ್ಮದ್ ಖಾಸಿಂ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಆನಂದನ್ ಅವರನ್ನು ಸಿಪಿಎಂ ಕಾರ್ಯಕರ್ತರೇ ಹತ್ಯೆ ಮಾಡಿರುವುದಾಗಿ ಶಂಕಿಸಲಾಗಿದೆ. 5 ತಿಂಗಳ ಹಿಂದೆ ಖಾಸಿಂ ಹತ್ಯೆ ನಡೆದಿತ್ತು.</p>.<p>ಆನಂದನ್ ಅವರು ಮಧ್ಯಾಹ್ನ ಒಂದು ಗಂಟೆಯ ವೇಳೆಗೆ ಬೈಕ್ನಲ್ಲಿ ಬರುತ್ತಿದ್ದಾಗ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ತೀವ್ರ ಗಾಯಗೊಂಡ ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೂ, ಪ್ರಾಣ ಉಳಿಸಲಾಗಲಿಲ್ಲ. ಇದೊಂದು ರಾಜಕೀಯ ಸೇಡಿನ ಕೃತ್ಯ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.</p>.<p>ಆನಂದನ್ ಅವರ ಹತ್ಯೆ ಖಂಡಿಸಿ ಬಿಜೆಪಿ- ಆರ್ಎಸ್ಎಸ್ ಗುರುವಾಯೂರ್ ನಗರದಲ್ಲಿ ಸೋಮವಾರ ಬಂದ್ಗೆ ಕರೆ ನೀಡಿದೆ.<br /> ಘಟನಾ ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು, ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತ್ರಿಶ್ಶೂರ್</strong>: ಕೇರಳದ ಗುರುವಾಯೂರ್ ದೇವಸ್ಥಾನದ ಬಳಿ ನೇನ್ಮಿನಿ ಎಂಬಲ್ಲಿ ಭಾನುವಾರ ಆರ್ಎಸ್ಎಸ್ ಕಾರ್ಯಕರ್ತನ ಹತ್ಯೆ ನಡೆದಿದೆ. ವಡಕ್ಕೇತ್ತಲ ಆನಂದನ್ (28) ಹತ್ಯೆಗೀಡಾದ ವ್ಯಕ್ತಿ.<br /> ಸಿಪಿಎಂ ಕಾರ್ಯಕರ್ತ ಮೊಹಮ್ಮದ್ ಖಾಸಿಂ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಆನಂದನ್ ಅವರನ್ನು ಸಿಪಿಎಂ ಕಾರ್ಯಕರ್ತರೇ ಹತ್ಯೆ ಮಾಡಿರುವುದಾಗಿ ಶಂಕಿಸಲಾಗಿದೆ. 5 ತಿಂಗಳ ಹಿಂದೆ ಖಾಸಿಂ ಹತ್ಯೆ ನಡೆದಿತ್ತು.</p>.<p>ಆನಂದನ್ ಅವರು ಮಧ್ಯಾಹ್ನ ಒಂದು ಗಂಟೆಯ ವೇಳೆಗೆ ಬೈಕ್ನಲ್ಲಿ ಬರುತ್ತಿದ್ದಾಗ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ತೀವ್ರ ಗಾಯಗೊಂಡ ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೂ, ಪ್ರಾಣ ಉಳಿಸಲಾಗಲಿಲ್ಲ. ಇದೊಂದು ರಾಜಕೀಯ ಸೇಡಿನ ಕೃತ್ಯ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.</p>.<p>ಆನಂದನ್ ಅವರ ಹತ್ಯೆ ಖಂಡಿಸಿ ಬಿಜೆಪಿ- ಆರ್ಎಸ್ಎಸ್ ಗುರುವಾಯೂರ್ ನಗರದಲ್ಲಿ ಸೋಮವಾರ ಬಂದ್ಗೆ ಕರೆ ನೀಡಿದೆ.<br /> ಘಟನಾ ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು, ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>