<p><strong>ನವದೆಹಲಿ: </strong>ರಾಷ್ಟ್ರೀಯ ನದಿ ಗಂಗಾ ಮಸೂದೆ 2017ರ (ಪುನರುಜ್ಜೀವನ, ಸಂರಕ್ಷಣೆ ಮತ್ತು ನಿರ್ವಹಣೆ) ಅಂಶಗಳ ಕುರಿತು ಚರ್ಚಿಸಲು ಕೇಂದ್ರ ಸರ್ಕಾರ ರಚಿಸಿದ್ದ ತಜ್ಞರ ಸಮಿತಿಯ ಮೊದಲ ಸಭೆ ಸೋಮವಾರ ನಡೆಯಿತು.</p>.<p>ಗಂಗಾ ನದಿ ಶುದ್ಧೀಕರಣ ರಾಷ್ಟ್ರೀಯ ಮಿಷನ್ನ (ಎನ್ಎಂಸಿಜಿ) ನಿರ್ದೇಶಕ ಜನರಲ್ ಯು.ಪಿ. ಸಿಂಗ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತಪ್ಪಿತಸ್ಥರಿಗೆ ದಂಡ, ಜೈಲು ಶಿಕ್ಷೆ ಸೇರಿದಂತೆ ವಿವಿಧ ವಿಷಯಗಳನ್ನು ಚರ್ಚಿಸಲಾಯಿತು ಎಂದು ಕೇಂದ್ರ ಜಲಸಂಪನ್ಮೂಲ ಸಚಿವಾಲಯ ತಿಳಿಸಿದೆ.</p>.<p>ಸಮಿತಿ ಸದಸ್ಯರಾದ ಸಚಿವಾಲಯದ ಜಂಟಿ ಕಾರ್ಯದರ್ಶಿ ಸಂಜಯ್ ಕುಂಡು, ಮಧ್ಯಪ್ರದೇಶ ಅಡ್ವೊಕೇಟ್ ಜನರಲ್ ಪುರುಷಿಂದ್ರ ಕೌರವ್ ಮತ್ತು ಅಲಹಾಬಾದ್ ಹೈಕೋರ್ಟ್ನ ವಕೀಲ ಅರುಣ್ ಕುಮಾರ್ ಗುಪ್ತಾ ಅವರು ಸಭೆಯಲ್ಲಿ ಹಾಜರಿದ್ದರು.</p>.<p>ನದಿಯಲ್ಲಿ ಎಲೆಕ್ಟ್ರಾನಿಕ್ ತಾಜ್ಯದ ಅಡೆತಡೆಯಿಲ್ಲದ ಹರಿವು ಹಾಗೂ ನದಿಯ ಸ್ವಚ್ಛತೆಯಂತಹ ಗಂಭೀರ ವಿಷಯಗಳನ್ನು ಮಸೂದೆ ಒಳಗೊಂಡಿದೆ ಎಂದು ಸಚಿವಾಲಯ ತಿಳಿಸಿದೆ.</p>.<p>ಗಂಗಾ ನದಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್, ವಿವಿಧ ಹೈಕೋರ್ಟ್ಗಳು ಹಾಗೂ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗಳ ಅದೇಶಗಳನ್ನು ಗಮನದಲ್ಲಿಟ್ಟುಕೊಂಡು ಮಸೂದೆಯ ಕರಡು ಸಿದ್ಧಪಡಿಸಲಾಗಿದೆ.</p>.<p>2016ರ ಜುಲೈನಲ್ಲಿ ರಚನೆಯಾದ ನ್ಯಾಯಮೂರ್ತಿ ಗಿರಿಧರ್ ಮಾಳವೀಯ ನೇತೃತ್ವದ ಸಮಿತಿಯು ಕರಡು ಮಸೂದೆಯನ್ನು ಸಿದ್ಧಪಡಿಸಿತ್ತು. ಇದನ್ನು 2017ರ ಏಪ್ರಿಲ್ 17ರಂದು ಕೇಂದ್ರ ಜಲಸಂಪನ್ಮೂಲ ಸಚಿವಾಲಯಕ್ಕೆ ಸಲ್ಲಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ರಾಷ್ಟ್ರೀಯ ನದಿ ಗಂಗಾ ಮಸೂದೆ 2017ರ (ಪುನರುಜ್ಜೀವನ, ಸಂರಕ್ಷಣೆ ಮತ್ತು ನಿರ್ವಹಣೆ) ಅಂಶಗಳ ಕುರಿತು ಚರ್ಚಿಸಲು ಕೇಂದ್ರ ಸರ್ಕಾರ ರಚಿಸಿದ್ದ ತಜ್ಞರ ಸಮಿತಿಯ ಮೊದಲ ಸಭೆ ಸೋಮವಾರ ನಡೆಯಿತು.