<p><strong>ಜಮ್ಮು (ಪಿಟಿಐ/ಐಎಎನ್ಎಸ್)</strong>: ಪಾಕಿಸ್ತಾನದ ಸೇನಾ ಪಡೆಗಳು ಪದೇಪದೇ ಕದನವಿರಾಮ ಉಲ್ಲಂಘಿಸಿದ್ದರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತ-ಪಾಕ್ ಗಡಿಗುಂಟ ಶುಕ್ರವಾರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಯಾವುದೇ ಪರಿಸ್ಥಿತಿ ಎದುರಿಸಲು ಭಾರತದ ಸೇನಾಪಡೆಗಳು ಕಟ್ಟೆಚ್ಚರ ವಹಿಸಿವೆ.<br /> <br /> ಜಮ್ಮುವಿನಿಂದ 250 ಕಿ.ಮೀ. ದೂರದಲ್ಲಿರುವ ಪೂಂಚ್ ವಲಯದ ಕೃಷ್ಣಾ ಘಾಟಿ ಪ್ರದೇಶದಲ್ಲಿ ಶುಕ್ರವಾರ ಮಧ್ಯಾಹ್ನವೂ ಪಾಕ್ ಪಡೆಗಳು ಭಾರತದ ಸೈನಿಕರ ಮೇಲೆ ಗುಂಡು ಹಾರಿಸಿವೆ. ಪಾಕ್ ಸೈನಿಕರನ್ನು ಹಿಮ್ಮೆಟ್ಟಿಸಲು ಭಾರತದ ಸೈನಿಕರು ಸಂಯಮದಿಂದಲೇ ಪ್ರತಿ ದಾಳಿ ನಡೆಸಿದರು. ಈ ಗುಂಡಿನ ಚಕಮಕಿ ಅರ್ಧ ಗಂಟೆಗಳ ಕಾಲ ನಡೆಯಿತು. ಭಾರತದ ಸೈನಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಸೇನಾ ಮೂಲಗಳು ತಿಳಿಸಿವೆ.<br /> <br /> ಇದೇ ಪ್ರದೇಶದಲ್ಲಿ ಗುರುವಾರ ಸಂಜೆ 5 ಗಂಟೆಯಿಂದ ರಾತ್ರಿ 9.30ರವರೆಗೆ ಭಾರತದ ಗಡಿ ಠಾಣೆಗಳ ಮೇಲೆ ಪಾಕ್ ಸೈನಿಕರು ಗುಂಡಿನ ದಾಳಿ ನಡೆಸಿದ್ದರು ಎಂದು ಸೇನಾ ವಕ್ತಾರ ಕರ್ನಲ್ ಆರ್. ಕೆ. ಪಲ್ಟಾ ತಿಳಿಸಿದ್ದಾರೆ.<br /> <br /> <strong>ಬಸ್ ಸೇವೆ ಸ್ಥಗಿತ: </strong>ಭಾರತೀಯ ಯೋಧರ ಹತ್ಯೆಯ ಹಿನ್ನೆಲೆಯಲ್ಲಿ ಉಂಟಾಗಿರುವ ತ್ವೇಷಮಯ ಸನ್ನಿವೇಶಕ್ಕೆ ತುಪ್ಪ ಸುರಿಯುವಂತೆ ಪಾಕ್ ಆಕ್ರಮಿತ ಕಾಶ್ಮೀರ ಹಾಗೂ ಜಮ್ಮು ಮತ್ತು ಕಾಶ್ಮೀರ ನಡುವಿನ ಬಸ್ ಸಂಚಾರವನ್ನು ಪಾಕಿಸ್ತಾನ ರದ್ದುಗೊಳಿಸಿದೆ. ಇದರಿಂದ ಪ್ರವಾಸಿಗರು ಪರದಾಡುವಂತಾಗಿದೆ. ಸರಕು ಸಾಗಣೆ ಸೇವೆಯೂ ಸ್ಥಗಿತಗೊಂಡಿದೆ.<br /> <br /> ಪಾಕ್ ಆಕ್ರಮಿತ ಕಾಶ್ಮೀರಕ್ಕೆ ತೆರಳುತ್ತಿದ್ದ 65ಕ್ಕೂ ಹೆಚ್ಚು ತರಕಾರಿ ಲಾರಿಗಳನ್ನು ಜಮ್ಮು ಮತ್ತು ಕಾಶ್ಮೀರದ ಚೆಕ್ಪೋಸ್ಟ್ಗಳಲ್ಲಿ ತಡೆಹಿಡಿಯಲಾಗಿದೆ.<br /> <br /> <strong>ಇಸ್ಲಾಮಾಬಾದ್ ವರದಿ:</strong> ಕದನ ವಿರಾಮ ಉಲ್ಲಂಘನೆಗೆ ಸಂಬಂಧಿಸಿದಂತೆ ಭಾರತ ಹಾಗೂ ಪಾಕಿಸ್ತಾನದ ನಡುವೆ ಶುಕ್ರವಾರ ಕೂಡ ವಾಕ್ಸಮರ ಮುಂದುವರಿದಿದೆ.