<p><strong>ಮುಂಬೈ (ಐಎಎನ್ಎಸ್):</strong> ದೇಶಕ್ಕೆ ಅಂಟಿರುವ ಸಮಸ್ಯೆಗಳನ್ನು ಪರಿಹರಿಸಲು ಜನರು ಕಾಂಗ್ರೆಸ್ನ ಕಪಿಮುಷ್ಟಿಯಿಂದ ಭಾರತವನ್ನು ಮುಕ್ತಗೊಳಿಸಬೇಕು ಎಂದು ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಭಾನುವಾರ ಹೇಳಿದರು.<br /> <br /> ಬಿಕೆಸಿ ಮೈದಾನದಲ್ಲಿ ನಡೆದ ಬೃಹತ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಮಹಾರಾಷ್ಟ್ರ ಮತ್ತು ಗುಜರಾತ್ ಈ ಎರಡು ರಾಜ್ಯಗಳು ಮೇ1, 1960ರಂದು ಜನ್ಮತಳೆದಿವೆ. ಆದರೆ, ಇವರೆಗೆ ಗುಜರಾತ್ನಲ್ಲಿ 14 ಮುಖ್ಯಮಂತ್ರಿಗಳು ಆಡಳಿತ ನಡೆಸಿದರೆ, ಮಹಾರಾಷ್ಟ್ರ 26 ಮುಖ್ಯಮಂತ್ರಿಗಳನ್ನು ಕಂಡಿದೆ ಎಂದು ತಿಳಿಸಿದರು.<br /> <br /> `ಇಲ್ಲಿ (ಮಹಾರಾಷ್ಟ್ರದಲ್ಲಿ) ಯಾವ ರೀತಿಯ ಸರ್ಕಾರವಿದೆ? ಒಬ್ಬ ಸಿಎಂ ಬಂದರೆ, ಮತ್ತೊರ್ವ ಅವನನ್ನು ಹೊರಗಟ್ಟಲು ಬೆನ್ನತ್ತಿ ಪ್ರಯತ್ನಿಸುತ್ತಾನೆ' ಅಲ್ಲದೇ, ಅಧಿಕಾರಕ್ಕಾಗಿ ಕಾಂಗ್ರೆಸ್ ಒಡೆದು ಆಳುವ ನೀತಿಯನ್ನು ಬಳಸುತ್ತಾ ಬರುತ್ತಿದೆ ಎಂದು ಹೇಳಿದರು.</p>.<p>`ಒಂದುವೇಳೆ ನಾವು ದೇಶವನ್ನು ಕಾಡುತ್ತಿರುವ ಸಮಸ್ಯೆಗಳಿಂದ ಬಿಡುಗಡೆ ಹೊಂದಬೇಕೆಂದು ಬಯಸಿದರೆ ಮೊದಲು ಕಾಂಗ್ರೆಸ್ನ ಬಿಗಿಮುಷ್ಟಿಯಿಂದ ಬಿಡುಗಡೆ ಹೊಂದಬೇಕು' ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ (ಐಎಎನ್ಎಸ್):</strong> ದೇಶಕ್ಕೆ ಅಂಟಿರುವ ಸಮಸ್ಯೆಗಳನ್ನು ಪರಿಹರಿಸಲು ಜನರು ಕಾಂಗ್ರೆಸ್ನ ಕಪಿಮುಷ್ಟಿಯಿಂದ ಭಾರತವನ್ನು ಮುಕ್ತಗೊಳಿಸಬೇಕು ಎಂದು ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಭಾನುವಾರ ಹೇಳಿದರು.<br /> <br /> ಬಿಕೆಸಿ ಮೈದಾನದಲ್ಲಿ ನಡೆದ ಬೃಹತ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಮಹಾರಾಷ್ಟ್ರ ಮತ್ತು ಗುಜರಾತ್ ಈ ಎರಡು ರಾಜ್ಯಗಳು ಮೇ1, 1960ರಂದು ಜನ್ಮತಳೆದಿವೆ. ಆದರೆ, ಇವರೆಗೆ ಗುಜರಾತ್ನಲ್ಲಿ 14 ಮುಖ್ಯಮಂತ್ರಿಗಳು ಆಡಳಿತ ನಡೆಸಿದರೆ, ಮಹಾರಾಷ್ಟ್ರ 26 ಮುಖ್ಯಮಂತ್ರಿಗಳನ್ನು ಕಂಡಿದೆ ಎಂದು ತಿಳಿಸಿದರು.<br /> <br /> `ಇಲ್ಲಿ (ಮಹಾರಾಷ್ಟ್ರದಲ್ಲಿ) ಯಾವ ರೀತಿಯ ಸರ್ಕಾರವಿದೆ? ಒಬ್ಬ ಸಿಎಂ ಬಂದರೆ, ಮತ್ತೊರ್ವ ಅವನನ್ನು ಹೊರಗಟ್ಟಲು ಬೆನ್ನತ್ತಿ ಪ್ರಯತ್ನಿಸುತ್ತಾನೆ' ಅಲ್ಲದೇ, ಅಧಿಕಾರಕ್ಕಾಗಿ ಕಾಂಗ್ರೆಸ್ ಒಡೆದು ಆಳುವ ನೀತಿಯನ್ನು ಬಳಸುತ್ತಾ ಬರುತ್ತಿದೆ ಎಂದು ಹೇಳಿದರು.</p>.<p>`ಒಂದುವೇಳೆ ನಾವು ದೇಶವನ್ನು ಕಾಡುತ್ತಿರುವ ಸಮಸ್ಯೆಗಳಿಂದ ಬಿಡುಗಡೆ ಹೊಂದಬೇಕೆಂದು ಬಯಸಿದರೆ ಮೊದಲು ಕಾಂಗ್ರೆಸ್ನ ಬಿಗಿಮುಷ್ಟಿಯಿಂದ ಬಿಡುಗಡೆ ಹೊಂದಬೇಕು' ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>