<p><strong>ಅಹಮದಾಬಾದ್(ಪಿಟಿಐ):</strong> ಕೋಮು ಹಿಂಸಾಚಾರ ಮಸೂದೆ ಮಂಡನೆಯ ಸಂದರ್ಭವನ್ನು ಪ್ರಶ್ನಿಸಿರುವ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ, ಉದ್ದೇಶಿತ ಮಸೂದೆ ‘ದುರಂತಕ್ಕೆ ಸಲಹೆ’ ಎಂದು ಟೀಕಿಸಿದ್ದಾರೆ. ಅಲ್ಲದೇ ಈ ಸಂಬಂಧ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಗುರುವಾರ ಪತ್ರ ಬರೆದಿದ್ದಾರೆ.</p>.<p>ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ಮಸೂದೆ ಮಂಡನೆಯಾಗುವ ಸಾಧ್ಯತೆಗಳಿದ್ದು, ಅಧಿವೇಶನ ಆರಂಭವಾಗುವ ದಿನವೇ ಮೋದಿ ಪತ್ರ ಬರೆದಿದ್ದಾರೆ.</p>.<p>ಈ ಮಸೂದೆ ರಾಜ್ಯಗಳ ಅಧಿಕಾರವನ್ನು ಅತಿಕ್ರಮಿಸುವ ಪ್ರಯತ್ನವಾಗಿದೆ ಎಂದು ಜರಿದಿರುವ ಬಿಜೆಪಿ ಪ್ರಧಾನಿ ಅಭ್ಯರ್ಥಿ, ಈ ಬಗ್ಗೆ ಮುಂದುವರಿಯುವ ಮುನ್ನ ರಾಜ್ಯ ಸರ್ಕಾರಗಳು, ರಾಜಕೀಯ ಪಕ್ಷಗಳು, ಪೊಲೀಸ್ ಹಾಗೂ ಭದ್ರತಾ ಪಡೆಗಳಂತಹ ಸಂಬಂಧಪಟ್ಟ ಹಲವರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸುವಂತೆ ಒತ್ತಾಯಿಸಿದ್ದಾರೆ.</p>.<p>‘ಕೋಮು ಹಿಂಸಾಚಾರ ಮಸೂದೆಯು ತಪ್ಪು ಪರಿಕಲ್ಪನೆ, ದುರ್ಬಲ ಕರಡು ಹಾಗೂ ದುರಂತಕ್ಕೆ ಕಾರಣವಾಗಬಲ್ಲ ಸಲಹೆ’ ಎಂದು ಸಿಂಗ್ ಅವರಿಗೆ ಬರೆದ ಪತ್ರದಲ್ಲಿ ಮೋದಿ ಟೀಕಿಸಿದ್ದಾರೆ.</p>.<p>ಅಲ್ಲದೇ, ‘ಮಸೂದೆ ಮಂಡಿಸುತ್ತಿರುವ ಸಂದರ್ಭದ ಹಿಂದೆ ನೈಜ ಉದ್ದೇಶಕ್ಕಿಂತ ಹೆಚ್ಚಾಗಿ ರಾಜಕೀಯ ಹಿತಾಸಕ್ತಿ ಹಾಗೂ ಮತ ಬ್ಯಾಂಕ್ ರಾಜಕೀಯದ ಸಂಶಯ ಮೂಡಿಸಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್(ಪಿಟಿಐ):</strong> ಕೋಮು ಹಿಂಸಾಚಾರ ಮಸೂದೆ ಮಂಡನೆಯ ಸಂದರ್ಭವನ್ನು ಪ್ರಶ್ನಿಸಿರುವ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ, ಉದ್ದೇಶಿತ ಮಸೂದೆ ‘ದುರಂತಕ್ಕೆ ಸಲಹೆ’ ಎಂದು ಟೀಕಿಸಿದ್ದಾರೆ. ಅಲ್ಲದೇ ಈ ಸಂಬಂಧ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಗುರುವಾರ ಪತ್ರ ಬರೆದಿದ್ದಾರೆ.</p>.<p>ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ಮಸೂದೆ ಮಂಡನೆಯಾಗುವ ಸಾಧ್ಯತೆಗಳಿದ್ದು, ಅಧಿವೇಶನ ಆರಂಭವಾಗುವ ದಿನವೇ ಮೋದಿ ಪತ್ರ ಬರೆದಿದ್ದಾರೆ.</p>.<p>ಈ ಮಸೂದೆ ರಾಜ್ಯಗಳ ಅಧಿಕಾರವನ್ನು ಅತಿಕ್ರಮಿಸುವ ಪ್ರಯತ್ನವಾಗಿದೆ ಎಂದು ಜರಿದಿರುವ ಬಿಜೆಪಿ ಪ್ರಧಾನಿ ಅಭ್ಯರ್ಥಿ, ಈ ಬಗ್ಗೆ ಮುಂದುವರಿಯುವ ಮುನ್ನ ರಾಜ್ಯ ಸರ್ಕಾರಗಳು, ರಾಜಕೀಯ ಪಕ್ಷಗಳು, ಪೊಲೀಸ್ ಹಾಗೂ ಭದ್ರತಾ ಪಡೆಗಳಂತಹ ಸಂಬಂಧಪಟ್ಟ ಹಲವರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸುವಂತೆ ಒತ್ತಾಯಿಸಿದ್ದಾರೆ.</p>.<p>‘ಕೋಮು ಹಿಂಸಾಚಾರ ಮಸೂದೆಯು ತಪ್ಪು ಪರಿಕಲ್ಪನೆ, ದುರ್ಬಲ ಕರಡು ಹಾಗೂ ದುರಂತಕ್ಕೆ ಕಾರಣವಾಗಬಲ್ಲ ಸಲಹೆ’ ಎಂದು ಸಿಂಗ್ ಅವರಿಗೆ ಬರೆದ ಪತ್ರದಲ್ಲಿ ಮೋದಿ ಟೀಕಿಸಿದ್ದಾರೆ.</p>.<p>ಅಲ್ಲದೇ, ‘ಮಸೂದೆ ಮಂಡಿಸುತ್ತಿರುವ ಸಂದರ್ಭದ ಹಿಂದೆ ನೈಜ ಉದ್ದೇಶಕ್ಕಿಂತ ಹೆಚ್ಚಾಗಿ ರಾಜಕೀಯ ಹಿತಾಸಕ್ತಿ ಹಾಗೂ ಮತ ಬ್ಯಾಂಕ್ ರಾಜಕೀಯದ ಸಂಶಯ ಮೂಡಿಸಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>