<br /> <br /> ಪಾಕ್ ವಿದೇಶಾಂಗ ಕಾರ್ಯದರ್ಶಿ ಜಲೀಲ್ ಅಬ್ಬಾಸ್ ಜಿಲಾನಿ ಅವರು ಭಾರತೀಯ ಹೈಕಮಿಷನರ್ ಶರತ್ ಸಭರವಾಲ್ ಅವರನ್ನು ಕರೆಸಿಕೊಂಡು, ಭಟ್ಟಲ್ ವಲಯದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಪಾಕ್ ಯೋಧನೊಬ್ಬ ಮೃತಪಟ್ಟಿರುವ ಬಗ್ಗೆ ಖಂಡನೆ ವ್ಯಕ್ತಪಡಿಸಿದ್ದಾರೆ.<br /> <br /> ಕದನ ವಿರಾಮ ಉಲ್ಲಂಘನೆಯ ವಿಚಾರವನ್ನು ವಿಶ್ವಸಂಸ್ಥೆ ವೀಕ್ಷಕರ ಮೂಲಕ ಬಗೆಹರಿಸಿಕೊಳ್ಳುವ ಪಾಕ್ ಪ್ರಸ್ತಾಪವನ್ನು ಭಾರತ ಮತ್ತೊಮ್ಮೆ ತಳ್ಳಿಹಾಕಿದೆ.<br /> <br /> ಈ ವಿಚಾರದಲ್ಲಿ ಮೂರನೆಯವರ ಮಧ್ಯಸ್ಥಿಕೆಯ ಅಗತ್ಯವಿಲ್ಲ ಎಂದು ಅದು ಸ್ಪಷ್ಟವಾಗಿ ತಿಳಿಸಿದೆ. ಈ ನಡುವೆ ರಕ್ಷಣಾ ಸಚಿವ ಎ. ಕೆ. ಆಂಟನಿ, ಸೈನಿಕರನ್ನು ಹತ್ಯೆ ಮಾಡಿದ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದಿದ್ದಾರೆ. ಭದ್ರತಾ ಪಡೆಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇಡಲಾಗಿದ್ದು, ಆತಂಕಪಡುವ ಅಗತ್ಯ ಇಲ್ಲ ಎಂದೂ ಭರವಸೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು (ಪಿಟಿಐ/ಐಎಎನ್ಎಸ್)</strong>: ಪಾಕಿಸ್ತಾನದ ಸೇನಾ ಪಡೆಗಳು ಪದೇಪದೇ ಕದನವಿರಾಮ ಉಲ್ಲಂಘಿಸಿದ್ದರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತ-ಪಾಕ್ ಗಡಿಗುಂಟ ಶುಕ್ರವಾರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಯಾವುದೇ ಪರಿಸ್ಥಿತಿ ಎದುರಿಸಲು ಭಾರತದ ಸೇನಾಪಡೆಗಳು ಕಟ್ಟೆಚ್ಚರ ವಹಿಸಿವೆ.<br /> <br /> ಜಮ್ಮುವಿನಿಂದ 250 ಕಿ.ಮೀ. ದೂರದಲ್ಲಿರುವ ಪೂಂಚ್ ವಲಯದ ಕೃಷ್ಣಾ ಘಾಟಿ ಪ್ರದೇಶದಲ್ಲಿ ಶುಕ್ರವಾರ ಮಧ್ಯಾಹ್ನವೂ ಪಾಕ್ ಪಡೆಗಳು ಭಾರತದ ಸೈನಿಕರ ಮೇಲೆ ಗುಂಡು ಹಾರಿಸಿವೆ. ಪಾಕ್ ಸೈನಿಕರನ್ನು ಹಿಮ್ಮೆಟ್ಟಿಸಲು ಭಾರತದ ಸೈನಿಕರು ಸಂಯಮದಿಂದಲೇ ಪ್ರತಿ ದಾಳಿ ನಡೆಸಿದರು. ಈ ಗುಂಡಿನ ಚಕಮಕಿ ಅರ್ಧ ಗಂಟೆಗಳ ಕಾಲ ನಡೆಯಿತು. ಭಾರತದ ಸೈನಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಸೇನಾ ಮೂಲಗಳು ತಿಳಿಸಿವೆ.