ನವದೆಹಲಿ: ಚೀನಾದ ಸೇನೆ ಹಿಂದೆ ಸರಿದರೆ ಮಾತ್ರ ಭೂತಾನ್ನ ದೋಕ ಲಾ ಪ್ರದೇಶದಿಂದ ಭಾರತದ ಸೇನೆಯನ್ನು ವಾಪಸ್ ಕರೆಸಿಕೊಳ್ಳಲಾಗುವುದು ಎಂದು ಭಾರತ ದೃಢವಾಗಿ ಹೇಳಿದೆ. ಆದರೆ ಬಿಕ್ಕಟ್ಟು ಪರಿಹಾರಕ್ಕೆ ರಾಜತಾಂತ್ರಿಕ ಮಾರ್ಗದ ಮೂಲಕ ಪ್ರಯತ್ನ ನಡೆಸಲಾಗುವುದು ಎಂದೂ ತಿಳಿಸಿದೆ.
ಚೀನಾ ಗಡಿ ಬಿಕ್ಕಟ್ಟು ಮತ್ತು ಕಾಶ್ಮೀರದ ಪರಿಸ್ಥಿತಿ ಬಗ್ಗೆ ವಿರೋಧ ಪಕ್ಷಗಳಿಗೆ ಮಾಹಿತಿ ನೀಡಲು ಕರೆದ ಸಭೆಯಲ್ಲಿ ಸರ್ಕಾರ ಈ ವಿಚಾರ ಹೇಳಿದೆ.