<p>ನವದೆಹಲಿ (ಪಿಟಿಐ): ಉಭಯ ದೇಶಗಳ ಗೃಹ ಕಾರ್ಯದರ್ಶಿಗಳ ಮಟ್ಟದ ಮಾತುಕತೆಗೆ ಹೊಸದಾಗಿ ದಿನ ನಿಗದಿಪಡಿಸುವಂತೆ ಭಾರತವು ಪಾಕಿಸ್ತಾನವನ್ನು ಕೇಳಿದೆ.<br /> <br /> ಆಂತರಿಕ ಭದ್ರತೆಗೆ ಸಂಬಂಧಿಸಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಈ ತಿಂಗಳ 16ರಂದು ನಡೆಯಲಿರುವುದರಿಂದ ಪಾಕಿಸ್ತಾನ ಸಲಹೆ ನೀಡಿದಂತೆ ಆ ದಿನ ಗೃಹ ಕಾರ್ಯದರ್ಶಿ ಆರ್.ಕೆ. ಸಿಂಗ್ ಪಾಕ್ಗೆ ತೆರಳಲು ಸಾಧ್ಯವಾಗುವುದಿಲ್ಲ ಎಂದು ಭಾರತ ತಿಳಿಸಿದೆ.<br /> <br /> ಸಂಸತ್ತಿನ ಬಜೆಟ್ ಅಧಿವೇಶನ ಮೇ 22ರಂದು ಅಂತ್ಯಗೊಳ್ಳಲಿದ್ದು ಆನಂತರವೇ ಮಾತುಕತೆಗೆ ದಿನ ನಿಗದಿಪಡಿಸುವಂತೆ ಭಾರತ ಕೋರಿದೆ. <br /> <br /> ಖಾಸಗಿ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದ ಪಾಕ್ ಅಧ್ಯಕ್ಷ ಆಸೀಫ್ ಅಲಿ ಜರ್ದಾರಿ ಅವರಿಗೆ ಪ್ರಧಾನಿ ಮನಮೋಹನ್ ಸಿಂಗ್ ಔತಣಕೂಟ ಏರ್ಪಡಿಸಿದ್ದರಿಂದ ಎರಡೂ ದೇಶಗಳ ಬಾಂಧವ್ಯ ಹೊಸರೂಪ ಪಡೆದಿದ್ದು, ಈ ಸಂದರ್ಭದಲ್ಲಿ ಗೃಹ ಕಾರ್ಯದರ್ಶಿ ಮಟ್ಟದ ದ್ವಿಪಕ್ಷೀಯ ಸಭೆ ನಡೆಸುವ ಪ್ರಸ್ತಾಪ ಬಂದಿದೆ.<br /> <br /> ಮುಂಬೈ ದಾಳಿಯ ಸೂತ್ರಧಾರ ಹಫೀಜ್ ಸಯೀದ್ ಹಾಗೂ ಇತರ ಉಗ್ರರ ಮೇಲೆ ಕ್ರಮ ಕೈಗೊಳ್ಳುವ ಬಗ್ಗೆ ಪ್ರಧಾನಿ ಸಿಂಗ್ ಪ್ರಸ್ತಾಪಿಸಿದಾಗ, `ಈ ವಿಚಾರದಲ್ಲಿ ಮತ್ತಷ್ಟು ಚರ್ಚೆ ಅವಶ್ಯ, ಗೃಹ ಕಾರ್ಯದರ್ಶಿಗಳ ಮಾತುಕತೆಯಲ್ಲಿ ಈ ಕುರಿತು ವಿಸ್ತ್ರತ ಚರ್ಚೆ ನಡೆಸಬಹುದು~ ಎಂದು ಜರ್ದಾರಿ ಹೇಳಿದರು ಎನ್ನಲಾಗಿದೆ. <br /> <br /> ಕಳೆದ ವರ್ಷದ ಡಿಸೆಂಬರ್ 22-23ರಂದು ಮಾತುಕತೆ ನಡೆಸುವಂತೆ ಭಾರತ ಪ್ರಸ್ತಾಪ ಮುಂದಿಟ್ಟಿತ್ತು. ಆ ಸಂದರ್ಭದಲ್ಲಿ ಪಾಕಿಸ್ತಾನದಲ್ಲಿ ಉದ್ಭವಿಸಿದ್ದ ಆಂತರಿಕ ರಾಜಕೀಯ ಬಿಕ್ಕಟ್ಟಿನಿಂದಾಗಿ ಪಾಕ್ ಮಾತುಕತೆಗೆ ಸಮ್ಮತಿ ಸೂಚಿಸಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ಉಭಯ ದೇಶಗಳ ಗೃಹ ಕಾರ್ಯದರ್ಶಿಗಳ ಮಟ್ಟದ ಮಾತುಕತೆಗೆ ಹೊಸದಾಗಿ ದಿನ ನಿಗದಿಪಡಿಸುವಂತೆ ಭಾರತವು ಪಾಕಿಸ್ತಾನವನ್ನು ಕೇಳಿದೆ.