<p>ನವದೆಹಲಿ (ಪಿಟಿಐ): ತನ್ನಿಂದ ನೇಮಕಗೊಂಡ ಕೇಂದ್ರೀಯ ವಿಶೇಷಾಧಿಕಾರ ಸಮಿತಿ (ಸಿಇಸಿ) ನೀಡಿರುವ ಗಣಿಗಾರಿಕೆ ಸಂಬಂಧಿತ ಶಿಫಾರಸುಗಳನ್ನು ಸುಪ್ರೀಂಕೋರ್ಟ್ ಶುಕ್ರವಾರ ಅಂಗೀಕರಿಸಿತು. <br /> <br /> ಈಗಾಗಲೇ ನೀಡಲಾಗಿರುವ ಗಣಿ ಗುತ್ತಿಗೆಗಳಲ್ಲಿ ಮರುವಸತಿ ಯೋಜನೆಗಳನ್ನು ಅನುಷ್ಠಾನಗೊಳಿಸುವವರೆಗೆ ಕರ್ನಾಟಕದ ಬಳ್ಳಾರಿ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಹೊಸ ಗಣಿಗಾರಿಕೆ ಗುತ್ತಿಗೆಗಳನ್ನು ನೀಡಬಾರದು ಎಂಬುದಾಗಿ ಸಿಇಸಿ ಶಿಫಾರಸು ಮಾಡಿತ್ತು.</p>.<p>ಮುಖ್ಯ ನ್ಯಾಯಮೂರ್ತಿ ಎಸ್.ಎಚ್. ಕಪಾಡಿಯಾ ನೇತೃತ್ವದ ಅರಣ್ಯ ಪೀಠವು ~ಎಲ್ಲ ವರ್ಗದ ಗಣಿಗಾರಿಕೆಗಳಲ್ಲಿ ಮರುವಸತಿ ಯೋಜನೆಯನ್ನು ತತ್ ಕ್ಷಣವೇ ಜಾರಿಗೊಳಿಸುವಂತೆ ನಿರ್ದೇಶನ ನೀಡಿತು. ಮರುವಸತಿ ಯೋಜನೆಯ ಸಿದ್ಧತೆ, ಜಾರಿ ಮತ್ತು ನಿಗಾವನ್ನು ಸಿಇಸಿಯ ಮೇಲುಸ್ತುವಾರಿಯಲ್ಲಿ ಕೈಗೊಳ್ಳಬೇಕು ಎಂದೂ ಪೀಠವು ಸೂಚಿಸಿತು.<br /> <br /> ನ್ಯಾಯಮೂರ್ತಿ ಆಫ್ತಾಬ್ ಆಲಂ ಮತ್ತು ಸ್ವತಂತ್ರ ಕುಮಾರ್ ಅವರನ್ನೂ ಒಳಗೊಂಡ ಪೀಠವು ಸ್ಟಾಕ್ ಯಾರ್ಡ್ ಗಳ ವಿಲೇವಾರಿ ಬಗ್ಗೆ ಸಲಹೆಗಳನ್ನು ನೀಡುವಂತೆಯೂ ಸಿವಿಸಿಗೆ ಪೀಠ ಸೂಚನೆ ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ತನ್ನಿಂದ ನೇಮಕಗೊಂಡ ಕೇಂದ್ರೀಯ ವಿಶೇಷಾಧಿಕಾರ ಸಮಿತಿ (ಸಿಇಸಿ) ನೀಡಿರುವ ಗಣಿಗಾರಿಕೆ ಸಂಬಂಧಿತ ಶಿಫಾರಸುಗಳನ್ನು ಸುಪ್ರೀಂಕೋರ್ಟ್ ಶುಕ್ರವಾರ ಅಂಗೀಕರಿಸಿತು. <br /> <br /> ಈಗಾಗಲೇ ನೀಡಲಾಗಿರುವ ಗಣಿ ಗುತ್ತಿಗೆಗಳಲ್ಲಿ ಮರುವಸತಿ ಯೋಜನೆಗಳನ್ನು ಅನುಷ್ಠಾನಗೊಳಿಸುವವರೆಗೆ ಕರ್ನಾಟಕದ ಬಳ್ಳಾರಿ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಹೊಸ ಗಣಿಗಾರಿಕೆ ಗುತ್ತಿಗೆಗಳನ್ನು ನೀಡಬಾರದು ಎಂಬುದಾಗಿ ಸಿಇಸಿ ಶಿಫಾರಸು ಮಾಡಿತ್ತು.</p>.<p>ಮುಖ್ಯ ನ್ಯಾಯಮೂರ್ತಿ ಎಸ್.ಎಚ್. ಕಪಾಡಿಯಾ ನೇತೃತ್ವದ ಅರಣ್ಯ ಪೀಠವು ~ಎಲ್ಲ ವರ್ಗದ ಗಣಿಗಾರಿಕೆಗಳಲ್ಲಿ ಮರುವಸತಿ ಯೋಜನೆಯನ್ನು ತತ್ ಕ್ಷಣವೇ ಜಾರಿಗೊಳಿಸುವಂತೆ ನಿರ್ದೇಶನ ನೀಡಿತು. ಮರುವಸತಿ ಯೋಜನೆಯ ಸಿದ್ಧತೆ, ಜಾರಿ ಮತ್ತು ನಿಗಾವನ್ನು ಸಿಇಸಿಯ ಮೇಲುಸ್ತುವಾರಿಯಲ್ಲಿ ಕೈಗೊಳ್ಳಬೇಕು ಎಂದೂ ಪೀಠವು ಸೂಚಿಸಿತು.<br /> <br /> ನ್ಯಾಯಮೂರ್ತಿ ಆಫ್ತಾಬ್ ಆಲಂ ಮತ್ತು ಸ್ವತಂತ್ರ ಕುಮಾರ್ ಅವರನ್ನೂ ಒಳಗೊಂಡ ಪೀಠವು ಸ್ಟಾಕ್ ಯಾರ್ಡ್ ಗಳ ವಿಲೇವಾರಿ ಬಗ್ಗೆ ಸಲಹೆಗಳನ್ನು ನೀಡುವಂತೆಯೂ ಸಿವಿಸಿಗೆ ಪೀಠ ಸೂಚನೆ ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>