<br /> <br /> ಇದೇ ಪ್ರದೇಶದಲ್ಲಿ ಗುರುವಾರ ಸಂಜೆ 5 ಗಂಟೆಯಿಂದ ರಾತ್ರಿ 9.30ರವರೆಗೆ ಭಾರತದ ಗಡಿ ಠಾಣೆಗಳ ಮೇಲೆ ಪಾಕ್ ಸೈನಿಕರು ಗುಂಡಿನ ದಾಳಿ ನಡೆಸಿದ್ದರು ಎಂದು ಸೇನಾ ವಕ್ತಾರ ಕರ್ನಲ್ ಆರ್. ಕೆ. ಪಲ್ಟಾ ತಿಳಿಸಿದ್ದಾರೆ.<br /> <br /> <strong>ಬಸ್ ಸೇವೆ ಸ್ಥಗಿತ: </strong>ಭಾರತೀಯ ಯೋಧರ ಹತ್ಯೆಯ ಹಿನ್ನೆಲೆಯಲ್ಲಿ ಉಂಟಾಗಿರುವ ತ್ವೇಷಮಯ ಸನ್ನಿವೇಶಕ್ಕೆ ತುಪ್ಪ ಸುರಿಯುವಂತೆ ಪಾಕ್ ಆಕ್ರಮಿತ ಕಾಶ್ಮೀರ ಹಾಗೂ ಜಮ್ಮು ಮತ್ತು ಕಾಶ್ಮೀರ ನಡುವಿನ ಬಸ್ ಸಂಚಾರವನ್ನು ಪಾಕಿಸ್ತಾನ ರದ್ದುಗೊಳಿಸಿದೆ. ಇದರಿಂದ ಪ್ರವಾಸಿಗರು ಪರದಾಡುವಂತಾಗಿದೆ. ಸರಕು ಸಾಗಣೆ ಸೇವೆಯೂ ಸ್ಥಗಿತಗೊಂಡಿದೆ.<br /> <br /> ಪಾಕ್ ಆಕ್ರಮಿತ ಕಾಶ್ಮೀರಕ್ಕೆ ತೆರಳುತ್ತಿದ್ದ 65ಕ್ಕೂ ಹೆಚ್ಚು ತರಕಾರಿ ಲಾರಿಗಳನ್ನು ಜಮ್ಮು ಮತ್ತು ಕಾಶ್ಮೀರದ ಚೆಕ್ಪೋಸ್ಟ್ಗಳಲ್ಲಿ ತಡೆಹಿಡಿಯಲಾಗಿದೆ.<br /> <br /> <strong>ಇಸ್ಲಾಮಾಬಾದ್ ವರದಿ:</strong> ಕದನ ವಿರಾಮ ಉಲ್ಲಂಘನೆಗೆ ಸಂಬಂಧಿಸಿದಂತೆ ಭಾರತ ಹಾಗೂ ಪಾಕಿಸ್ತಾನದ ನಡುವೆ ಶುಕ್ರವಾರ ಕೂಡ ವಾಕ್ಸಮರ ಮುಂದುವರಿದಿದೆ.<br /> <br /> ಪಾಕ್ ವಿದೇಶಾಂಗ ಕಾರ್ಯದರ್ಶಿ ಜಲೀಲ್ ಅಬ್ಬಾಸ್ ಜಿಲಾನಿ ಅವರು ಭಾರತೀಯ ಹೈಕಮಿಷನರ್ ಶರತ್ ಸಭರವಾಲ್ ಅವರನ್ನು ಕರೆಸಿಕೊಂಡು, ಭಟ್ಟಲ್ ವಲಯದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಪಾಕ್ ಯೋಧನೊಬ್ಬ ಮೃತಪಟ್ಟಿರುವ ಬಗ್ಗೆ ಖಂಡನೆ ವ್ಯಕ್ತಪಡಿಸಿದ್ದಾರೆ.<br /> <br /> ಕದನ ವಿರಾಮ ಉಲ್ಲಂಘನೆಯ ವಿಚಾರವನ್ನು ವಿಶ್ವಸಂಸ್ಥೆ ವೀಕ್ಷಕರ ಮೂಲಕ ಬಗೆಹರಿಸಿಕೊಳ್ಳುವ ಪಾಕ್ ಪ್ರಸ್ತಾಪವನ್ನು ಭಾರತ ಮತ್ತೊಮ್ಮೆ ತಳ್ಳಿಹಾಕಿದೆ.<br /> <br /> ಈ ವಿಚಾರದಲ್ಲಿ ಮೂರನೆಯವರ ಮಧ್ಯಸ್ಥಿಕೆಯ ಅಗತ್ಯವಿಲ್ಲ ಎಂದು ಅದು ಸ್ಪಷ್ಟವಾಗಿ ತಿಳಿಸಿದೆ. ಈ ನಡುವೆ ರಕ್ಷಣಾ ಸಚಿವ ಎ. ಕೆ. ಆಂಟನಿ, ಸೈನಿಕರನ್ನು ಹತ್ಯೆ ಮಾಡಿದ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದಿದ್ದಾರೆ. ಭದ್ರತಾ ಪಡೆಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇಡಲಾಗಿದ್ದು, ಆತಂಕಪಡುವ ಅಗತ್ಯ ಇಲ್ಲ ಎಂದೂ ಭರವಸೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>