<br /> <br /> ಆಂತರಿಕ ಭದ್ರತೆಗೆ ಸಂಬಂಧಿಸಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಈ ತಿಂಗಳ 16ರಂದು ನಡೆಯಲಿರುವುದರಿಂದ ಪಾಕಿಸ್ತಾನ ಸಲಹೆ ನೀಡಿದಂತೆ ಆ ದಿನ ಗೃಹ ಕಾರ್ಯದರ್ಶಿ ಆರ್.ಕೆ. ಸಿಂಗ್ ಪಾಕ್ಗೆ ತೆರಳಲು ಸಾಧ್ಯವಾಗುವುದಿಲ್ಲ ಎಂದು ಭಾರತ ತಿಳಿಸಿದೆ.<br /> <br /> ಸಂಸತ್ತಿನ ಬಜೆಟ್ ಅಧಿವೇಶನ ಮೇ 22ರಂದು ಅಂತ್ಯಗೊಳ್ಳಲಿದ್ದು ಆನಂತರವೇ ಮಾತುಕತೆಗೆ ದಿನ ನಿಗದಿಪಡಿಸುವಂತೆ ಭಾರತ ಕೋರಿದೆ. <br /> <br /> ಖಾಸಗಿ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದ ಪಾಕ್ ಅಧ್ಯಕ್ಷ ಆಸೀಫ್ ಅಲಿ ಜರ್ದಾರಿ ಅವರಿಗೆ ಪ್ರಧಾನಿ ಮನಮೋಹನ್ ಸಿಂಗ್ ಔತಣಕೂಟ ಏರ್ಪಡಿಸಿದ್ದರಿಂದ ಎರಡೂ ದೇಶಗಳ ಬಾಂಧವ್ಯ ಹೊಸರೂಪ ಪಡೆದಿದ್ದು, ಈ ಸಂದರ್ಭದಲ್ಲಿ ಗೃಹ ಕಾರ್ಯದರ್ಶಿ ಮಟ್ಟದ ದ್ವಿಪಕ್ಷೀಯ ಸಭೆ ನಡೆಸುವ ಪ್ರಸ್ತಾಪ ಬಂದಿದೆ.<br /> <br /> ಮುಂಬೈ ದಾಳಿಯ ಸೂತ್ರಧಾರ ಹಫೀಜ್ ಸಯೀದ್ ಹಾಗೂ ಇತರ ಉಗ್ರರ ಮೇಲೆ ಕ್ರಮ ಕೈಗೊಳ್ಳುವ ಬಗ್ಗೆ ಪ್ರಧಾನಿ ಸಿಂಗ್ ಪ್ರಸ್ತಾಪಿಸಿದಾಗ, `ಈ ವಿಚಾರದಲ್ಲಿ ಮತ್ತಷ್ಟು ಚರ್ಚೆ ಅವಶ್ಯ, ಗೃಹ ಕಾರ್ಯದರ್ಶಿಗಳ ಮಾತುಕತೆಯಲ್ಲಿ ಈ ಕುರಿತು ವಿಸ್ತ್ರತ ಚರ್ಚೆ ನಡೆಸಬಹುದು~ ಎಂದು ಜರ್ದಾರಿ ಹೇಳಿದರು ಎನ್ನಲಾಗಿದೆ. <br /> <br /> ಕಳೆದ ವರ್ಷದ ಡಿಸೆಂಬರ್ 22-23ರಂದು ಮಾತುಕತೆ ನಡೆಸುವಂತೆ ಭಾರತ ಪ್ರಸ್ತಾಪ ಮುಂದಿಟ್ಟಿತ್ತು. ಆ ಸಂದರ್ಭದಲ್ಲಿ ಪಾಕಿಸ್ತಾನದಲ್ಲಿ ಉದ್ಭವಿಸಿದ್ದ ಆಂತರಿಕ ರಾಜಕೀಯ ಬಿಕ್ಕಟ್ಟಿನಿಂದಾಗಿ ಪಾಕ್ ಮಾತುಕತೆಗೆ ಸಮ್ಮತಿ ಸೂಚಿಸಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>