<p><strong>ನವದೆಹಲಿ: </strong>ಗಂಗಾನದಿ ದಡದಲ್ಲಿರುವ ಹರಿದ್ವಾರ, ರಿಷಿಕೇಶಗಳಂತ ಹಲವು ನಗರಗಳಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆಯ ಮೇಲೆ ಸಂಪೂರ್ಣ ನಿಷೇಧ ಹೇರಲಾಗಿದೆ ಎಂದು ರಾಷ್ಟ್ರೀಯ ಹಸಿರು ನ್ಯಾಯಪೀಠ (ಎನ್ಜಿಟಿ) ಘೋಷಿಸಿದೆ.</p>.<p>ಎನ್ಜಿಟಿ ಮುಖ್ಯಸ್ಥ ನ್ಯಾ. ಸ್ವತಂತ್ರ ಕುಮಾರ್ ನೇತೃತ್ವದ ಪೀಠ ಉತ್ತರಕಾಶಿವರೆಗೂ ಪ್ಲಾಸ್ಟಿಕ್ ಚೀಲ, ಪ್ಲೇಟ್ಗಳು ಹಾಗೂ ಮತ್ತಿತರೆ ಪ್ಲಾಸ್ಟಿಕ್ ವಸ್ತುಗಳ ಮಾರಾಟ, ಉತ್ಪಾದನೆ ಮತ್ತು ಸಂಗ್ರಹಣೆಯನ್ನು ನಿಷೇಧಿಸಿದೆ.</p>.<p>ಪರಿಸರವಾದಿ ಎಮ್.ಸಿ. ಮೆಹ್ತಾ ಅವರ ಮನವಿಯ ವಿಚಾರಣೆ ನಡೆಸಿದ ಹಸಿರು ಪೀಠ ಈ ಆದೇಶ ಹೊರಡಿಸಿದೆ. ಆದೇಶ ಉಲ್ಲಂಘಿಸುವವರಿಗೆ ₹ 5 ಸಾವಿರ ದಂಡ ವಿಧಿಸಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ.</p>.<p>ಈ ಹಿಂದೆಯೂ ಇಂತಹ ಆದೇಶ ಹೊರಡಿಸಲಾಗಿತ್ತಾದರೂ ಪ್ಲಾಸ್ಟಿಕ್ ಬಳಕೆ ನಿಯಂತ್ರಣಕ್ಕೆ ಬಂದಿರಲಿಲ್ಲ. ನದಿ ತೀರ ಪ್ರದೇಶದಲ್ಲಿ ಪ್ಲಾಸ್ಟಿಕ್ ಬಳಕೆಯಿಂದಾಗಿ ಮಾಲಿನ್ಯ ಹೆಚ್ಚಳವಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಗಂಗಾನದಿ ದಡದಲ್ಲಿರುವ ಹರಿದ್ವಾರ, ರಿಷಿಕೇಶಗಳಂತ ಹಲವು ನಗರಗಳಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆಯ ಮೇಲೆ ಸಂಪೂರ್ಣ ನಿಷೇಧ ಹೇರಲಾಗಿದೆ ಎಂದು ರಾಷ್ಟ್ರೀಯ ಹಸಿರು ನ್ಯಾಯಪೀಠ (ಎನ್ಜಿಟಿ) ಘೋಷಿಸಿದೆ.</p>.<p>ಎನ್ಜಿಟಿ ಮುಖ್ಯಸ್ಥ ನ್ಯಾ. ಸ್ವತಂತ್ರ ಕುಮಾರ್ ನೇತೃತ್ವದ ಪೀಠ ಉತ್ತರಕಾಶಿವರೆಗೂ ಪ್ಲಾಸ್ಟಿಕ್ ಚೀಲ, ಪ್ಲೇಟ್ಗಳು ಹಾಗೂ ಮತ್ತಿತರೆ ಪ್ಲಾಸ್ಟಿಕ್ ವಸ್ತುಗಳ ಮಾರಾಟ, ಉತ್ಪಾದನೆ ಮತ್ತು ಸಂಗ್ರಹಣೆಯನ್ನು ನಿಷೇಧಿಸಿದೆ.</p>.<p>ಪರಿಸರವಾದಿ ಎಮ್.ಸಿ. ಮೆಹ್ತಾ ಅವರ ಮನವಿಯ ವಿಚಾರಣೆ ನಡೆಸಿದ ಹಸಿರು ಪೀಠ ಈ ಆದೇಶ ಹೊರಡಿಸಿದೆ. ಆದೇಶ ಉಲ್ಲಂಘಿಸುವವರಿಗೆ ₹ 5 ಸಾವಿರ ದಂಡ ವಿಧಿಸಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ.</p>.<p>ಈ ಹಿಂದೆಯೂ ಇಂತಹ ಆದೇಶ ಹೊರಡಿಸಲಾಗಿತ್ತಾದರೂ ಪ್ಲಾಸ್ಟಿಕ್ ಬಳಕೆ ನಿಯಂತ್ರಣಕ್ಕೆ ಬಂದಿರಲಿಲ್ಲ. ನದಿ ತೀರ ಪ್ರದೇಶದಲ್ಲಿ ಪ್ಲಾಸ್ಟಿಕ್ ಬಳಕೆಯಿಂದಾಗಿ ಮಾಲಿನ್ಯ ಹೆಚ್ಚಳವಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>