ನವದೆಹಲಿ: ಕರ್ನಾಟಕದಲ್ಲಿ ಗ್ರಾಮೀಣ ಜನರಿಗೆ ನೈರ್ಮಲ್ಯ ಸೌಲಭ್ಯಗಳನ್ನು ಕಾನೂನುಬದ್ಧ ಹಕ್ಕನ್ನಾಗಿಸುವ ಹೊಸ ಮಸೂದೆಯನ್ನು ಮುಂಬರುವ ರಾಜ್ಯ ವಿಧಾನಸಭೆ ಅಧಿವೇಶನದಲ್ಲಿ ಮಂಡಿಸಲಾಗುವುದು.
ಇದಕ್ಕಾಗಿ ‘ಕರ್ನಾಟಕ ಗ್ರಾಮೀಣ ನೈರ್ಮಲ್ಯ ಸೌಲಭ್ಯಗಳ ಖಾತ್ರಿ ಮಸೂದೆ– 2014’ರ ಕರಡು ಸಿದ್ಧಗೊಂಡಿದೆ. ಗ್ರಾಮೀಣ ನೈರ್ಮಲ್ಯ ಯೋಜನೆಗಳಿಗೆ ಬಜೆಟ್ ಅನುದಾನ ಕಲ್ಪಿಸುವುದು ಹಾಗೂ ಈ ಯೋಜನೆಗಳಿಗೆ ಬೇಕಾದ ಭೂಸ್ವಾಧೀನಕ್ಕೆ ಅನುವು ಮಾಡಿಕೊಡುವ ಉದ್ದೇಶವನ್ನು ಮಸೂದೆ ಹೊಂದಿದೆ.