<p><strong>ಕೋಲ್ಕತ್ತ (ಪಿಟಿಐ): </strong>ಭಾರತೀಯ ಕ್ರಿಕೆಟ್ ತಂಡ ಮಾಜಿ ನಾಯಕ ಸೌರವ್ ಗಂಗೂಲಿ ಅವರಿಗೆ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಭಾರತೀಯ ಜನತಾ ಪಕ್ಷ ಪ್ರಸ್ತಾವ ಮುಂದಿಟ್ಟಿದೆ.</p>.<p>‘ನವೆಂಬರ್ತಿಂಗಳ ಮಧ್ಯಭಾಗದಲ್ಲಿ ನವದೆಹಲಿಯಲ್ಲಿ ಗಂಗೂಲಿ ಅವರೊಂದಿಗೆ ಪಕ್ಷ ಮುಖಂಡ ವರುಣ್ ಗಾಂಧಿ ಅವರು ಸಹಜವಾಗಿ ಈ ಬಗ್ಗೆ ಚರ್ಚಿಸಿದ್ದರು ’ಎಂದು ಪಶ್ವಿಮ ಬಂಗಾಳ ಬಿಜೆಪಿ ಘಟಕದ ಅಧ್ಯಕ ರಾಹುಲ್ ಸಿನ್ಹಾ ತಿಳಿಸಿದ್ದಾರೆ.</p>.<p>‘ಅವರು (ವರುಣ್) ಆಹ್ವಾನ ನೀಡಿದ್ದಾರೆ. ಆದರೆ ಗಂಗೂಲಿ ಅವರು ಪ್ರಸ್ತಾವದ ತಮ್ಮ ನಿರ್ಧಾರವನ್ನು ಸ್ಪಷ್ಟ ಪಡಿಸಿಲ್ಲ. ವಿಚಾರ ಮಾಡಿ ದ ಬಳಿಕ ಚುನಾವಣೆಯಲ್ಲಿ ಸ್ಪರ್ಧಿಸಬೇಕೆ ಅಥವಾ ಬೇಡವೇ ಎಂಬ ಬಗ್ಗೆ ನಿರ್ಧರಿಸುವುದಾಗಿ ಹೇಳಿದ್ದಾರೆ’ ಎಂದು ಪಕ್ಷ ರಾಷ್ಟ್ರೀಯ ಕಾರ್ಯಕಾರಿಣಿಯ ಸದಸ್ಯರೂ ಆಗಿರು ಸಿನ್ಹಾ ತಿಳಿಸಿದ್ದಾರೆ.</p>.<p>ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ವರುಣ್ ಅವರು ಪಶ್ಚಿಮ ಬಂಗಾಳ ರಾಜ್ಯ ಉಸ್ತುವಾರಿಯೂ ಹೌದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ (ಪಿಟಿಐ): </strong>ಭಾರತೀಯ ಕ್ರಿಕೆಟ್ ತಂಡ ಮಾಜಿ ನಾಯಕ ಸೌರವ್ ಗಂಗೂಲಿ ಅವರಿಗೆ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಭಾರತೀಯ ಜನತಾ ಪಕ್ಷ ಪ್ರಸ್ತಾವ ಮುಂದಿಟ್ಟಿದೆ.</p>.<p>‘ನವೆಂಬರ್ತಿಂಗಳ ಮಧ್ಯಭಾಗದಲ್ಲಿ ನವದೆಹಲಿಯಲ್ಲಿ ಗಂಗೂಲಿ ಅವರೊಂದಿಗೆ ಪಕ್ಷ ಮುಖಂಡ ವರುಣ್ ಗಾಂಧಿ ಅವರು ಸಹಜವಾಗಿ ಈ ಬಗ್ಗೆ ಚರ್ಚಿಸಿದ್ದರು ’ಎಂದು ಪಶ್ವಿಮ ಬಂಗಾಳ ಬಿಜೆಪಿ ಘಟಕದ ಅಧ್ಯಕ ರಾಹುಲ್ ಸಿನ್ಹಾ ತಿಳಿಸಿದ್ದಾರೆ.</p>.<p>‘ಅವರು (ವರುಣ್) ಆಹ್ವಾನ ನೀಡಿದ್ದಾರೆ. ಆದರೆ ಗಂಗೂಲಿ ಅವರು ಪ್ರಸ್ತಾವದ ತಮ್ಮ ನಿರ್ಧಾರವನ್ನು ಸ್ಪಷ್ಟ ಪಡಿಸಿಲ್ಲ. ವಿಚಾರ ಮಾಡಿ ದ ಬಳಿಕ ಚುನಾವಣೆಯಲ್ಲಿ ಸ್ಪರ್ಧಿಸಬೇಕೆ ಅಥವಾ ಬೇಡವೇ ಎಂಬ ಬಗ್ಗೆ ನಿರ್ಧರಿಸುವುದಾಗಿ ಹೇಳಿದ್ದಾರೆ’ ಎಂದು ಪಕ್ಷ ರಾಷ್ಟ್ರೀಯ ಕಾರ್ಯಕಾರಿಣಿಯ ಸದಸ್ಯರೂ ಆಗಿರು ಸಿನ್ಹಾ ತಿಳಿಸಿದ್ದಾರೆ.</p>.<p>ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ವರುಣ್ ಅವರು ಪಶ್ಚಿಮ ಬಂಗಾಳ ರಾಜ್ಯ ಉಸ್ತುವಾರಿಯೂ ಹೌದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>