ನವದೆಹಲಿ (ಪಿಟಿಐ): ಬೊಫೋರ್ಸ್ ಫಿರಂಗಿ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಇಟಲಿಯ ಉದ್ಯಮಿ ಒಟ್ಟಾವಿಯೊ ಕ್ವಟ್ರೋಚಿ ಮೇಲಿನ ಆರೋಪದ ಬಗ್ಗೆ ವಿಚಾರಣೆ ನಡೆಸಿದ ದೆಹಲಿ ಮೆಟ್ರೊಪಾಲಿಟನ್ ನ್ಯಾಯಾಲಯ ತೀರ್ಪು ಪ್ರಕಟಣೆಯನ್ನು ಮಾರ್ಚ್ 4 ಕ್ಕೆ ಮುಂದೂಡಿದೆ.
ಕ್ವಟ್ರೋಚಿ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ಹಿಂಪಡೆಯಲು ತೀರ್ಮಾನಿಸಿದ್ದ ಸಿಬಿಐ ಅಧಿಕಾರಿಗಳು, ಪ್ರಕರಣದ ವಿಚಾರಣೆ ಕೈಬಿಡುವಂತೆ ನ್ಯಾಯಾಯಲಕ್ಕೆ ಅರ್ಜಿ ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ಚೀಫ್ ಮೆಟ್ರೊಪಾಲಿಟನ್ ನ್ಯಾಯಾಧೀಶ ವಿನೋದ್ ಯಾದವ್ ತೀರ್ಪನ್ನು ಕಾಯ್ದಿರಿಸಿದರು.