</p>.<p>ಗಂಗಾ ನದಿ ಶುದ್ಧೀಕರಣ ರಾಷ್ಟ್ರೀಯ ಮಿಷನ್ನ (ಎನ್ಎಂಸಿಜಿ) ನಿರ್ದೇಶಕ ಜನರಲ್ ಯು.ಪಿ. ಸಿಂಗ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತಪ್ಪಿತಸ್ಥರಿಗೆ ದಂಡ, ಜೈಲು ಶಿಕ್ಷೆ ಸೇರಿದಂತೆ ವಿವಿಧ ವಿಷಯಗಳನ್ನು ಚರ್ಚಿಸಲಾಯಿತು ಎಂದು ಕೇಂದ್ರ ಜಲಸಂಪನ್ಮೂಲ ಸಚಿವಾಲಯ ತಿಳಿಸಿದೆ.</p>.<p>ಸಮಿತಿ ಸದಸ್ಯರಾದ ಸಚಿವಾಲಯದ ಜಂಟಿ ಕಾರ್ಯದರ್ಶಿ ಸಂಜಯ್ ಕುಂಡು, ಮಧ್ಯಪ್ರದೇಶ ಅಡ್ವೊಕೇಟ್ ಜನರಲ್ ಪುರುಷಿಂದ್ರ ಕೌರವ್ ಮತ್ತು ಅಲಹಾಬಾದ್ ಹೈಕೋರ್ಟ್ನ ವಕೀಲ ಅರುಣ್ ಕುಮಾರ್ ಗುಪ್ತಾ ಅವರು ಸಭೆಯಲ್ಲಿ ಹಾಜರಿದ್ದರು.</p>.<p>ನದಿಯಲ್ಲಿ ಎಲೆಕ್ಟ್ರಾನಿಕ್ ತಾಜ್ಯದ ಅಡೆತಡೆಯಿಲ್ಲದ ಹರಿವು ಹಾಗೂ ನದಿಯ ಸ್ವಚ್ಛತೆಯಂತಹ ಗಂಭೀರ ವಿಷಯಗಳನ್ನು ಮಸೂದೆ ಒಳಗೊಂಡಿದೆ ಎಂದು ಸಚಿವಾಲಯ ತಿಳಿಸಿದೆ.</p>.<p>ಗಂಗಾ ನದಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್, ವಿವಿಧ ಹೈಕೋರ್ಟ್ಗಳು ಹಾಗೂ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗಳ ಅದೇಶಗಳನ್ನು ಗಮನದಲ್ಲಿಟ್ಟುಕೊಂಡು ಮಸೂದೆಯ ಕರಡು ಸಿದ್ಧಪಡಿಸಲಾಗಿದೆ.</p>.<p>2016ರ ಜುಲೈನಲ್ಲಿ ರಚನೆಯಾದ ನ್ಯಾಯಮೂರ್ತಿ ಗಿರಿಧರ್ ಮಾಳವೀಯ ನೇತೃತ್ವದ ಸಮಿತಿಯು ಕರಡು ಮಸೂದೆಯನ್ನು ಸಿದ್ಧಪಡಿಸಿತ್ತು. ಇದನ್ನು 2017ರ ಏಪ್ರಿಲ್ 17ರಂದು ಕೇಂದ್ರ ಜಲಸಂಪನ್ಮೂಲ ಸಚಿವಾಲಯಕ್ಕೆ ಸಲ್ಲಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>